Homeಅಂತರಾಷ್ಟ್ರೀಯಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

ಜೂಲಿಯನ್ ಅಸ್ಸಾಂಜೆ ಮೇಲಿನ ಆರೋಪಕ್ಕೆ ಸಾಕ್ಷಿಗಳಿಲ್ಲ, ತನಿಖೆ ರದ್ದು: ಸ್ವೀಡಿಷ್ ಪ್ರಾಸಿಕ್ಯೂಟರ್..

- Advertisement -
- Advertisement -

2012ರಲ್ಲಿ ಅತ್ಯಾಚಾರವೆಸಗಿದ್ದಾರೆಂಬ ಆರೋಪದಲ್ಲಿ ಬ್ರಿಟನ್‌ನ ಜೈಲಿನಲ್ಲಿದ್ದ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಅವರ ಮೇಲಿನ ತನಿಖೆಯನ್ನು ಕೈಬಿಡಲಾಗಿದೆ  ಎಂದು ಸ್ವೀಡಿಷ್ ಪ್ರಾಸಿಕ್ಯೂಟರ್ ಮಂಗಳವಾರ ತಿಳಿಸಿದ್ದಾರೆ.

2012ರಲ್ಲಿ ಅಸ್ಸಾಂಜೆಯವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿತ್ತು. ಅಸ್ಸಾಂಜೆಯವರು ಲಂಡನ್ ನ್ಯಾಯಾಲಯದಲ್ಲಿ ಜಾಮೀನು ಪಡೆದು ಹೊರಬಂದಿದ್ದರು. ಜೈಲಿನಿಂದ ಹೊರಬಂದ ಅಸ್ಸಾಂಜೆಯವರು ನ್ಯಾಯಾಂಗ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಅಸ್ಸಾಂಜೆಯವರು ಕಳೆದ ಏಳು ವರ್ಷಗಳಿಂದ ಲಂಡನ್‌ನಲ್ಲಿರುವ ಈಕ್ವೆಡಾರ್ ರಾಯಬಾರಿ ಕಚೇರಿಯಲ್ಲಿ ಆಶ್ರಯ ಪಡೆದುಕೊಂಡಿದ್ದರು.

ಯಾವಾಗ ಈಕ್ವೇಡಾರ್‌ ಐಎಂಎಫ್‌ ಜೊತೆಗೆ ಒಪ್ಪಂದ ಮಾಡಿಕೊಂಡಿತೋ ಆ ಷರತ್ತಿನ ಭಾಗವಾಗಿ ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ರಾಯಭಾರಿ ಕಛೇರಿಯಿಂದ ಹೊರಗೆ ಕಳಿಸಲಾಗಿತ್ತು. ಹೊರಬಂದ ತಕ್ಷಣವೇ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದಡಿ ಬಂಧಿಸಲಾಗಿದ್ದು ಸಧ್ಯಕ್ಕೆ ಆ ಕಾರಣಕ್ಕಾಗಿ ಅವರು 50 ವಾರಗಳ ಬಂಧನ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಅತ್ಯಾಚಾರ ತನಿಖೆಯ ವಿಚಾರವಾಗಿ ಸುದ್ದಿ ಗೋಷ್ಠಿ ಆಯೋಜಿಸಿ ಮಾತನಾಡಿದ ಪಬ್ಲಿಕ್ ಪ್ರಸಿಕ್ಯೂಷನ್ನ ಉಪನಿರ್ದೇಶಕ ಇವಾ-ಮೇರಿ ಪರ್ಸನ್ ಅಸ್ಸಾಂಜೆಯವರ ಮೇಲಿನ ತನಿಖೆಯನ್ನು ಕೈಬಿಡಲು ನಿರ್ಧರಿಸಲಾಗಿದೆ. ಈ ಪ್ರಕರಣ ದಾಖಲಾಗಿ ಹಲವು ವರ್ಷಗಳು ಕಳೆದಿವೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳು ಗಣನೀಯವಾಗಿ ದುರ್ಬಲಗೊಂಡಿವೆ. ಆ ಕಾರಣಕ್ಕಾಗಿ ತನಿಖೆಯನ್ನು ಕೈಬಿಡಲಾಗಿದೆ ಎಂದು  ತಿಳಿಸಿದರು.

ಅಸ್ಸಾಂಜೆಯವರು ವಿಶ್ವದ ಬಲಾಢ್ಯ ರಾಷ್ಟ್ರಗಳ ಅವ್ಯವಹಾರಗಳನ್ನು ತಮ್ಮ ವಿಕಿಲೀಕ್ಸ್‌ ಮೂಲಕ ಬೆತ್ತಲು ಮಾಡಿದುದ್ದರ ಪರಿಣಾಮವಾಗಿ ಅವರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಹಿಂಸೆ ನೀಡಲಾಗುತ್ತಿದೆ ಎನ್ನುವುದು ಅವರ ಬೆಂಬಲಿಗರ ಅಭಿಪ್ರಾಯವಾಗಿದೆ. ಈಗ ನ್ಯಾಯಾಲಯದ ತೀರ್ಪು ಕೂಡ ಅದಕ್ಕೆ ಪುಷ್ಠಿ ಕೊಡುವಂತಿದೆ. ಮುಂದೆ ಈ ಪ್ರಕರಣ ಏನಾಗುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೋರಾಟಗಾರನೊಬ್ಬನಿಗೆ ಜಯ ಸಿಕ್ಕಿರುವುದು ಸ್ವಾಗತಾರ್ಹ. ನಮ್ಮ ದೊ.ನರಸಿಂಹಮೂರ್ತಿ ಯವರಿಗೂ ಸಹ ಆದಷ್ಟು ಬೇಗ ಜಾಮೀನು ಸಿಗಲಿ ಎಂದು ಆಶಿಸೋಣ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...