Homeಮುಖಪುಟಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

ಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

- Advertisement -
- Advertisement -

‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಹಲ್ಲೆ ಆರೋಪಗಳು ಆಧಾರರಹಿತ. ಮಲಿವಾಲ್ ಸುಳ್ಳು ಹೇಳುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಿತೂರಿ” ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ಇಂದು ಸಿಎಂ ನಿವಾಸದ ಡ್ರಾಯಿಂಗ್ ರೂಮ್‌ನಿಂದ ವಿಡಿಯೋವೊಂದು ಬಂದಿದ್ದು, ಇದು ಸ್ವಾತಿ ಮಲಿವಾಲ್ ಅವರ ಹೇಳಿಕೆಯನ್ನು ಅಲ್ಲಗಳೆಯಿದೆ. ವಿಡಿಯೋದಲ್ಲಿ, ಮಲಿವಾಲ್ ಕೋಣೆಯಲ್ಲಿ ಆರಾಮವಾಗಿ ಕುಳಿತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ; ಬಿಭವ್ ಕುಮಾರ್ ಅವರನ್ನು ನಿಂದಿಸುತ್ತಿದ್ದಾರೆ. ಆಕೆಯ ತಲೆಯ ಮೇಲೆ ಯಾವುದೇ ಗಾಯವು ಗೋಚರಿಸುವುದಿಲ್ಲ ಮತ್ತು ಮಲಿವಾಲ್ ಅವರ ಹೇಳಿಕೆಗಳು ಆಧಾರರಹಿತವಾಗಿವೆ, ನಿಜವಲ್ಲ ಎಂಬುದು ಸಾಬೀತುಪಡಿಸುತ್ತದೆ” ಎಂದು ಹೇಳಿದರು.

“ಬಿಭವ್ ಕುಮಾರ್ ಅವರು ಇಂದು ದೆಹಲಿ ಪೊಲೀಸರಿಗೆ ಸ್ವಾತಿ ಮಲಿವಾಲ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಮೇ 13 ರಂದು ಮಲಿವಾಲ್ ಅವರು ಮುಂಜಾನೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಬಂದಿದ್ದರು, ಯಾವುದೇ ಪೂರ್ವಭಾವಿ ಅಪಾಯಿಂಟ್ಮೆಂಟ್ ಇರಲಿಲ್ಲ. ಅವರು ಪ್ರವೇಶದ್ವಾರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬೆದರಿಸಿ ಒಳಗೆ ಪ್ರವೇಶಿಸಿದರು. ಸಿಎಂ ನಿವಾಸದ ಸಿಬ್ಬಂದಿ ಅವರನ್ನು ವೇಯ್ಟಿಂಗ್ ಲಾಂಜ್‌ಗೆ ಕರೆದೊಯ್ದರು, ಅವರು ಕೇಜ್ರಿವಾಲ್ ಅವರೊಂದಿಗೆ ಅಪಾಯಿಂಟ್‌ಮೆಂಟ್ ಹೊಂದಿಲ್ಲದ ಕಾರಣ ಆಕೆಯನ್ನು ಪೂರ್ವ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳದೆ ಬಲವಂತವಾಗಿ ಪ್ರವೇಶಿಸಲು ಕಾರಣವೇನು ಎಂದು  ಬಿಭವ್ ಕುಮಾರ್‌ ಪ್ರಶ್ನಿಸಿದರು. ಆ ದಿನ ಸಿಎಂ ಲಭ್ಯರಿಲ್ಲ ಎಂದು ಹೇಳಿದ್ದಕ್ಕೆ ಮಲಿವಾಲ್‌ ಸಿಬ್ಬಂದಿಗಳೊಂದಿಗೆ ಜೋರಾಗಿ ವಾಗ್ವಾದಕ್ಕಿಳಿದರು” ಎಂದು ಆತಿಶಿ ಘಟನೆ ಬಗ್ಗೆ ವಿವರಿಸಿದರು.

ಪೊಲೀಸ್ ದೂರಿನಲ್ಲಿ ಸ್ವಾತಿ ಮಲಿವಾಲ್ ಹೇಳಿದ್ದೇನು?

ಎಫ್‌ಐಆರ್ ಪ್ರಕಾರ, ಸ್ವಾತಿ ಮಲಿವಾಲ್ ಅವರನ್ನು ಬಿಭವ್ ಕುಮಾರ್ ಅವರು ಏಳರಿಂದ ಎಂಟು ಬಾರಿ ಒದ್ದು ಕಪಾಳಮೋಕ್ಷ ಮಾಡಿದ್ದಾರೆ. ನಿಲ್ಲಿಸುವಂತೆ ಕೇಳಿಕೊಂಡರೂ ಬಿಭವ್ ಕರುಣೆ ತೋರಿಸಲಿಲ್ಲ ಎಂದು ಹೇಳಲಾಗಿದೆ.

ಬಿಭವ್ ಕುಮಾರ್ ತನ್ನನ್ನು “ಮತ್ತೆ ಮತ್ತೆ ಪೂರ್ಣ ಬಲದಿಂದ ಹೊಡೆದಿದ್ದಾನೆ” ಎಂದು ಮಲಿವಾಲ್ ಹೇಳಿಕೊಂಡಿದ್ದಾರೆ. ‘ಯಾರೂ ನನ್ನನ್ನು ರಕ್ಷಿಸಲು ಬಂದಿಲ್ಲ, ನಾನು ಮುಟ್ಟಾಗಿದ್ದೇನೆ, ನೋವಿನಿಂದ ಬಳಲುತ್ತಿದೆ ಎಂದು ಕುಮಾರ್‌ಗೆ ಹೇಳಿದರೂ ಆತ ಥಳಿಸಿದ್ದಾನೆ’ ಎಂದು ಆರೋಪಿಸಿದ್ದಾರೆ.

ಆದರೆ, ಮಲಿವಾಲ್ ಆರೋಪವನ್ನು ಆತಿಶಿ ತಳ್ಳಿಹಾಕಿದ್ದು, “ಆಕೆ ಡ್ರಾಯಿಂಗ್ ರೂಮಿನಲ್ಲಿ ಆರಾಮವಾಗಿ ಕುಳಿತಿರುವುದು ಮತ್ತು ಸೆಕ್ಯುರಿಟಿ ಸಿಬ್ಬಂದಿಗೆ ಬೆದರಿಕೆ ಹಾಕುವುದನ್ನು ಕಾಣಬಹುದು, ಅವಳ ಬಟ್ಟೆ ಹರಿದಿಲ್ಲ” ಎಂಬುದನ್ನು ವೀಡಿಯೊದಲ್ಲಿ ನೋಡಬಹುದು ಎಂದು ಅತಿಶಿ ಹೇಳಿದರು.

“ಅವರು ಕುಮಾರ್‌ಗೆ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಮಲಿವಾಲ್ ಹೊರಿಸಿರುವ ಆರೋಪಗಳು ಆಧಾರರಹಿತವಾಗಿವೆ. ಮಲಿವಾಲ್ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಬೇಕೆಂದು ಒತ್ತಾಯಿಸಿದರು. ಅವರು ರಾಜ್ಯಸಭಾ ಸಂಸದೆ ಮತ್ತು ಸಿಎಂಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ ಎಂದು ಅವರು ತಿಳಿದುಕೊಳ್ಳಬೇಕು. ಮುಖ್ಯಮಂತ್ರಿ ಕಾರ್ಯನಿರತರಾಗಿದ್ದಾರೆ ಮತ್ತು ಭೇಟಿ ಸಾಧ್ಯವಿಲ್ಲ ಎಂದು ಕುಮಾರ್ ಅವರಿಗೆ ತಿಳಿಸಿದರು. ಆಕೆಯನ್ನು ಭೇಟಿಯಾಗಲು ಅವರನ್ನು ಕೂಗಿ, ತಳ್ಳಿ ಸಿಎಂ ಭವನದ ಭಾಗಕ್ಕೆ ಪ್ರವೇಶಿಸಲು ಯತ್ನಿಸಿದರು” ಎಂದು ಆತಿಶಿ ಆರೋಪ ಮಾಡಿದ್ದಾರೆ.

“ಇದು ಬಿಜೆಪಿಯ ಪಿತೂರಿ ಎಂದು ಇಡೀ ಘಟನೆ ಸಾಬೀತುಪಡಿಸುತ್ತದೆ ಮತ್ತು ಕೇಜ್ರಿವಾಲ್ ಅವರನ್ನು ಬಂಧಿಸಲು ಸ್ವಾತಿ ಮಲಿವಾಲ್ ಅವರನ್ನು ಮುಖ ಮಾಡಲಾಗಿತ್ತು” ಎಂದು ಅವರು ಆರೋಪಿಸಿದ್ದಾರೆ.

ಥಳಿಸಿದ್ದನ್ನು ಒಪ್ಪಿಕೊಂಡಿದ್ದ ಸಂಜಯ್ ಸಿಂಗ್:

ಸಚಿವೆ ಆತಿಶಿ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆದರೆ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಂಗಳವಾರ ಮಲಿವಾಲ್ ಅವರೊಂದಿಗಿನ ಘಟನೆಯು “ಅತ್ಯಂತ ಖಂಡನೀಯ” ಎಂದು ಹೇಳಿದ್ದರು. ಬಿಭವ್ ಕುಮಾರ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಹೇಳಿದ್ದಾರೆ.

ಮಲಿವಾಲ್ ಜೊತೆಗಿನ ಅಸಭ್ಯ ವರ್ತನೆಯನ್ನು ಸಿಂಗ್ ಒಪ್ಪಿಕೊಂಡಿರುವ ಬಗ್ಗೆ ಅತಿಶಿ ಅವರನ್ನು ಕೇಳಿದಾಗ, “ಎಎಪಿ ಸಂಸದ ಸಂಜಯ್ ಸಿಂಗ್ ಅವರು ಮಲಿವಾಲ್ ಅವರನ್ನು ಭೇಟಿಯಾದರು ಮತ್ತು ಅವರು ಕೇವಲ ಅವರ ಆವೃತ್ತಿಯನ್ನು ಕೇಳಿಸಿಕೊಂಡಿದ್ದರು. ಆದರೆ, ಈಗ ಈ ವೀಡಿಯೊ ಸತ್ಯವನ್ನು ಹೊರತಂದಿದೆ” ಎಂದು ಅತಿಶಿ ಹೇಳಿದರು.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...