Homeಮುಖಪುಟಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

ಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

- Advertisement -
- Advertisement -

‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಹಲ್ಲೆ ಆರೋಪಗಳು ಆಧಾರರಹಿತ. ಮಲಿವಾಲ್ ಸುಳ್ಳು ಹೇಳುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಿತೂರಿ” ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ಇಂದು ಸಿಎಂ ನಿವಾಸದ ಡ್ರಾಯಿಂಗ್ ರೂಮ್‌ನಿಂದ ವಿಡಿಯೋವೊಂದು ಬಂದಿದ್ದು, ಇದು ಸ್ವಾತಿ ಮಲಿವಾಲ್ ಅವರ ಹೇಳಿಕೆಯನ್ನು ಅಲ್ಲಗಳೆಯಿದೆ. ವಿಡಿಯೋದಲ್ಲಿ, ಮಲಿವಾಲ್ ಕೋಣೆಯಲ್ಲಿ ಆರಾಮವಾಗಿ ಕುಳಿತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ; ಬಿಭವ್ ಕುಮಾರ್ ಅವರನ್ನು ನಿಂದಿಸುತ್ತಿದ್ದಾರೆ. ಆಕೆಯ ತಲೆಯ ಮೇಲೆ ಯಾವುದೇ ಗಾಯವು ಗೋಚರಿಸುವುದಿಲ್ಲ ಮತ್ತು ಮಲಿವಾಲ್ ಅವರ ಹೇಳಿಕೆಗಳು ಆಧಾರರಹಿತವಾಗಿವೆ, ನಿಜವಲ್ಲ ಎಂಬುದು ಸಾಬೀತುಪಡಿಸುತ್ತದೆ” ಎಂದು ಹೇಳಿದರು.

“ಬಿಭವ್ ಕುಮಾರ್ ಅವರು ಇಂದು ದೆಹಲಿ ಪೊಲೀಸರಿಗೆ ಸ್ವಾತಿ ಮಲಿವಾಲ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಮೇ 13 ರಂದು ಮಲಿವಾಲ್ ಅವರು ಮುಂಜಾನೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಬಂದಿದ್ದರು, ಯಾವುದೇ ಪೂರ್ವಭಾವಿ ಅಪಾಯಿಂಟ್ಮೆಂಟ್ ಇರಲಿಲ್ಲ. ಅವರು ಪ್ರವೇಶದ್ವಾರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬೆದರಿಸಿ ಒಳಗೆ ಪ್ರವೇಶಿಸಿದರು. ಸಿಎಂ ನಿವಾಸದ ಸಿಬ್ಬಂದಿ ಅವರನ್ನು ವೇಯ್ಟಿಂಗ್ ಲಾಂಜ್‌ಗೆ ಕರೆದೊಯ್ದರು, ಅವರು ಕೇಜ್ರಿವಾಲ್ ಅವರೊಂದಿಗೆ ಅಪಾಯಿಂಟ್‌ಮೆಂಟ್ ಹೊಂದಿಲ್ಲದ ಕಾರಣ ಆಕೆಯನ್ನು ಪೂರ್ವ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳದೆ ಬಲವಂತವಾಗಿ ಪ್ರವೇಶಿಸಲು ಕಾರಣವೇನು ಎಂದು  ಬಿಭವ್ ಕುಮಾರ್‌ ಪ್ರಶ್ನಿಸಿದರು. ಆ ದಿನ ಸಿಎಂ ಲಭ್ಯರಿಲ್ಲ ಎಂದು ಹೇಳಿದ್ದಕ್ಕೆ ಮಲಿವಾಲ್‌ ಸಿಬ್ಬಂದಿಗಳೊಂದಿಗೆ ಜೋರಾಗಿ ವಾಗ್ವಾದಕ್ಕಿಳಿದರು” ಎಂದು ಆತಿಶಿ ಘಟನೆ ಬಗ್ಗೆ ವಿವರಿಸಿದರು.

ಪೊಲೀಸ್ ದೂರಿನಲ್ಲಿ ಸ್ವಾತಿ ಮಲಿವಾಲ್ ಹೇಳಿದ್ದೇನು?

ಎಫ್‌ಐಆರ್ ಪ್ರಕಾರ, ಸ್ವಾತಿ ಮಲಿವಾಲ್ ಅವರನ್ನು ಬಿಭವ್ ಕುಮಾರ್ ಅವರು ಏಳರಿಂದ ಎಂಟು ಬಾರಿ ಒದ್ದು ಕಪಾಳಮೋಕ್ಷ ಮಾಡಿದ್ದಾರೆ. ನಿಲ್ಲಿಸುವಂತೆ ಕೇಳಿಕೊಂಡರೂ ಬಿಭವ್ ಕರುಣೆ ತೋರಿಸಲಿಲ್ಲ ಎಂದು ಹೇಳಲಾಗಿದೆ.

ಬಿಭವ್ ಕುಮಾರ್ ತನ್ನನ್ನು “ಮತ್ತೆ ಮತ್ತೆ ಪೂರ್ಣ ಬಲದಿಂದ ಹೊಡೆದಿದ್ದಾನೆ” ಎಂದು ಮಲಿವಾಲ್ ಹೇಳಿಕೊಂಡಿದ್ದಾರೆ. ‘ಯಾರೂ ನನ್ನನ್ನು ರಕ್ಷಿಸಲು ಬಂದಿಲ್ಲ, ನಾನು ಮುಟ್ಟಾಗಿದ್ದೇನೆ, ನೋವಿನಿಂದ ಬಳಲುತ್ತಿದೆ ಎಂದು ಕುಮಾರ್‌ಗೆ ಹೇಳಿದರೂ ಆತ ಥಳಿಸಿದ್ದಾನೆ’ ಎಂದು ಆರೋಪಿಸಿದ್ದಾರೆ.

ಆದರೆ, ಮಲಿವಾಲ್ ಆರೋಪವನ್ನು ಆತಿಶಿ ತಳ್ಳಿಹಾಕಿದ್ದು, “ಆಕೆ ಡ್ರಾಯಿಂಗ್ ರೂಮಿನಲ್ಲಿ ಆರಾಮವಾಗಿ ಕುಳಿತಿರುವುದು ಮತ್ತು ಸೆಕ್ಯುರಿಟಿ ಸಿಬ್ಬಂದಿಗೆ ಬೆದರಿಕೆ ಹಾಕುವುದನ್ನು ಕಾಣಬಹುದು, ಅವಳ ಬಟ್ಟೆ ಹರಿದಿಲ್ಲ” ಎಂಬುದನ್ನು ವೀಡಿಯೊದಲ್ಲಿ ನೋಡಬಹುದು ಎಂದು ಅತಿಶಿ ಹೇಳಿದರು.

“ಅವರು ಕುಮಾರ್‌ಗೆ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಮಲಿವಾಲ್ ಹೊರಿಸಿರುವ ಆರೋಪಗಳು ಆಧಾರರಹಿತವಾಗಿವೆ. ಮಲಿವಾಲ್ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಬೇಕೆಂದು ಒತ್ತಾಯಿಸಿದರು. ಅವರು ರಾಜ್ಯಸಭಾ ಸಂಸದೆ ಮತ್ತು ಸಿಎಂಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ ಎಂದು ಅವರು ತಿಳಿದುಕೊಳ್ಳಬೇಕು. ಮುಖ್ಯಮಂತ್ರಿ ಕಾರ್ಯನಿರತರಾಗಿದ್ದಾರೆ ಮತ್ತು ಭೇಟಿ ಸಾಧ್ಯವಿಲ್ಲ ಎಂದು ಕುಮಾರ್ ಅವರಿಗೆ ತಿಳಿಸಿದರು. ಆಕೆಯನ್ನು ಭೇಟಿಯಾಗಲು ಅವರನ್ನು ಕೂಗಿ, ತಳ್ಳಿ ಸಿಎಂ ಭವನದ ಭಾಗಕ್ಕೆ ಪ್ರವೇಶಿಸಲು ಯತ್ನಿಸಿದರು” ಎಂದು ಆತಿಶಿ ಆರೋಪ ಮಾಡಿದ್ದಾರೆ.

“ಇದು ಬಿಜೆಪಿಯ ಪಿತೂರಿ ಎಂದು ಇಡೀ ಘಟನೆ ಸಾಬೀತುಪಡಿಸುತ್ತದೆ ಮತ್ತು ಕೇಜ್ರಿವಾಲ್ ಅವರನ್ನು ಬಂಧಿಸಲು ಸ್ವಾತಿ ಮಲಿವಾಲ್ ಅವರನ್ನು ಮುಖ ಮಾಡಲಾಗಿತ್ತು” ಎಂದು ಅವರು ಆರೋಪಿಸಿದ್ದಾರೆ.

ಥಳಿಸಿದ್ದನ್ನು ಒಪ್ಪಿಕೊಂಡಿದ್ದ ಸಂಜಯ್ ಸಿಂಗ್:

ಸಚಿವೆ ಆತಿಶಿ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆದರೆ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಂಗಳವಾರ ಮಲಿವಾಲ್ ಅವರೊಂದಿಗಿನ ಘಟನೆಯು “ಅತ್ಯಂತ ಖಂಡನೀಯ” ಎಂದು ಹೇಳಿದ್ದರು. ಬಿಭವ್ ಕುಮಾರ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಹೇಳಿದ್ದಾರೆ.

ಮಲಿವಾಲ್ ಜೊತೆಗಿನ ಅಸಭ್ಯ ವರ್ತನೆಯನ್ನು ಸಿಂಗ್ ಒಪ್ಪಿಕೊಂಡಿರುವ ಬಗ್ಗೆ ಅತಿಶಿ ಅವರನ್ನು ಕೇಳಿದಾಗ, “ಎಎಪಿ ಸಂಸದ ಸಂಜಯ್ ಸಿಂಗ್ ಅವರು ಮಲಿವಾಲ್ ಅವರನ್ನು ಭೇಟಿಯಾದರು ಮತ್ತು ಅವರು ಕೇವಲ ಅವರ ಆವೃತ್ತಿಯನ್ನು ಕೇಳಿಸಿಕೊಂಡಿದ್ದರು. ಆದರೆ, ಈಗ ಈ ವೀಡಿಯೊ ಸತ್ಯವನ್ನು ಹೊರತಂದಿದೆ” ಎಂದು ಅತಿಶಿ ಹೇಳಿದರು.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...