Homeಕರ್ನಾಟಕಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ - ಸಿದ್ದರಾಮಯ್ಯ

ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ?...

- Advertisement -
- Advertisement -

ರಾಜ್ಯ ಬಿಜೆಪಿಯ ಬಹುದಿನದ ಬಯಕೆಯಾಗಿದ್ದ ‘ಗೋಹತ್ಯೆ ನಿಷೇದ ಮಸೂದೆ’ ನಿನ್ನೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕಾರ ಪಡೆದುಕೊಂಡಿದೆ.

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋ ಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.”

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ದುರ್ಬಳಕೆ ಎಂದ ಹೈಕೋರ್ಟ್: ಮ‌ತ್ತೊಮ್ಮೆ ಗೋಹತ್ಯೆಗೆ ಜೈಲುಶಿಕ್ಷೆ ಎಂದ ಯೋಗಿ!

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ನಿನ್ನೆ ವಿಧಾನಸಭೆಯಲ್ಲಿ ಮಂಡಿಸಿದ ವಿಧೇಯಕವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪರ್ಯಾಲೋಚಿಸುವಂತೆ ಸೂಚಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧರಣಿಯನ್ನು ಮುಂದುವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಚರ್ಚೆಯಲ್ಲಿ ಪಾಲ್ಗೊಳ್ಳಲು ನಾವು ಸಿದ್ಧವಾಗಿದ್ದೇವೆ. ಆದುದರಿಂದ, ನಾಳೆ ಬೆಳಗ್ಗೆ ಈ ವಿಧೇಯಕದ ಬಗ್ಗೆ ಚರ್ಚೆ ನಡೆಸೋಣ. ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿಕೊಂಡು ಬಂದ ತಕ್ಷಣ ದೇಶದಲ್ಲಿ ಏನು ಪ್ರಳಯ ಆಗುವುದಿಲ್ಲ. ವಿಧೇಯಕದ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದೇವೆ ಎಂದು ಹೇಳಿದರೂ ಅವಕಾಶ ನೀಡದೆ ಹೋದರೆ ಈ ಸದನದ ಪಾವಿತ್ರ್ಯತೆ ಹೋಗುತ್ತದೆ. ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ನಿಮ್ಮ ಅಧ್ಯಕ್ಷತೆ(ಸ್ಪೀಕರ್)ಯಲ್ಲಿ ಕರೆಯುವುದು ಏಕೆ? ನಮ್ಮನ್ನು ಆ ಸಭೆಗೆ ಆಹ್ವಾನಿಸುವುದು ಏಕೆ? ನಿನ್ನೆ ನಡೆದ ಸಭೆಯಲ್ಲಿ ಸಂಸದೀಯ ಕಾರ್ಯದರ್ಶಿಗಳ ನೇಮಕದ ವಿಧೇಯಕ ಹಿಂಪಡೆಯುವುದು ಹಾಗೂ ವಿಶ್ವವಿದ್ಯಾಲಯಗಳ ವಿಧೇಯಕ ಮಂಡನೆ ಮತ್ತು ಆಧ್ಯಾದೇಶಗಳಿಗೆ ಸಂಬಂಧಿಸಿದ ವಿಧೇಯಕಗಳನ್ನು ತರುವುದಷ್ಟೇ ಚರ್ಚೆಯಾಗಿದ್ದು” ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

“ಅಜೆಂಡಾದಲ್ಲಿ ಇರದಿದ್ದರೂ ತರಾತುರಿಯಲ್ಲಿ ಈ ವಿಧೇಯಕವನ್ನು ತಂದಿದ್ದು ಏಕೆ? ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ವಿಧೇಯಕವನ್ನು ಮಂಡನೆ ಮಾಡುವ ವೇಳೆ ಅವರ ಬಳಿ ವಿಧೇಯಕದ ಪ್ರತಿಯೂ ಇರಲಿಲ್ಲ. ಈ ವಿಧೇಯಕ ತರದಂತೆ ನಾವೇನಾದರೂ ಸರಕಾರದ ಅಡ್ಡ ನಿಂತಿದ್ದೇವಾ? ಚರ್ಚೆ ಮಾಡಲ್ಲ ಎಂದು ಹೇಳಿದ್ದೇವಾ? ಆದರೂ ಕಳ್ಳತನದಿಂದ, ಹಿಂಬಾಗಿಲ ಮೂಲಕ ಈ ವಿಧೇಯಕ ಜಾರಿಗೆ ತರಲು ಮುಂದಾಗಿರುವುದು ಏಕೆ? ಗ್ರಾಮಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ದುರುದ್ದೇಶದಿಂದ ಈ ವಿಧೇಯಕ ತರಲಾಗಿದೆ. ನೀವು ಗೋಮಾತೆಯ ಮೇಲೆ ಪ್ರಮಾಣ ಮಾಡಿ ಹೇಳಿ ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ” ಎಂದು ಸಿದ್ದರಾಮಯ್ಯ ಗುಡುಗಿದರು.

ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ, “1964ರಿಂದಲೂ ನಮ್ಮ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಈಗ ಅದರಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡುತ್ತಿದ್ದೇವೆ ಅಷ್ಟೇ. ಅಂತರ್‌ ರಾಜ್ಯ ನಿರ್ಬಂಧ, ಜಾನುವಾರುಗಳ ಖರೀದಿಗೆ ಪರವಾನಿಗೆ ಪಡೆಯುವುದು, ಅಕ್ರಮವಾಗಿ ಸಾಗಾಟ ಮಾಡಿದರೆ ಅದನ್ನು ಅಪರಾಧವೆಂದು ಪರಿಗಣಿಸುವುದು, ಶಿಕ್ಷೆ ಹಾಗೂ ದಂಡಕ್ಕೆ ಅವಕಾಶ ಕಲ್ಪಿಸಿದ್ದೇವೆ” ಎಂದರು.

ಕೊನೆಗೂ ಗದ್ದಲದ ನಡುವೆಯೇ ವಿಧೇಯಕಕ್ಕೆ ಅನುಮೋದನೆ ಸಿಕ್ಕಿತು.


ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...