Homeಕರ್ನಾಟಕಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

ಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

- Advertisement -
- Advertisement -

ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಕೆಲವು ದಿನಗಳಿಂದ ಮುಂಬೈಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರನ್ನು ಮನವೊಲಿಸಲು ಟ್ರಬಲ್ ಶೂಟರ್ ಎಂದು ಕರೆಯಲ್ಪಡುವ ಡಿ.ಕೆ ಶಿವಕುಮಾರ್ ಸಹ ಮುಂಬೈ ತೆರಳಿದ್ದು, ಅಲ್ಲಿ ಅವರನ್ನು ಹೋಟೆಲ್ ಒಳಗೆ ಬಿಡದೇ ತಡೆದುದ್ದು, ಡಿ.ಕೆ.ಶಿ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಡಿ.ಕೆ.ಶಿಯನ್ನು ವಶಕ್ಕೆ ಪಡೆದಿದ್ದಾರೆ. ಇವೆಲ್ಲಾ ನಿಮಗೆ ಗೊತ್ತಿರುವ ವಿಷಯಗಳು.

ಡಿ.ಕೆ ಶಿವಕುಮಾರ್ ಹೋಟೆಲ್ ಮುಂಭಾಗದಿಂದ ಕದಲುವುದಿಲ್ಲ ಎಂದು ಹಠ ಹಿಡಿದು ನಿಂತಿರುವಾಗ, ಅವರನ್ನು ಪೊಲೀಸರು ವಶಕ್ಕೆ ಪಡೆದಾಗ ಯೂಸ್‍ಲೆಸ್ ಮುಂಬೈ ಕಾಂಗ್ರೆಸ್ ಘಟಕ ಏಕೆ ಅವರನ್ನು ಬೆಂಬಲಿಸುತ್ತಿಲ್ಲ? ರಾಷ್ಟ್ರೀಯ ಕಾಂಗ್ರೆಸ್ ನಿಮಗೆ ಕರ್ನಾಟಕ ಸರ್ಕಾರ ಉಳಿಯುವುದು ಬೇಡವೇ? ಎಂದು ಸ್ವಾತಿ ಚರ್ತುವೇದಿ ಸರಣಿ ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆಯಾಗಿರುವ ಸ್ವಾತಿ ಚತುರ್ವೇದಿಯವರನ್ನು ಈ ಹಿಂದೆ ಬಿಜೆಪಿಯ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಟ್ರೋಲ್ ಮಾಡಿದ್ದರು. ವ್ಯಕ್ತಿಗತ ನಿಂದನೆ ಮಾಡಿದ್ದರು. ಆಗ ಅವರು “ಐ ಆಮ್ ಎ ಟ್ರೋಲ್” ಎಂಬ ಪುಸ್ತಕ ಬರೆದಿದ್ದು ಅದು ಸಾಕಷ್ಟು ಪ್ರಸಿದ್ದಿಯಾಗಿತ್ತು.

ಇನ್ನು ಮೂರು ತಿಂಗಳಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಿದೆ. ಆದರೂ ಮಹಾರಾಷ್ಟ್ರ ಕಾಂಗ್ರೆಸ್ ಇಲ್ಲಿ ಡಿ.ಕೆ ಶಿವಕುಮಾರ್ ನೆರವಿಗೆ ಬಂದಿಲ್ಲ. ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಇದಿಯೋ ಇಲ್ಲವೋ? ಪ್ರಿಯ ರಾಹುಲ್ ಗಾಂಧಿಯವರೆ ದಯವಿಟ್ಟು ಗಮನಕೊಡಿ ಎಂದಿದ್ದಾರೆ.

ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಡಿ.ಕೆ ಶಿವಕುಮಾರ್‍ರನ್ನು ಆನಂತರ ಭೇಟಿಯಾಗಿದ್ದಾರೆ. ಈ ಮೊದಲು ಪೋನ್ ಮಾಡಿ ಮಾತಾಡಿದ್ದೇನೆ ಎಂದು ಟ್ವೀಟ್ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿರುವ ಸ್ವಾತಿಯವರು ನೀವೇನಾ ಕಾಂಗ್ರೆಸ್ ನ ಭಾವಿ ಅಧ್ಯಕ್ಷ ಎಂದು ವ್ಯಂಗ್ಯವಾಡಿದ್ದಾರೆ.

ನಂತರ ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿಮ್ಮ ಕೆಲವು ನಾಯಕರು ಡಿ.ಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಉಳಿದವರೆಲ್ಲಿ ಎಂದು ಟ್ವೀಟ್ ಮಾಡಿದ ಸ್ವಾತಿಯವರು ರಾಹುಲ್ ಗಾಂಧಿಯವರೆ ನೀವೇ ಖುದ್ದಾಗಿ ಡಿ.ಕೆ ಶಿವಕುಮಾರ್ ರವರ ಜೊತೆಗಿರಬೇಕು. ನಿಮ್ಮ ಪಕ್ಷದ ಮುಖಂಡರು ಪರಸ್ಪರ ಜಗಳವಾಡುತ್ತಿದ್ದಾರೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....