Homeಕರ್ನಾಟಕಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ - ಸಿದ್ದರಾಮಯ್ಯ

ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ?...

- Advertisement -
- Advertisement -

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನಿನ್ನೆ ವಿಧಾನಸಭೆಯಲ್ಲಿ ಮಂಡಿಸಿದ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರ್ಯಾಲೋಚಿಸುವಂತೆ ಸೂಚಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧರಣಿಯನ್ನು ಮುಂದುವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದರು.

ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, “1964ರಿಂದಲೂ ನಮ್ಮ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈಗ ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುತ್ತಿದ್ದೇವೆ ಅಷ್ಟೇ. ಅಂತರ್‌ ರಾಜ್ಯ ನಿರ್ಬಂಧ, ಜಾನುವಾರುಗಳ ಖರೀದಿಗೆ ಪರವಾನಿಗೆ ಪಡೆಯುವುದು, ಅಕ್ರಮವಾಗಿ ಸಾಗಾಟ ಮಾಡಿದರೆ ಅದನ್ನು ಅಪರಾಧವೆಂದು ಪರಿಗಣಿಸುವುದು, ಶಿಕ್ಷೆ ಹಾಗೂ ದಂಡಕ್ಕೆ ಅವಕಾಶ ಕಲ್ಪಿಸಿದ್ದೇವೆ” ಎಂದರು.

ಕೊನೆಗೂ ಗದ್ದಲದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತು.


ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...