Homeಕರ್ನಾಟಕಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ - ಸಿದ್ದರಾಮಯ್ಯ

ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ?...

- Advertisement -
- Advertisement -

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನಿನ್ನೆ ವಿಧಾನಸಭೆಯಲ್ಲಿ ಮಂಡಿಸಿದ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರ್ಯಾಲೋಚಿಸುವಂತೆ ಸೂಚಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧರಣಿಯನ್ನು ಮುಂದುವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದರು.

ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, “1964ರಿಂದಲೂ ನಮ್ಮ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈಗ ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುತ್ತಿದ್ದೇವೆ ಅಷ್ಟೇ. ಅಂತರ್‌ ರಾಜ್ಯ ನಿರ್ಬಂಧ, ಜಾನುವಾರುಗಳ ಖರೀದಿಗೆ ಪರವಾನಿಗೆ ಪಡೆಯುವುದು, ಅಕ್ರಮವಾಗಿ ಸಾಗಾಟ ಮಾಡಿದರೆ ಅದನ್ನು ಅಪರಾಧವೆಂದು ಪರಿಗಣಿಸುವುದು, ಶಿಕ್ಷೆ ಹಾಗೂ ದಂಡಕ್ಕೆ ಅವಕಾಶ ಕಲ್ಪಿಸಿದ್ದೇವೆ” ಎಂದರು.

ಕೊನೆಗೂ ಗದ್ದಲದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತು.


ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...