Homeಮುಖಪುಟಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

ಸ್ವಾತಿ ಮಲಿವಾಲ್ ಸುಳ್ಳು ಹೇಳುತ್ತಿದ್ದಾರೆ; ಇದು ಬಿಜೆಪಿಯ ಪಿತೂರಿ: ಅತಿಶಿ ಆರೋಪ

- Advertisement -
- Advertisement -

‘ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಹಲ್ಲೆ ಆರೋಪಗಳು ಆಧಾರರಹಿತ. ಮಲಿವಾಲ್ ಸುಳ್ಳು ಹೇಳುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಿತೂರಿ” ಎಂದು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, “ಇಂದು ಸಿಎಂ ನಿವಾಸದ ಡ್ರಾಯಿಂಗ್ ರೂಮ್‌ನಿಂದ ವಿಡಿಯೋವೊಂದು ಬಂದಿದ್ದು, ಇದು ಸ್ವಾತಿ ಮಲಿವಾಲ್ ಅವರ ಹೇಳಿಕೆಯನ್ನು ಅಲ್ಲಗಳೆಯಿದೆ. ವಿಡಿಯೋದಲ್ಲಿ, ಮಲಿವಾಲ್ ಕೋಣೆಯಲ್ಲಿ ಆರಾಮವಾಗಿ ಕುಳಿತು ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ; ಬಿಭವ್ ಕುಮಾರ್ ಅವರನ್ನು ನಿಂದಿಸುತ್ತಿದ್ದಾರೆ. ಆಕೆಯ ತಲೆಯ ಮೇಲೆ ಯಾವುದೇ ಗಾಯವು ಗೋಚರಿಸುವುದಿಲ್ಲ ಮತ್ತು ಮಲಿವಾಲ್ ಅವರ ಹೇಳಿಕೆಗಳು ಆಧಾರರಹಿತವಾಗಿವೆ, ನಿಜವಲ್ಲ ಎಂಬುದು ಸಾಬೀತುಪಡಿಸುತ್ತದೆ” ಎಂದು ಹೇಳಿದರು.

“ಬಿಭವ್ ಕುಮಾರ್ ಅವರು ಇಂದು ದೆಹಲಿ ಪೊಲೀಸರಿಗೆ ಸ್ವಾತಿ ಮಲಿವಾಲ್ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಮೇ 13 ರಂದು ಮಲಿವಾಲ್ ಅವರು ಮುಂಜಾನೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಬಂದಿದ್ದರು, ಯಾವುದೇ ಪೂರ್ವಭಾವಿ ಅಪಾಯಿಂಟ್ಮೆಂಟ್ ಇರಲಿಲ್ಲ. ಅವರು ಪ್ರವೇಶದ್ವಾರದಲ್ಲಿ ಪೊಲೀಸ್ ಅಧಿಕಾರಿಗಳನ್ನು ಬೆದರಿಸಿ ಒಳಗೆ ಪ್ರವೇಶಿಸಿದರು. ಸಿಎಂ ನಿವಾಸದ ಸಿಬ್ಬಂದಿ ಅವರನ್ನು ವೇಯ್ಟಿಂಗ್ ಲಾಂಜ್‌ಗೆ ಕರೆದೊಯ್ದರು, ಅವರು ಕೇಜ್ರಿವಾಲ್ ಅವರೊಂದಿಗೆ ಅಪಾಯಿಂಟ್‌ಮೆಂಟ್ ಹೊಂದಿಲ್ಲದ ಕಾರಣ ಆಕೆಯನ್ನು ಪೂರ್ವ ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳದೆ ಬಲವಂತವಾಗಿ ಪ್ರವೇಶಿಸಲು ಕಾರಣವೇನು ಎಂದು  ಬಿಭವ್ ಕುಮಾರ್‌ ಪ್ರಶ್ನಿಸಿದರು. ಆ ದಿನ ಸಿಎಂ ಲಭ್ಯರಿಲ್ಲ ಎಂದು ಹೇಳಿದ್ದಕ್ಕೆ ಮಲಿವಾಲ್‌ ಸಿಬ್ಬಂದಿಗಳೊಂದಿಗೆ ಜೋರಾಗಿ ವಾಗ್ವಾದಕ್ಕಿಳಿದರು” ಎಂದು ಆತಿಶಿ ಘಟನೆ ಬಗ್ಗೆ ವಿವರಿಸಿದರು.

ಪೊಲೀಸ್ ದೂರಿನಲ್ಲಿ ಸ್ವಾತಿ ಮಲಿವಾಲ್ ಹೇಳಿದ್ದೇನು?

ಎಫ್‌ಐಆರ್ ಪ್ರಕಾರ, ಸ್ವಾತಿ ಮಲಿವಾಲ್ ಅವರನ್ನು ಬಿಭವ್ ಕುಮಾರ್ ಅವರು ಏಳರಿಂದ ಎಂಟು ಬಾರಿ ಒದ್ದು ಕಪಾಳಮೋಕ್ಷ ಮಾಡಿದ್ದಾರೆ. ನಿಲ್ಲಿಸುವಂತೆ ಕೇಳಿಕೊಂಡರೂ ಬಿಭವ್ ಕರುಣೆ ತೋರಿಸಲಿಲ್ಲ ಎಂದು ಹೇಳಲಾಗಿದೆ.

ಬಿಭವ್ ಕುಮಾರ್ ತನ್ನನ್ನು “ಮತ್ತೆ ಮತ್ತೆ ಪೂರ್ಣ ಬಲದಿಂದ ಹೊಡೆದಿದ್ದಾನೆ” ಎಂದು ಮಲಿವಾಲ್ ಹೇಳಿಕೊಂಡಿದ್ದಾರೆ. ‘ಯಾರೂ ನನ್ನನ್ನು ರಕ್ಷಿಸಲು ಬಂದಿಲ್ಲ, ನಾನು ಮುಟ್ಟಾಗಿದ್ದೇನೆ, ನೋವಿನಿಂದ ಬಳಲುತ್ತಿದೆ ಎಂದು ಕುಮಾರ್‌ಗೆ ಹೇಳಿದರೂ ಆತ ಥಳಿಸಿದ್ದಾನೆ’ ಎಂದು ಆರೋಪಿಸಿದ್ದಾರೆ.

ಆದರೆ, ಮಲಿವಾಲ್ ಆರೋಪವನ್ನು ಆತಿಶಿ ತಳ್ಳಿಹಾಕಿದ್ದು, “ಆಕೆ ಡ್ರಾಯಿಂಗ್ ರೂಮಿನಲ್ಲಿ ಆರಾಮವಾಗಿ ಕುಳಿತಿರುವುದು ಮತ್ತು ಸೆಕ್ಯುರಿಟಿ ಸಿಬ್ಬಂದಿಗೆ ಬೆದರಿಕೆ ಹಾಕುವುದನ್ನು ಕಾಣಬಹುದು, ಅವಳ ಬಟ್ಟೆ ಹರಿದಿಲ್ಲ” ಎಂಬುದನ್ನು ವೀಡಿಯೊದಲ್ಲಿ ನೋಡಬಹುದು ಎಂದು ಅತಿಶಿ ಹೇಳಿದರು.

“ಅವರು ಕುಮಾರ್‌ಗೆ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಮಲಿವಾಲ್ ಹೊರಿಸಿರುವ ಆರೋಪಗಳು ಆಧಾರರಹಿತವಾಗಿವೆ. ಮಲಿವಾಲ್ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಬೇಕೆಂದು ಒತ್ತಾಯಿಸಿದರು. ಅವರು ರಾಜ್ಯಸಭಾ ಸಂಸದೆ ಮತ್ತು ಸಿಎಂಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ ಎಂದು ಅವರು ತಿಳಿದುಕೊಳ್ಳಬೇಕು. ಮುಖ್ಯಮಂತ್ರಿ ಕಾರ್ಯನಿರತರಾಗಿದ್ದಾರೆ ಮತ್ತು ಭೇಟಿ ಸಾಧ್ಯವಿಲ್ಲ ಎಂದು ಕುಮಾರ್ ಅವರಿಗೆ ತಿಳಿಸಿದರು. ಆಕೆಯನ್ನು ಭೇಟಿಯಾಗಲು ಅವರನ್ನು ಕೂಗಿ, ತಳ್ಳಿ ಸಿಎಂ ಭವನದ ಭಾಗಕ್ಕೆ ಪ್ರವೇಶಿಸಲು ಯತ್ನಿಸಿದರು” ಎಂದು ಆತಿಶಿ ಆರೋಪ ಮಾಡಿದ್ದಾರೆ.

“ಇದು ಬಿಜೆಪಿಯ ಪಿತೂರಿ ಎಂದು ಇಡೀ ಘಟನೆ ಸಾಬೀತುಪಡಿಸುತ್ತದೆ ಮತ್ತು ಕೇಜ್ರಿವಾಲ್ ಅವರನ್ನು ಬಂಧಿಸಲು ಸ್ವಾತಿ ಮಲಿವಾಲ್ ಅವರನ್ನು ಮುಖ ಮಾಡಲಾಗಿತ್ತು” ಎಂದು ಅವರು ಆರೋಪಿಸಿದ್ದಾರೆ.

ಥಳಿಸಿದ್ದನ್ನು ಒಪ್ಪಿಕೊಂಡಿದ್ದ ಸಂಜಯ್ ಸಿಂಗ್:

ಸಚಿವೆ ಆತಿಶಿ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆದರೆ, ಹಿರಿಯ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಮಂಗಳವಾರ ಮಲಿವಾಲ್ ಅವರೊಂದಿಗಿನ ಘಟನೆಯು “ಅತ್ಯಂತ ಖಂಡನೀಯ” ಎಂದು ಹೇಳಿದ್ದರು. ಬಿಭವ್ ಕುಮಾರ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದ್ದಾರೆ” ಎಂದು ಹೇಳಿದ್ದಾರೆ.

ಮಲಿವಾಲ್ ಜೊತೆಗಿನ ಅಸಭ್ಯ ವರ್ತನೆಯನ್ನು ಸಿಂಗ್ ಒಪ್ಪಿಕೊಂಡಿರುವ ಬಗ್ಗೆ ಅತಿಶಿ ಅವರನ್ನು ಕೇಳಿದಾಗ, “ಎಎಪಿ ಸಂಸದ ಸಂಜಯ್ ಸಿಂಗ್ ಅವರು ಮಲಿವಾಲ್ ಅವರನ್ನು ಭೇಟಿಯಾದರು ಮತ್ತು ಅವರು ಕೇವಲ ಅವರ ಆವೃತ್ತಿಯನ್ನು ಕೇಳಿಸಿಕೊಂಡಿದ್ದರು. ಆದರೆ, ಈಗ ಈ ವೀಡಿಯೊ ಸತ್ಯವನ್ನು ಹೊರತಂದಿದೆ” ಎಂದು ಅತಿಶಿ ಹೇಳಿದರು.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ; ಎಎಪಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...