Homeಕರ್ನಾಟಕಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

ಡಿ.ಕೆ ಶಿವಕುಮಾರ್ ಗೆ ಬೆಂಬಲ ನೀಡದ ಮಹಾರಾಷ್ಟ್ರ ಕಾಂಗ್ರೆಸ್ ಪ್ರಯೋಜನವಿಲ್ಲದ್ದು : ಸ್ವಾತಿ ಚರ್ತುವೇದಿ

- Advertisement -
- Advertisement -

ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಕೆಲವು ದಿನಗಳಿಂದ ಮುಂಬೈಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರನ್ನು ಮನವೊಲಿಸಲು ಟ್ರಬಲ್ ಶೂಟರ್ ಎಂದು ಕರೆಯಲ್ಪಡುವ ಡಿ.ಕೆ ಶಿವಕುಮಾರ್ ಸಹ ಮುಂಬೈ ತೆರಳಿದ್ದು, ಅಲ್ಲಿ ಅವರನ್ನು ಹೋಟೆಲ್ ಒಳಗೆ ಬಿಡದೇ ತಡೆದುದ್ದು, ಡಿ.ಕೆ.ಶಿ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಡಿ.ಕೆ.ಶಿಯನ್ನು ವಶಕ್ಕೆ ಪಡೆದಿದ್ದಾರೆ. ಇವೆಲ್ಲಾ ನಿಮಗೆ ಗೊತ್ತಿರುವ ವಿಷಯಗಳು.

ಡಿ.ಕೆ ಶಿವಕುಮಾರ್ ಹೋಟೆಲ್ ಮುಂಭಾಗದಿಂದ ಕದಲುವುದಿಲ್ಲ ಎಂದು ಹಠ ಹಿಡಿದು ನಿಂತಿರುವಾಗ, ಅವರನ್ನು ಪೊಲೀಸರು ವಶಕ್ಕೆ ಪಡೆದಾಗ ಯೂಸ್‍ಲೆಸ್ ಮುಂಬೈ ಕಾಂಗ್ರೆಸ್ ಘಟಕ ಏಕೆ ಅವರನ್ನು ಬೆಂಬಲಿಸುತ್ತಿಲ್ಲ? ರಾಷ್ಟ್ರೀಯ ಕಾಂಗ್ರೆಸ್ ನಿಮಗೆ ಕರ್ನಾಟಕ ಸರ್ಕಾರ ಉಳಿಯುವುದು ಬೇಡವೇ? ಎಂದು ಸ್ವಾತಿ ಚರ್ತುವೇದಿ ಸರಣಿ ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆಯಾಗಿರುವ ಸ್ವಾತಿ ಚತುರ್ವೇದಿಯವರನ್ನು ಈ ಹಿಂದೆ ಬಿಜೆಪಿಯ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಟ್ರೋಲ್ ಮಾಡಿದ್ದರು. ವ್ಯಕ್ತಿಗತ ನಿಂದನೆ ಮಾಡಿದ್ದರು. ಆಗ ಅವರು “ಐ ಆಮ್ ಎ ಟ್ರೋಲ್” ಎಂಬ ಪುಸ್ತಕ ಬರೆದಿದ್ದು ಅದು ಸಾಕಷ್ಟು ಪ್ರಸಿದ್ದಿಯಾಗಿತ್ತು.

ಇನ್ನು ಮೂರು ತಿಂಗಳಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಿದೆ. ಆದರೂ ಮಹಾರಾಷ್ಟ್ರ ಕಾಂಗ್ರೆಸ್ ಇಲ್ಲಿ ಡಿ.ಕೆ ಶಿವಕುಮಾರ್ ನೆರವಿಗೆ ಬಂದಿಲ್ಲ. ಮಹರಾಷ್ಟ್ರದಲ್ಲಿ ಕಾಂಗ್ರೆಸ್ ಇದಿಯೋ ಇಲ್ಲವೋ? ಪ್ರಿಯ ರಾಹುಲ್ ಗಾಂಧಿಯವರೆ ದಯವಿಟ್ಟು ಗಮನಕೊಡಿ ಎಂದಿದ್ದಾರೆ.

ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ದೇವ್ರಾ ಡಿ.ಕೆ ಶಿವಕುಮಾರ್‍ರನ್ನು ಆನಂತರ ಭೇಟಿಯಾಗಿದ್ದಾರೆ. ಈ ಮೊದಲು ಪೋನ್ ಮಾಡಿ ಮಾತಾಡಿದ್ದೇನೆ ಎಂದು ಟ್ವೀಟ್ ಮಾಡಿದ್ದಕ್ಕೆ ತರಾಟೆಗೆ ತೆಗೆದುಕೊಂಡಿರುವ ಸ್ವಾತಿಯವರು ನೀವೇನಾ ಕಾಂಗ್ರೆಸ್ ನ ಭಾವಿ ಅಧ್ಯಕ್ಷ ಎಂದು ವ್ಯಂಗ್ಯವಾಡಿದ್ದಾರೆ.

ನಂತರ ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿಮ್ಮ ಕೆಲವು ನಾಯಕರು ಡಿ.ಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಉಳಿದವರೆಲ್ಲಿ ಎಂದು ಟ್ವೀಟ್ ಮಾಡಿದ ಸ್ವಾತಿಯವರು ರಾಹುಲ್ ಗಾಂಧಿಯವರೆ ನೀವೇ ಖುದ್ದಾಗಿ ಡಿ.ಕೆ ಶಿವಕುಮಾರ್ ರವರ ಜೊತೆಗಿರಬೇಕು. ನಿಮ್ಮ ಪಕ್ಷದ ಮುಖಂಡರು ಪರಸ್ಪರ ಜಗಳವಾಡುತ್ತಿದ್ದಾರೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...