Homeಮುಖಪುಟಕಮಲೇಶ್ ತಿವಾರಿ ಹತ್ಯೆ ಪ್ರಕರಣ: ಸಿಹಿ ಪೊಟ್ಟಣದಲ್ಲಿ ವಿಳಾಸ, ಮೂವರ ಬಂಧನ

ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ಸಿಹಿ ಪೊಟ್ಟಣದಲ್ಲಿ ವಿಳಾಸ, ಮೂವರ ಬಂಧನ

- Advertisement -
- Advertisement -

ಅಖಿಲ ಭಾರತ ಹಿಂದೂ ಮಹಾಸಭಾ ಅಧ್ಯಕ್ಷ ಕಮಲೇಶ್ ತಿವಾರಿ ಹತ್ಯೆ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಮೂವರನ್ನು ಸೂರತ್ ನಲ್ಲಿ ಬಂಧಿಸಿದ್ದಾರೆ. ಸೂರತ್ ನಿಂದ ನಾಲ್ವರು ಮತ್ತು ಅಲಹಾಬಾದ್ ನಿಂದ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಫೈಜನ್ ಯೂನಸ್ (21), ಮೌಲಾನಾ ಮೊಹ್ಸಿನ್ ಶೇಕ್ (24), ರಶೀದ್ ಅಹ್ಮದ್, ರಶೀದ್ ಪಠಾಣ್ (23) ಬಂಧಿತರು.  ಗುಜರಾತ್ ಪೊಲೀಸರ ಸಹಾಯದಿಂದ ಶಂಕಿತರನ್ನು ಬಂಧಿಸಲಾಗಿದೆ.

ಕಮಲೇಶ್ ತಿವಾರಿ ಹತ್ಯೆಯಾದ ಪ್ರದೇಶದಲ್ಲಿ ಸೂರತ್ ನ ವಿಳಾಸವಿರುವ ಸಿಹಿತಿಂಡಿ ಬಾಕ್ಸ್ ಒಂದು ಪೊಲೀಸರಿಗೆ ದೊರೆತಿತ್ತು. ಇದರ ಬೆನ್ನತ್ತಿ ಹೊರಟ ಪೊಲೀಸರಿಗೆ ಸಿಹಿ ತಿಂಡಿ ಪೊಟ್ಟಣವನ್ನು ಸೂರತ್ ನ ನವ್ ಸಾರಿ ಬಜಾರ್ ನಲ್ಲಿರುವ ಧರ್ತಿ ಫರಸನ್ ಅಂಗಡಿಯಿಂದ ಖರೀದಿಸಿರುವುದು ಪತ್ತೆಯಾಯಿತು. ಅಂಗಡಿಯ ಮಾಲೀಕನ ವಿಚಾರಣೆ ನಡೆಸಿದ ಅಪರಾಧ ವಿಭಾಗ ಪೊಲೀಸರ ತಂಡ ಶಂಕಿತರ ಪತ್ತೆಗೆ ಬಲೆ ಬೀಸಿತ್ತು.

ಅಂಗಡಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗಿದೆ.  ಲಖನೌನ ಖುರ್ಷೀದ್ ಬಾಗ್ ನಲ್ಲಿ ಅಳವಡಿಸಲಾಗಿರುವ 25 ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಕೇಸರಿ ಹೊದಿಕೆ ಹೊದ್ದಿರುವ ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಮೂರು ಡಜನ್ ಗಿಂತ ಹೆಚ್ಚು ಮೊಬೈಲ್ ಸಂಖ್ಯೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಹತ್ಯೆಗೆ ಸಂಚು ಹೂಡಿದ್ದವರನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಎಸ್ ಎಸ್ ಪಿ ಕಲಾನಿಧಿ ನೈಥಾನಿ ಮಾಹಿತಿ ನೀಡಿದ್ದಾರೆ. ಸಿಹಿ ತಿಂಡಿ ಪೊಟ್ಟಣದಲ್ಲೇ ಹತ್ಯೆಗೆ ಬಳಸಿದ ಆಯುಧವನ್ನೂ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂವರು ಶಂಕಿತರನ್ನು ನ್ಯಾಯಾಂಗಬಂಧನಕ್ಕೆ ಒಳಪಡಿಸಲಾಗಿದೆ. ಶಂಕಿತರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ. ಇನ್ನೊಂದು ಮೂಲದ ಪ್ರಕಾರ, ಸುಮಾರು 15 ಗಂಟೆಗಳಲ್ಲಿ ಮಹಿಳೆಯನ್ನು ಸೇರಿದಂತೆ 15  ಮಂದಿ ಬಗ್ಗೆ ಸಿಸಿ ಕ್ಯಾಮರಾ ದೃಶ್ಯಾವಳಿಗಳು ಶಂಕೆ ಹುಟ್ಟು ಹಾಕಿವೆ. ಪ್ರಕರಣದಲ್ಲಿ 15 ಮಂದಿಯ ಕೈವಾಡವಿರುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್, ಬಿಜ್ನೋರ್, ಕಾನ್ಪುರ, ಡೆಹತ್, ಲಕ್ನೋದಲ್ಲಿ 10 ಜನರನ್ನು ಬಂಧಿಸಲಾಗಿತ್ತು ಎಂದು ಹೇಳಿದೆ.

ಪ್ರಕರಣದಲ್ಲಿ ಆರೋಪಿಗಳಿಗಾಗಿ ಹುಡುಕಾಟ ತೀವ್ರಗೊಂಡಿದೆ. ಎಎಸ್ಪಿ ದಿನೇಶ್ ಪುರಿ, ವಲಯ ಅಧಿಕಾರಿ ಗಾಜಿಪುರ ಡಿ.ಕೆ.ಸಿಂಗ್, ಸಿಒ ಹಜರತ್ ಗಂಜ್ ಅಭಯ್ ಮಿಶ್ರಾ ನೇತೃತ್ವದ ಮೂರು ಪ್ರಮುಖ ತಂಡಗಳು ತನಿಖೆ ನಡೆಸಿವೆ. ಸಿಸಿ ಕ್ಯಾಮರಾ ಮತ್ತು ಇತರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...