Homeಮುಖಪುಟಸರ್ಕಾರದ ಮನವಿ ಧಿಕ್ಕರಿಸಿ ಮಣಿಪುರಕ್ಕೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್

ಸರ್ಕಾರದ ಮನವಿ ಧಿಕ್ಕರಿಸಿ ಮಣಿಪುರಕ್ಕೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್

- Advertisement -
- Advertisement -

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ನಡುವೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ಭೇಟಿ ಮಾಡಲು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಭಾನುವಾರ ಇಂಫಾಲ್‌ಗೆ ಆಗಮಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಕಾರಣಕ್ಕಾಗಿ ರಾಜ್ಯಕ್ಕೆ ಭೇಟಿ ನೀಡುವುದನ್ನು ಮುಂದೂಡುವಂತೆ ರಾಜ್ಯ ಬಿಜೆಪಿ ಸರ್ಕಾರ ಶನಿವಾರ ಮನವಿ ಮಾಡಿತ್ತು. ಆದರೂ ಸರ್ಕಾರದ ಮನವಿಯನ್ನು ಧಿಕ್ಕರಿಸಿ ಸ್ವಾತಿ ಮಲಿವಾಲ್ ಅವರು ಭಾನುವಾರ ಇಂಫಾಲ್‌ಗೆ ಭೇಟಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸ್ವಾತಿ ಮಲಿವಾಲ್ ಅವರು, ”ಅಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ಹೇಳುತ್ತಾರೆ, ಅದಕ್ಕಾಗಿಯೇ ನಾನು ಹೋಗಲು ಬಯಸುತ್ತೇನೆ” ಎಂದು ಮಲಿವಾಲ್ ಪಿಟಿಐಗೆ ತಿಳಿಸಿದರು.

”ಇಂತಹ 100 ಪ್ರಕರಣಗಳು [ಲೈಂಗಿಕ ದೌರ್ಜನ್ಯ] ಇವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಅಂತಹ ಮಹಿಳೆಯರಿಗೆ ಸರ್ಕಾರದಿಂದ ಸಹಾಯ ಸಿಕ್ಕಿದೆಯೇ? ಅವರು ಎಲ್ಲಿ ವಾಸಿಸುತ್ತಿದ್ದಾರೆ? ಮತ್ತು ಅವರು ಈಗ ಯಾವ ಪರಿಸ್ಥಿತಿಯಲ್ಲಿದ್ದಾರೆ? ಕಾನೂನು ನೆರವು, ಸಮಾಲೋಚನೆ ಅಥವಾ ಪರಿಹಾರ ಅವರಿಗೆ ಸಿಕ್ಕಿದೆಯೇ? ಅವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆಯೇ? ಅವರು ಸುರಕ್ಷಿತವಾಗಿದ್ದಾರೆಯೇ? ಎಂಬ ಬಗ್ಗೆ ತಿಳಿಯಬೇಕಿದೆ. ಹಾಗಾಗಿ ನಾನು ಅವರನ್ನು ಭೇಟಿಯಾಗಲು ಬಯಸಿದ್ದೇನೆ” ಎಂದು ಮಲಿವಾಲ್ ಹೇಳಿದ್ದಾರೆ.

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಬಗ್ಗೆ ಜುಲೈ 19ರಂದು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗಮನ ಸೆಳೆದವು. ಇಬ್ಬರು ಕುಕಿ ಮಹಿಳೆಯರನ್ನು ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮೇ 4 ರಂದು ರಾಜ್ಯದಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರವು ಮೊದಲ ಬಾರಿಗೆ ವರದಿಯಾದ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಬಿಜೆಪಿ ಸರ್ಕಾರ ಮೇ 3ರಂದು ಮಣಿಪುರದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿತ್ತು. ಈ ವೀಡಿಯೊ ಜುಲೈ 19ರಂದು ವೈರಲ್ ಆಯಿತು. ಆ ಬಳಿಕ ಪ್ರತಿಪಕ್ಷಗಳು ಮತ್ತು ಸುಪ್ರೀಂ ಕೋರ್ಟ್‌ ತೀಕ್ಷ್ಣ ಮಾತುಗಳಿಂದ ಟೀಕಿಸಿದ್ದವು. ಆ ನಂತರ ಮಣಿಪುರ ಪೊಲೀಸರು ಪ್ರಕರಣದ ಆರೋಪಿಗಳನ್ನು ಬಂಧಿಸಲು ಪ್ರಾರಂಭಿಸಿದರು. ಮೇ 18 ರಂದು ಎಫ್‌ಐಆರ್ ಸಲ್ಲಿಸಿದ್ದರೂ ಸಹ ಈವರೆಗೂ ಕ್ರಮ ಕೈಗೊಂಡಿರಲಿಲ್ಲ. ಇದೀಗ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರನೇ ವ್ಯಕ್ತಿ ಬಾಲಾಪರಾಧಿಯಾಗಿದ್ದಾನೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರಶ್ನೆಗಳನ್ನು ಮಾಡಲು ಶುರುಮಾಡಿದ, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ”ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ” ಎಂದು ಹೇಳಿದ್ದರು.

ಕಾಂಗ್‌ಪೋಕ್ಪಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯದ ವಿಡಿಯೋ ಬೆಳಕಿಗೆ ಬಂದ ನಂತರ ಹಲವಾರು ಮಣಿಪುರಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವರದಿಯಾಗುತ್ತಿವೆ. ಮೇ 16 ರಂದು, ಇಬ್ಬರು ಕುಕಿ ಮಹಿಳೆಯರ ಅಪಹರಣ, ಅತ್ಯಾಚಾರ ಮತ್ತು ಹತ್ಯೆಯ ಕುರಿತು ಕಾಂಗ್‌ಪೋಪಿಯ ಸೈಕುಲ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿತ್ತು.

ಭಾನುವಾರ ಇಂಫಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲಿವಾಲ್, ”ಲೈಂಗಿಕ ದೌರ್ಜನ್ಯದ ದೂರುದಾರರ ಸ್ಥಿತಿಗತಿ ಕುರಿತು ಮಾತನಾಡಲು ಮುಖ್ಯಮಂತ್ರಿಯೊಂದಿಗೆ ಸಮಯ ಕೋರಿದ್ದೇನೆ” ಎಂದು ಹೇಳಿದರು.

”ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಪಾರಾಗಲು ಹಲವಾರು ಮಣಿಪುರಿ ಮಹಿಳೆಯರು ದೆಹಲಿಗೆ ಬಂದಿದ್ದಾರೆ. ನಾನು ಅವರ ಸಮಸ್ಯೆಗಳನ್ನು ಾಲಿಸಲು ಬಯಸುತ್ತೇನೆ” ಎಂದು ಹೇಳಿದರು.

”ಈ ಮಣಿಪುರ ಹಿಂಸಾಚಾರದಲ್ಲಿ 160ಕ್ಕೂ ಹೆಚ್ಚು ಜನರನ್ನು ಸಾಯಿಸಲಾಗಿದೆ. 60,000 ಜನರನ್ನು ಸ್ಥಳಾಂತರಿಸಲಾಗಿದೆ. ಹಿಂಸಾಚಾರದಿಂದ ಧ್ವಂಸಗೊಂಡಿರುವ ಮಣಿಪುರಕ್ಕೆ ಭೇಟಿ ನೀಡುವಂತೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಒತ್ತಾಯಿಸುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...