Homeಅಂತರಾಷ್ಟ್ರೀಯಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

ಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

- Advertisement -
- Advertisement -

2012ರಲ್ಲಿ ಅತ್ಯಾಚಾರವೆಸಗಿದ್ದಾರೆಂಬ ಆರೋಪದಲ್ಲಿ ಬ್ರಿಟನ್‌ನ ಜೈಲಿನಲ್ಲಿದ್ದ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಅವರ ಮೇಲಿನ ತನಿಖೆಯನ್ನು ಕೈಬಿಡಲಾಗಿದೆ  ಎಂದು ಸ್ವೀಡಿಷ್ ಪ್ರಾಸಿಕ್ಯೂಟರ್ ಮಂಗಳವಾರ ತಿಳಿಸಿದ್ದಾರೆ.

2012ರಲ್ಲಿ ಅಸ್ಸಾಂಜೆಯವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿತ್ತು. ಅಸ್ಸಾಂಜೆಯವರು ಲಂಡನ್ ನ್ಯಾಯಾಲಯದಲ್ಲಿ ಜಾಮೀನು ಪಡೆದು ಹೊರಬಂದಿದ್ದರು. ಜೈಲಿನಿಂದ ಹೊರಬಂದ ಅಸ್ಸಾಂಜೆಯವರು ನ್ಯಾಯಾಂಗ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಅಸ್ಸಾಂಜೆಯವರು ಕಳೆದ ಏಳು ವರ್ಷಗಳಿಂದ ಲಂಡನ್‌ನಲ್ಲಿರುವ ಈಕ್ವೆಡಾರ್ ರಾಯಬಾರಿ ಕಚೇರಿಯಲ್ಲಿ ಆಶ್ರಯ ಪಡೆದುಕೊಂಡಿದ್ದರು.

ಯಾವಾಗ ಈಕ್ವೇಡಾರ್‌ ಐಎಂಎಫ್‌ ಜೊತೆಗೆ ಒಪ್ಪಂದ ಮಾಡಿಕೊಂಡಿತೋ ಆ ಷರತ್ತಿನ ಭಾಗವಾಗಿ ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ರಾಯಭಾರಿ ಕಛೇರಿಯಿಂದ ಹೊರಗೆ ಕಳಿಸಲಾಗಿತ್ತು. ಹೊರಬಂದ ತಕ್ಷಣವೇ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ಬಂಧಿಸಲಾಗಿದ್ದು ಸಧ್ಯಕ್ಕೆ ಆ ಕಾರಣಕ್ಕಾಗಿ ಅವರು 50 ವಾರಗಳ ಬಂಧನ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಅತ್ಯಾಚಾರ ತನಿಖೆಯ ವಿಚಾರವಾಗಿ ಸುದ್ದಿ ಗೋಷ್ಠಿ ಆಯೋಜಿಸಿ ಮಾತನಾಡಿದ ಪಬ್ಲಿಕ್ ಪ್ರಸಿಕ್ಯೂಷನ್ನ ಉಪನಿರ್ದೇಶಕ ಇವಾ-ಮೇರಿ ಪರ್ಸನ್ ಅಸ್ಸಾಂಜೆಯವರ ಮೇಲಿನ ತನಿಖೆಯನ್ನು ಕೈಬಿಡಲು ನಿರ್ಧರಿಸಲಾಗಿದೆ. ಈ ಪ್ರಕರಣ ದಾಖಲಾಗಿ ಹಲವು ವರ್ಷಗಳು ಕಳೆದಿವೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಗಣನೀಯವಾಗಿ ದುರ್ಬಲಗೊಂಡಿವೆ. ಆ ಕಾರಣಕ್ಕಾಗಿ ತನಿಖೆಯನ್ನು ಕೈಬಿಡಲಾಗಿದೆ ಎಂದು  ತಿಳಿಸಿದರು.

ಅಸ್ಸಾಂಜೆಯವರು ವಿಶ್ವದ ಬಲಾಢ್ಯ ರಾಷ್ಟ್ರಗಳ ಅವ್ಯವಹಾರಗಳನ್ನು ತಮ್ಮ ವಿಕಿಲೀಕ್ಸ್‌ ಮೂಲಕ ಬೆತ್ತಲು ಮಾಡಿದುದ್ದರ ಪರಿಣಾಮವಾಗಿ ಅವರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಹಿಂಸೆ ನೀಡಲಾಗುತ್ತಿದೆ ಎನ್ನುವುದು ಅವರ ಬೆಂಬಲಿಗರ ಅಭಿಪ್ರಾಯವಾಗಿದೆ. ಈಗ ನ್ಯಾಯಾಲಯದ ತೀರ್ಪು ಕೂಡ ಅದಕ್ಕೆ ಪುಷ್ಠಿ ಕೊಡುವಂತಿದೆ. ಮುಂದೆ ಈ ಪ್ರಕರಣ ಏನಾಗುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೋರಾಟಗಾರನೊಬ್ಬನಿಗೆ ಜಯ ಸಿಕ್ಕಿರುವುದು ಸ್ವಾಗತಾರ್ಹ. ನಮ್ಮ ದೊ.ನರಸಿಂಹಮೂರ್ತಿ ಯವರಿಗೂ ಸಹ ಆದಷ್ಟು ಬೇಗ ಜಾಮೀನು ಸಿಗಲಿ ಎಂದು ಆಶಿಸೋಣ.

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....