Homeಕರ್ನಾಟಕಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ - ಸಿದ್ದರಾಮಯ್ಯ

ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ?...

- Advertisement -
- Advertisement -

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನಿನ್ನೆ ವಿಧಾನಸಭೆಯಲ್ಲಿ ಮಂಡಿಸಿದ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರ್ಯಾಲೋಚಿಸುವಂತೆ ಸೂಚಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧರಣಿಯನ್ನು ಮುಂದುವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದರು.

ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, “1964ರಿಂದಲೂ ನಮ್ಮ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈಗ ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುತ್ತಿದ್ದೇವೆ ಅಷ್ಟೇ. ಅಂತರ್‌ ರಾಜ್ಯ ನಿರ್ಬಂಧ, ಜಾನುವಾರುಗಳ ಖರೀದಿಗೆ ಪರವಾನಿಗೆ ಪಡೆಯುವುದು, ಅಕ್ರಮವಾಗಿ ಸಾಗಾಟ ಮಾಡಿದರೆ ಅದನ್ನು ಅಪರಾಧವೆಂದು ಪರಿಗಣಿಸುವುದು, ಶಿಕ್ಷೆ ಹಾಗೂ ದಂಡಕ್ಕೆ ಅವಕಾಶ ಕಲ್ಪಿಸಿದ್ದೇವೆ” ಎಂದರು.

ಕೊನೆಗೂ ಗದ್ದಲದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತು.


ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...