Homeಅಂತರಾಷ್ಟ್ರೀಯಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

ಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

- Advertisement -
- Advertisement -

2012ರಲ್ಲಿ ಅತ್ಯಾಚಾರವೆಸಗಿದ್ದಾರೆಂಬ ಆರೋಪದಲ್ಲಿ ಬ್ರಿಟನ್‌ನ ಜೈಲಿನಲ್ಲಿದ್ದ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಅವರ ಮೇಲಿನ ತನಿಖೆಯನ್ನು ಕೈಬಿಡಲಾಗಿದೆ  ಎಂದು ಸ್ವೀಡಿಷ್ ಪ್ರಾಸಿಕ್ಯೂಟರ್ ಮಂಗಳವಾರ ತಿಳಿಸಿದ್ದಾರೆ.

2012ರಲ್ಲಿ ಅಸ್ಸಾಂಜೆಯವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿತ್ತು. ಅಸ್ಸಾಂಜೆಯವರು ಲಂಡನ್ ನ್ಯಾಯಾಲಯದಲ್ಲಿ ಜಾಮೀನು ಪಡೆದು ಹೊರಬಂದಿದ್ದರು. ಜೈಲಿನಿಂದ ಹೊರಬಂದ ಅಸ್ಸಾಂಜೆಯವರು ನ್ಯಾಯಾಂಗ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಅಸ್ಸಾಂಜೆಯವರು ಕಳೆದ ಏಳು ವರ್ಷಗಳಿಂದ ಲಂಡನ್‌ನಲ್ಲಿರುವ ಈಕ್ವೆಡಾರ್ ರಾಯಬಾರಿ ಕಚೇರಿಯಲ್ಲಿ ಆಶ್ರಯ ಪಡೆದುಕೊಂಡಿದ್ದರು.

ಯಾವಾಗ ಈಕ್ವೇಡಾರ್‌ ಐಎಂಎಫ್‌ ಜೊತೆಗೆ ಒಪ್ಪಂದ ಮಾಡಿಕೊಂಡಿತೋ ಆ ಷರತ್ತಿನ ಭಾಗವಾಗಿ ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ರಾಯಭಾರಿ ಕಛೇರಿಯಿಂದ ಹೊರಗೆ ಕಳಿಸಲಾಗಿತ್ತು. ಹೊರಬಂದ ತಕ್ಷಣವೇ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ಬಂಧಿಸಲಾಗಿದ್ದು ಸಧ್ಯಕ್ಕೆ ಆ ಕಾರಣಕ್ಕಾಗಿ ಅವರು 50 ವಾರಗಳ ಬಂಧನ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಅತ್ಯಾಚಾರ ತನಿಖೆಯ ವಿಚಾರವಾಗಿ ಸುದ್ದಿ ಗೋಷ್ಠಿ ಆಯೋಜಿಸಿ ಮಾತನಾಡಿದ ಪಬ್ಲಿಕ್ ಪ್ರಸಿಕ್ಯೂಷನ್ನ ಉಪನಿರ್ದೇಶಕ ಇವಾ-ಮೇರಿ ಪರ್ಸನ್ ಅಸ್ಸಾಂಜೆಯವರ ಮೇಲಿನ ತನಿಖೆಯನ್ನು ಕೈಬಿಡಲು ನಿರ್ಧರಿಸಲಾಗಿದೆ. ಈ ಪ್ರಕರಣ ದಾಖಲಾಗಿ ಹಲವು ವರ್ಷಗಳು ಕಳೆದಿವೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಗಣನೀಯವಾಗಿ ದುರ್ಬಲಗೊಂಡಿವೆ. ಆ ಕಾರಣಕ್ಕಾಗಿ ತನಿಖೆಯನ್ನು ಕೈಬಿಡಲಾಗಿದೆ ಎಂದು  ತಿಳಿಸಿದರು.

ಅಸ್ಸಾಂಜೆಯವರು ವಿಶ್ವದ ಬಲಾಢ್ಯ ರಾಷ್ಟ್ರಗಳ ಅವ್ಯವಹಾರಗಳನ್ನು ತಮ್ಮ ವಿಕಿಲೀಕ್ಸ್‌ ಮೂಲಕ ಬೆತ್ತಲು ಮಾಡಿದುದ್ದರ ಪರಿಣಾಮವಾಗಿ ಅವರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಹಿಂಸೆ ನೀಡಲಾಗುತ್ತಿದೆ ಎನ್ನುವುದು ಅವರ ಬೆಂಬಲಿಗರ ಅಭಿಪ್ರಾಯವಾಗಿದೆ. ಈಗ ನ್ಯಾಯಾಲಯದ ತೀರ್ಪು ಕೂಡ ಅದಕ್ಕೆ ಪುಷ್ಠಿ ಕೊಡುವಂತಿದೆ. ಮುಂದೆ ಈ ಪ್ರಕರಣ ಏನಾಗುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೋರಾಟಗಾರನೊಬ್ಬನಿಗೆ ಜಯ ಸಿಕ್ಕಿರುವುದು ಸ್ವಾಗತಾರ್ಹ. ನಮ್ಮ ದೊ.ನರಸಿಂಹಮೂರ್ತಿ ಯವರಿಗೂ ಸಹ ಆದಷ್ಟು ಬೇಗ ಜಾಮೀನು ಸಿಗಲಿ ಎಂದು ಆಶಿಸೋಣ.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...