Homeಮುಖಪುಟಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

ಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

- Advertisement -
- Advertisement -

‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಹಲ್ಲೆ ಆರೋಪಗಳು ಆಧಾರರಹಿತ. ಮಲಿವಾಲ್ ಸುಳ್ಳು ಹೇಳುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಿತೂರಿ” ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ಇಂದು ಸಿಎಂ ನಿವಾಸದ ಡ್ರಾಯಿಂಗ್ ರೂಮ್‌ನಿಂದ ವಿಡಿಯೋವೊಂದು ಬಂದಿದ್ದು, ಇದು ಸ್ವಾತಿ ಮಲಿವಾಲ್ ಅವರ ಹೇಳಿಕೆಯನ್ನು ಅಲ್ಲಗಳೆಯಿದೆ. ವಿಡಿಯೋದಲ್ಲಿ, ಮಲಿವಾಲ್ ಕೋಣೆಯಲ್ಲಿ ಆರಾಮವಾಗಿ ಕುಳಿತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ; ಬಿಭವ್ ಕುಮಾರ್ ಅವರನ್ನು ನಿಂದಿಸುತ್ತಿದ್ದಾರೆ. ಆಕೆಯ ತಲೆಯ ಮೇಲೆ ಯಾವುದೇ ಗಾಯವು ಗೋಚರಿಸುವುದಿಲ್ಲ ಮತ್ತು ಮಲಿವಾಲ್ ಅವರ ಹೇಳಿಕೆಗಳು ಆಧಾರರಹಿತವಾಗಿವೆ, ನಿಜವಲ್ಲ ಎಂಬುದು ಸಾಬೀತುಪಡಿಸುತ್ತದೆ” ಎಂದು ಹೇಳಿದರು.

“ಬಿಭವ್ ಕುಮಾರ್ ಅವರು ಇಂದು ದೆಹಲಿ ಪೊಲೀಸರಿಗೆ ಸ್ವಾತಿ ಮಲಿವಾಲ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಮೇ 13 ರಂದು ಮಲಿವಾಲ್ ಅವರು ಮುಂಜಾನೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಬಂದಿದ್ದರು, ಯಾವುದೇ ಪೂರ್ವಭಾವಿ ಅಪಾಯಿಂಟ್ಮೆಂಟ್ ಇರಲಿಲ್ಲ. ಅವರು ಪ್ರವೇಶದ್ವಾರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬೆದರಿಸಿ ಒಳಗೆ ಪ್ರವೇಶಿಸಿದರು. ಸಿಎಂ ನಿವಾಸದ ಸಿಬ್ಬಂದಿ ಅವರನ್ನು ವೇಯ್ಟಿಂಗ್ ಲಾಂಜ್‌ಗೆ ಕರೆದೊಯ್ದರು, ಅವರು ಕೇಜ್ರಿವಾಲ್ ಅವರೊಂದಿಗೆ ಅಪಾಯಿಂಟ್‌ಮೆಂಟ್ ಹೊಂದಿಲ್ಲದ ಕಾರಣ ಆಕೆಯನ್ನು ಪೂರ್ವ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳದೆ ಬಲವಂತವಾಗಿ ಪ್ರವೇಶಿಸಲು ಕಾರಣವೇನು ಎಂದು  ಬಿಭವ್ ಕುಮಾರ್‌ ಪ್ರಶ್ನಿಸಿದರು. ಆ ದಿನ ಸಿಎಂ ಲಭ್ಯರಿಲ್ಲ ಎಂದು ಹೇಳಿದ್ದಕ್ಕೆ ಮಲಿವಾಲ್‌ ಸಿಬ್ಬಂದಿಗಳೊಂದಿಗೆ ಜೋರಾಗಿ ವಾಗ್ವಾದಕ್ಕಿಳಿದರು” ಎಂದು ಆತಿಶಿ ಘಟನೆ ಬಗ್ಗೆ ವಿವರಿಸಿದರು.

ಪೊಲೀಸ್ ದೂರಿನಲ್ಲಿ ಸ್ವಾತಿ ಮಲಿವಾಲ್ ಹೇಳಿದ್ದೇನು?

ಎಫ್‌ಐಆರ್ ಪ್ರಕಾರ, ಸ್ವಾತಿ ಮಲಿವಾಲ್ ಅವರನ್ನು ಬಿಭವ್ ಕುಮಾರ್ ಅವರು ಏಳರಿಂದ ಎಂಟು ಬಾರಿ ಒದ್ದು ಕಪಾಳಮೋಕ್ಷ ಮಾಡಿದ್ದಾರೆ. ನಿಲ್ಲಿಸುವಂತೆ ಕೇಳಿಕೊಂಡರೂ ಬಿಭವ್ ಕರುಣೆ ತೋರಿಸಲಿಲ್ಲ ಎಂದು ಹೇಳಲಾಗಿದೆ.

ಬಿಭವ್ ಕುಮಾರ್ ತನ್ನನ್ನು “ಮತ್ತೆ ಮತ್ತೆ ಪೂರ್ಣ ಬಲದಿಂದ ಹೊಡೆದಿದ್ದಾನೆ” ಎಂದು ಮಲಿವಾಲ್ ಹೇಳಿಕೊಂಡಿದ್ದಾರೆ. ‘ಯಾರೂ ನನ್ನನ್ನು ರಕ್ಷಿಸಲು ಬಂದಿಲ್ಲ, ನಾನು ಮುಟ್ಟಾಗಿದ್ದೇನೆ, ನೋವಿನಿಂದ ಬಳಲುತ್ತಿದೆ ಎಂದು ಕುಮಾರ್‌ಗೆ ಹೇಳಿದರೂ ಆತ ಥಳಿಸಿದ್ದಾನೆ’ ಎಂದು ಆರೋಪಿಸಿದ್ದಾರೆ.

ಆದರೆ, ಮಲಿವಾಲ್ ಆರೋಪವನ್ನು ಆತಿಶಿ ತಳ್ಳಿಹಾಕಿದ್ದು, “ಆಕೆ ಡ್ರಾಯಿಂಗ್ ರೂಮಿನಲ್ಲಿ ಆರಾಮವಾಗಿ ಕುಳಿತಿರುವುದು ಮತ್ತು ಸೆಕ್ಯುರಿಟಿ ಸಿಬ್ಬಂದಿಗೆ ಬೆದರಿಕೆ ಹಾಕುವುದನ್ನು ಕಾಣಬಹುದು, ಅವಳ ಬಟ್ಟೆ ಹರಿದಿಲ್ಲ” ಎಂಬುದನ್ನು ವೀಡಿಯೊದಲ್ಲಿ ನೋಡಬಹುದು ಎಂದು ಅತಿಶಿ ಹೇಳಿದರು.

“ಅವರು ಕುಮಾರ್‌ಗೆ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಮಲಿವಾಲ್ ಹೊರಿಸಿರುವ ಆರೋಪಗಳು ಆಧಾರರಹಿತವಾಗಿವೆ. ಮಲಿವಾಲ್ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಬೇಕೆಂದು ಒತ್ತಾಯಿಸಿದರು. ಅವರು ರಾಜ್ಯಸಭಾ ಸಂಸದೆ ಮತ್ತು ಸಿಎಂಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ ಎಂದು ಅವರು ತಿಳಿದುಕೊಳ್ಳಬೇಕು. ಮುಖ್ಯಮಂತ್ರಿ ಕಾರ್ಯನಿರತರಾಗಿದ್ದಾರೆ ಮತ್ತು ಭೇಟಿ ಸಾಧ್ಯವಿಲ್ಲ ಎಂದು ಕುಮಾರ್ ಅವರಿಗೆ ತಿಳಿಸಿದರು. ಆಕೆಯನ್ನು ಭೇಟಿಯಾಗಲು ಅವರನ್ನು ಕೂಗಿ, ತಳ್ಳಿ ಸಿಎಂ ಭವನದ ಭಾಗಕ್ಕೆ ಪ್ರವೇಶಿಸಲು ಯತ್ನಿಸಿದರು” ಎಂದು ಆತಿಶಿ ಆರೋಪ ಮಾಡಿದ್ದಾರೆ.

“ಇದು ಬಿಜೆಪಿಯ ಪಿತೂರಿ ಎಂದು ಇಡೀ ಘಟನೆ ಸಾಬೀತುಪಡಿಸುತ್ತದೆ ಮತ್ತು ಕೇಜ್ರಿವಾಲ್ ಅವರನ್ನು ಬಂಧಿಸಲು ಸ್ವಾತಿ ಮಲಿವಾಲ್ ಅವರನ್ನು ಮುಖ ಮಾಡಲಾಗಿತ್ತು” ಎಂದು ಅವರು ಆರೋಪಿಸಿದ್ದಾರೆ.

ಥಳಿಸಿದ್ದನ್ನು ಒಪ್ಪಿಕೊಂಡಿದ್ದ ಸಂಜಯ್ ಸಿಂಗ್:

ಸಚಿವೆ ಆತಿಶಿ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆದರೆ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಂಗಳವಾರ ಮಲಿವಾಲ್ ಅವರೊಂದಿಗಿನ ಘಟನೆಯು “ಅತ್ಯಂತ ಖಂಡನೀಯ” ಎಂದು ಹೇಳಿದ್ದರು. ಬಿಭವ್ ಕುಮಾರ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಹೇಳಿದ್ದಾರೆ.

ಮಲಿವಾಲ್ ಜೊತೆಗಿನ ಅಸಭ್ಯ ವರ್ತನೆಯನ್ನು ಸಿಂಗ್ ಒಪ್ಪಿಕೊಂಡಿರುವ ಬಗ್ಗೆ ಅತಿಶಿ ಅವರನ್ನು ಕೇಳಿದಾಗ, “ಎಎಪಿ ಸಂಸದ ಸಂಜಯ್ ಸಿಂಗ್ ಅವರು ಮಲಿವಾಲ್ ಅವರನ್ನು ಭೇಟಿಯಾದರು ಮತ್ತು ಅವರು ಕೇವಲ ಅವರ ಆವೃತ್ತಿಯನ್ನು ಕೇಳಿಸಿಕೊಂಡಿದ್ದರು. ಆದರೆ, ಈಗ ಈ ವೀಡಿಯೊ ಸತ್ಯವನ್ನು ಹೊರತಂದಿದೆ” ಎಂದು ಅತಿಶಿ ಹೇಳಿದರು.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...