Homeಮುಖಪುಟಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

ಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

- Advertisement -
- Advertisement -

‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಹಲ್ಲೆ ಆರೋಪಗಳು ಆಧಾರರಹಿತ. ಮಲಿವಾಲ್ ಸುಳ್ಳು ಹೇಳುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಿತೂರಿ” ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ಇಂದು ಸಿಎಂ ನಿವಾಸದ ಡ್ರಾಯಿಂಗ್ ರೂಮ್‌ನಿಂದ ವಿಡಿಯೋವೊಂದು ಬಂದಿದ್ದು, ಇದು ಸ್ವಾತಿ ಮಲಿವಾಲ್ ಅವರ ಹೇಳಿಕೆಯನ್ನು ಅಲ್ಲಗಳೆಯಿದೆ. ವಿಡಿಯೋದಲ್ಲಿ, ಮಲಿವಾಲ್ ಕೋಣೆಯಲ್ಲಿ ಆರಾಮವಾಗಿ ಕುಳಿತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ; ಬಿಭವ್ ಕುಮಾರ್ ಅವರನ್ನು ನಿಂದಿಸುತ್ತಿದ್ದಾರೆ. ಆಕೆಯ ತಲೆಯ ಮೇಲೆ ಯಾವುದೇ ಗಾಯವು ಗೋಚರಿಸುವುದಿಲ್ಲ ಮತ್ತು ಮಲಿವಾಲ್ ಅವರ ಹೇಳಿಕೆಗಳು ಆಧಾರರಹಿತವಾಗಿವೆ, ನಿಜವಲ್ಲ ಎಂಬುದು ಸಾಬೀತುಪಡಿಸುತ್ತದೆ” ಎಂದು ಹೇಳಿದರು.

“ಬಿಭವ್ ಕುಮಾರ್ ಅವರು ಇಂದು ದೆಹಲಿ ಪೊಲೀಸರಿಗೆ ಸ್ವಾತಿ ಮಲಿವಾಲ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಮೇ 13 ರಂದು ಮಲಿವಾಲ್ ಅವರು ಮುಂಜಾನೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಬಂದಿದ್ದರು, ಯಾವುದೇ ಪೂರ್ವಭಾವಿ ಅಪಾಯಿಂಟ್ಮೆಂಟ್ ಇರಲಿಲ್ಲ. ಅವರು ಪ್ರವೇಶದ್ವಾರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬೆದರಿಸಿ ಒಳಗೆ ಪ್ರವೇಶಿಸಿದರು. ಸಿಎಂ ನಿವಾಸದ ಸಿಬ್ಬಂದಿ ಅವರನ್ನು ವೇಯ್ಟಿಂಗ್ ಲಾಂಜ್‌ಗೆ ಕರೆದೊಯ್ದರು, ಅವರು ಕೇಜ್ರಿವಾಲ್ ಅವರೊಂದಿಗೆ ಅಪಾಯಿಂಟ್‌ಮೆಂಟ್ ಹೊಂದಿಲ್ಲದ ಕಾರಣ ಆಕೆಯನ್ನು ಪೂರ್ವ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳದೆ ಬಲವಂತವಾಗಿ ಪ್ರವೇಶಿಸಲು ಕಾರಣವೇನು ಎಂದು  ಬಿಭವ್ ಕುಮಾರ್‌ ಪ್ರಶ್ನಿಸಿದರು. ಆ ದಿನ ಸಿಎಂ ಲಭ್ಯರಿಲ್ಲ ಎಂದು ಹೇಳಿದ್ದಕ್ಕೆ ಮಲಿವಾಲ್‌ ಸಿಬ್ಬಂದಿಗಳೊಂದಿಗೆ ಜೋರಾಗಿ ವಾಗ್ವಾದಕ್ಕಿಳಿದರು” ಎಂದು ಆತಿಶಿ ಘಟನೆ ಬಗ್ಗೆ ವಿವರಿಸಿದರು.

ಪೊಲೀಸ್ ದೂರಿನಲ್ಲಿ ಸ್ವಾತಿ ಮಲಿವಾಲ್ ಹೇಳಿದ್ದೇನು?

ಎಫ್‌ಐಆರ್ ಪ್ರಕಾರ, ಸ್ವಾತಿ ಮಲಿವಾಲ್ ಅವರನ್ನು ಬಿಭವ್ ಕುಮಾರ್ ಅವರು ಏಳರಿಂದ ಎಂಟು ಬಾರಿ ಒದ್ದು ಕಪಾಳಮೋಕ್ಷ ಮಾಡಿದ್ದಾರೆ. ನಿಲ್ಲಿಸುವಂತೆ ಕೇಳಿಕೊಂಡರೂ ಬಿಭವ್ ಕರುಣೆ ತೋರಿಸಲಿಲ್ಲ ಎಂದು ಹೇಳಲಾಗಿದೆ.

ಬಿಭವ್ ಕುಮಾರ್ ತನ್ನನ್ನು “ಮತ್ತೆ ಮತ್ತೆ ಪೂರ್ಣ ಬಲದಿಂದ ಹೊಡೆದಿದ್ದಾನೆ” ಎಂದು ಮಲಿವಾಲ್ ಹೇಳಿಕೊಂಡಿದ್ದಾರೆ. ‘ಯಾರೂ ನನ್ನನ್ನು ರಕ್ಷಿಸಲು ಬಂದಿಲ್ಲ, ನಾನು ಮುಟ್ಟಾಗಿದ್ದೇನೆ, ನೋವಿನಿಂದ ಬಳಲುತ್ತಿದೆ ಎಂದು ಕುಮಾರ್‌ಗೆ ಹೇಳಿದರೂ ಆತ ಥಳಿಸಿದ್ದಾನೆ’ ಎಂದು ಆರೋಪಿಸಿದ್ದಾರೆ.

ಆದರೆ, ಮಲಿವಾಲ್ ಆರೋಪವನ್ನು ಆತಿಶಿ ತಳ್ಳಿಹಾಕಿದ್ದು, “ಆಕೆ ಡ್ರಾಯಿಂಗ್ ರೂಮಿನಲ್ಲಿ ಆರಾಮವಾಗಿ ಕುಳಿತಿರುವುದು ಮತ್ತು ಸೆಕ್ಯುರಿಟಿ ಸಿಬ್ಬಂದಿಗೆ ಬೆದರಿಕೆ ಹಾಕುವುದನ್ನು ಕಾಣಬಹುದು, ಅವಳ ಬಟ್ಟೆ ಹರಿದಿಲ್ಲ” ಎಂಬುದನ್ನು ವೀಡಿಯೊದಲ್ಲಿ ನೋಡಬಹುದು ಎಂದು ಅತಿಶಿ ಹೇಳಿದರು.

“ಅವರು ಕುಮಾರ್‌ಗೆ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಮಲಿವಾಲ್ ಹೊರಿಸಿರುವ ಆರೋಪಗಳು ಆಧಾರರಹಿತವಾಗಿವೆ. ಮಲಿವಾಲ್ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಬೇಕೆಂದು ಒತ್ತಾಯಿಸಿದರು. ಅವರು ರಾಜ್ಯಸಭಾ ಸಂಸದೆ ಮತ್ತು ಸಿಎಂಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ ಎಂದು ಅವರು ತಿಳಿದುಕೊಳ್ಳಬೇಕು. ಮುಖ್ಯಮಂತ್ರಿ ಕಾರ್ಯನಿರತರಾಗಿದ್ದಾರೆ ಮತ್ತು ಭೇಟಿ ಸಾಧ್ಯವಿಲ್ಲ ಎಂದು ಕುಮಾರ್ ಅವರಿಗೆ ತಿಳಿಸಿದರು. ಆಕೆಯನ್ನು ಭೇಟಿಯಾಗಲು ಅವರನ್ನು ಕೂಗಿ, ತಳ್ಳಿ ಸಿಎಂ ಭವನದ ಭಾಗಕ್ಕೆ ಪ್ರವೇಶಿಸಲು ಯತ್ನಿಸಿದರು” ಎಂದು ಆತಿಶಿ ಆರೋಪ ಮಾಡಿದ್ದಾರೆ.

“ಇದು ಬಿಜೆಪಿಯ ಪಿತೂರಿ ಎಂದು ಇಡೀ ಘಟನೆ ಸಾಬೀತುಪಡಿಸುತ್ತದೆ ಮತ್ತು ಕೇಜ್ರಿವಾಲ್ ಅವರನ್ನು ಬಂಧಿಸಲು ಸ್ವಾತಿ ಮಲಿವಾಲ್ ಅವರನ್ನು ಮುಖ ಮಾಡಲಾಗಿತ್ತು” ಎಂದು ಅವರು ಆರೋಪಿಸಿದ್ದಾರೆ.

ಥಳಿಸಿದ್ದನ್ನು ಒಪ್ಪಿಕೊಂಡಿದ್ದ ಸಂಜಯ್ ಸಿಂಗ್:

ಸಚಿವೆ ಆತಿಶಿ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆದರೆ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಂಗಳವಾರ ಮಲಿವಾಲ್ ಅವರೊಂದಿಗಿನ ಘಟನೆಯು “ಅತ್ಯಂತ ಖಂಡನೀಯ” ಎಂದು ಹೇಳಿದ್ದರು. ಬಿಭವ್ ಕುಮಾರ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಹೇಳಿದ್ದಾರೆ.

ಮಲಿವಾಲ್ ಜೊತೆಗಿನ ಅಸಭ್ಯ ವರ್ತನೆಯನ್ನು ಸಿಂಗ್ ಒಪ್ಪಿಕೊಂಡಿರುವ ಬಗ್ಗೆ ಅತಿಶಿ ಅವರನ್ನು ಕೇಳಿದಾಗ, “ಎಎಪಿ ಸಂಸದ ಸಂಜಯ್ ಸಿಂಗ್ ಅವರು ಮಲಿವಾಲ್ ಅವರನ್ನು ಭೇಟಿಯಾದರು ಮತ್ತು ಅವರು ಕೇವಲ ಅವರ ಆವೃತ್ತಿಯನ್ನು ಕೇಳಿಸಿಕೊಂಡಿದ್ದರು. ಆದರೆ, ಈಗ ಈ ವೀಡಿಯೊ ಸತ್ಯವನ್ನು ಹೊರತಂದಿದೆ” ಎಂದು ಅತಿಶಿ ಹೇಳಿದರು.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...