Homeರಾಜಕೀಯಯುಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ರಾಜೀನಾಮೆ

ಯುಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ರಾಜೀನಾಮೆ

ರಾಜ್ಯ ಘಟಕದ ಮುಖ್ಯಸ್ಥರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ

- Advertisement -
- Advertisement -

ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ವತಂತ್ರ ದೇವ್‌ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಮೂರು ದಿನಗಳ ಹಿಂದೆ ಅವರು ಜೆಪಿ ನಡ್ಡಾ ಅವರಿಗೆ ರಾಜೀನಾಮೆ ನೀಡಿದ್ದಾರೆ ಎಂದು ಅವರ ನಿಕಟ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿವೆ. ಅವರ ಮೂರು ವರ್ಷಗಳ ಅಧಿಕಾರಾವಧಿಯು ಜುಲೈ 16 ರಂದು ಕೊನೆಗೊಂಡಿತ್ತು.

ತಾನು ದಲಿತ ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ತನ್ನ ಮೇಲೆ ದುರುದ್ದೇಶ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೂಲಕ ತಮ್ಮ ರಾಜೀನಾಮೆ ನೀಡಿದ್ದ ಕಿರಿಯ ಸಚಿವ ದಿನೇಶ್ ಖಾಟಿಕ್ ಅವರ ರಾಜೀನಾಮೆಯ ಕೆಲವೇ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯದ ನೀರಾವರಿ ಸಚಿವರೂ ಆಗಿರುವ ಸ್ವತಂತ್ರ ದೇವ್‌ ಅವರು ರಾಜೀನಾಮೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೀರಾವರಿ ಇಲಾಖೆಯ ಒಟ್ಟಾರೆ ಕಾರ್ಯನಿರ್ವಹಣೆ ಮಾಡುತ್ತಿದ್ದ ಸ್ವತಂತ್ರ ದೇವ್‌‌ ಮತ್ತು ಅವರ ಅಧಿಕಾರಿಗಳ ತಂಡದೊಂದಿಗೆ ಕಿರಿಯ ಸಚಿವರಾಗಿದ್ದ ದಿನೇಸ್‌ ಖಟಿಕ್ ಅಸಮಾಧಾನಗೊಂಡಿದ್ದರು ಎಂದು ವರದಿಯಾಗಿದೆ.

ದಿನೇಶ್‌ ಖಟಿಕ್ ಅವರು ಸಿಎಂ ಆದಿತ್ಯನಾಥ್ ಅವರನ್ನು ಭೇಟಿಯಾದ ನಂತರ ತಮ್ಮ ಭಿನ್ನಾಭಿಪ್ರಾಯಗಳನ್ನು ಹೊರಹಾಕಿದ್ದಾರೆ. ಆದರೆ ಆರ್‌ಎಸ್‌ಎಸ್‌ನೊಂದಿಗಿನ ಸ್ವತಂತ್ರ ದೇವ್‌ ಅವರ ನಿಕಟ ಸಂಬಂಧವು ಯುಪಿ ಬಿಜೆಪಿ ಹುದ್ದೆಯನ್ನು ಬಿಟ್ಟುಕೊಡುವಂತೆ ಮಾಡಿರುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

2014ರ ಲೋಕಸಭೆ ಚುನಾವಣೆಯ ನಂತರ ಬಿಜೆಪಿಯನ್ನು ಬೆಂಬಲಿಸುತ್ತಿರುವ ದಲಿತರು ಮತ್ತು ಸಾಮಾಜಿಕವಾಗಿ ತುಳಿತಕ್ಕೊಳಗಾದವರ ಬಗ್ಗೆ ಸೌಹಾರ್ದಯುತವಾಗಿ ವರ್ತಿಸುವ ಅಗತ್ಯವನ್ನು ಆರ್‌ಎಸ್‌ಎಸ್ ಇತ್ತೀಚೆಗೆ ಒತ್ತಿ ಹೇಳುತ್ತಿದೆ.

ಸ್ವತಂತ್ರ ದೇವ್‌ ಅವರಂತೆ, ದಿನೇಶ್‌ ಕಟಿಕ್ ಕೂಡಾ ಆರ್‌ಎಸ್‌ಎಸ್‌ ಜೊತೆಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 2017 ಮತ್ತು 2022 ರ ವಿಧಾನಸಭಾ ಚುನಾವಣೆಯಲ್ಲಿ ಮೀರತ್‌ನ ಹಸ್ತಿನಾಪುರ ಮೀಸಲು ಸ್ಥಾನದಿಂದ ಗೆದ್ದಿರುವ ಅವರ ಸಚಿವ ಸ್ಥಾನಕ್ಕೆ ಏರಿದ್ದರು. ದಿನೇಶ್‌ ಖಟಿಕ್‌ ಅವರ ಅಜ್ಜ ಬನ್ವಾರಿ ಖಟಿಕ್ ಮತ್ತು ತಂದೆ ದೇವೇಂದ್ರ ಕುಮಾರ್ ಕೂಡ ಆರ್‌ಎಸ್‌ಎಸ್ ಪದಾಧಿಕಾರಿಗಳಾಗಿದ್ದರು.

ವೈದ್ಯಕೀಯ ಮತ್ತು ಆರೋಗ್ಯ ಖಾತೆಯನ್ನು ಹೊಂದಿರುವ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್‌ ಮತ್ತು ಪಿಡಬ್ಲ್ಯೂಡಿ ಸಚಿವ ಜಿತಿನ್ ಪ್ರಸಾದ ಸೇರಿದಂತೆ ಇತರ ಹಲವು ಹಿರಿಯ ಸಚಿವರು, ತಮ್ಮ ಇಲಾಖೆಗಳಲ್ಲಿನ ಅಧಿಕಾರಿಗಳನ್ನು ವಿವಾದಾತ್ಮಕವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ದಿನೇಶ್‌ ಖಟಿಕ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ವಿಶೇಷವೇನೆಂದರೆ, ರಾಜ್ಯ ಘಟಕದ ಮುಖ್ಯಸ್ಥರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಪ್ರದಾಯವನ್ನು ಬಿಜೆಪಿ ಹೊಂದಿಲ್ಲ. ಸ್ವತಂತ್ರ ದೇವ್‌ ಸಿಂಗ್ ಅವರಿಗಿಂತ ಮೊದಲು, ಕಲ್ರಾಜ್ ಮಿಶ್ರಾ ಮತ್ತು ಸೂರ್ಯ ಪ್ರತಾಪ್ ಶಾಹಿ ಅವರು ಕ್ರಮವಾಗಿ 2002 ಮತ್ತು 2012 ರಲ್ಲಿ ಯುಪಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದು ಆಗ ನಡೆದ ರಾಜ್ಯ ಚುನಾವಣೆಯಲ್ಲಿ ಪಕ್ಷದ ಸೋಲಿನ ಕಾರಣಕ್ಕಾಗಿ ನಡೆದಿತ್ತು.

ಸ್ವತಂತ್ರ ಸಿಂಗ್ ಅಧಿಕಾರವಧಿಯಲ್ಲಿ ಬಿಜೆಪಿಯು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಮತ್ತೊಮ್ಮೆ ಸತತವಾಗಿ ಯುಪಿಯಲ್ಲಿ ಅಧಿಕಾರಕ್ಕೆ ಮರಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...