Homeಮುಖಪುಟಕಮಲೇಶ್ ತಿವಾರಿ ಹತ್ಯೆ ಪ್ರಕರಣ: ಸಿಹಿ ಪೊಟ್ಟಣದಲ್ಲಿ ವಿಳಾಸ, ಮೂವರ ಬಂಧನ

ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ಸಿಹಿ ಪೊಟ್ಟಣದಲ್ಲಿ ವಿಳಾಸ, ಮೂವರ ಬಂಧನ

- Advertisement -
- Advertisement -

ಅಖಿಲ ಭಾರತ ಹಿಂದೂ ಮಹಾಸಭಾ ಅಧ್ಯಕ್ಷ ಕಮಲೇಶ್ ತಿವಾರಿ ಹತ್ಯೆ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ಮೂವರನ್ನು ಸೂರತ್ ನಲ್ಲಿ ಬಂಧಿಸಿದ್ದಾರೆ. ಸೂರತ್ ನಿಂದ ನಾಲ್ವರು ಮತ್ತು ಅಲಹಾಬಾದ್ ನಿಂದ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಫೈಜನ್ ಯೂನಸ್ (21), ಮೌಲಾನಾ ಮೊಹ್ಸಿನ್ ಶೇಕ್ (24), ರಶೀದ್ ಅಹ್ಮದ್, ರಶೀದ್ ಪಠಾಣ್ (23) ಬಂಧಿತರು.  ಗುಜರಾತ್ ಪೊಲೀಸರ ಸಹಾಯದಿಂದ ಶಂಕಿತರನ್ನು ಬಂಧಿಸಲಾಗಿದೆ.

ಕಮಲೇಶ್ ತಿವಾರಿ ಹತ್ಯೆಯಾದ ಪ್ರದೇಶದಲ್ಲಿ ಸೂರತ್ ನ ವಿಳಾಸವಿರುವ ಸಿಹಿತಿಂಡಿ ಬಾಕ್ಸ್ ಒಂದು ಪೊಲೀಸರಿಗೆ ದೊರೆತಿತ್ತು. ಇದರ ಬೆನ್ನತ್ತಿ ಹೊರಟ ಪೊಲೀಸರಿಗೆ ಸಿಹಿ ತಿಂಡಿ ಪೊಟ್ಟಣವನ್ನು ಸೂರತ್ ನ ನವ್ ಸಾರಿ ಬಜಾರ್ ನಲ್ಲಿರುವ ಧರ್ತಿ ಫರಸನ್ ಅಂಗಡಿಯಿಂದ ಖರೀದಿಸಿರುವುದು ಪತ್ತೆಯಾಯಿತು. ಅಂಗಡಿಯ ಮಾಲೀಕನ ವಿಚಾರಣೆ ನಡೆಸಿದ ಅಪರಾಧ ವಿಭಾಗ ಪೊಲೀಸರ ತಂಡ ಶಂಕಿತರ ಪತ್ತೆಗೆ ಬಲೆ ಬೀಸಿತ್ತು.

ಅಂಗಡಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗಿದೆ.  ಲಖನೌನ ಖುರ್ಷೀದ್ ಬಾಗ್ ನಲ್ಲಿ ಅಳವಡಿಸಲಾಗಿರುವ 25 ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ ಕೇಸರಿ ಹೊದಿಕೆ ಹೊದ್ದಿರುವ ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಮೂರು ಡಜನ್ ಗಿಂತ ಹೆಚ್ಚು ಮೊಬೈಲ್ ಸಂಖ್ಯೆಗಳನ್ನು ಸ್ಕ್ಯಾನ್ ಮಾಡುವ ಮೂಲಕ ಹತ್ಯೆಗೆ ಸಂಚು ಹೂಡಿದ್ದವರನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಎಸ್ ಎಸ್ ಪಿ ಕಲಾನಿಧಿ ನೈಥಾನಿ ಮಾಹಿತಿ ನೀಡಿದ್ದಾರೆ. ಸಿಹಿ ತಿಂಡಿ ಪೊಟ್ಟಣದಲ್ಲೇ ಹತ್ಯೆಗೆ ಬಳಸಿದ ಆಯುಧವನ್ನೂ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂವರು ಶಂಕಿತರನ್ನು ನ್ಯಾಯಾಂಗಬಂಧನಕ್ಕೆ ಒಳಪಡಿಸಲಾಗಿದೆ. ಶಂಕಿತರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ. ಇನ್ನೊಂದು ಮೂಲದ ಪ್ರಕಾರ, ಸುಮಾರು 15 ಗಂಟೆಗಳಲ್ಲಿ ಮಹಿಳೆಯನ್ನು ಸೇರಿದಂತೆ 15  ಮಂದಿ ಬಗ್ಗೆ ಸಿಸಿ ಕ್ಯಾಮರಾ ದೃಶ್ಯಾವಳಿಗಳು ಶಂಕೆ ಹುಟ್ಟು ಹಾಕಿವೆ. ಪ್ರಕರಣದಲ್ಲಿ 15 ಮಂದಿಯ ಕೈವಾಡವಿರುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್, ಬಿಜ್ನೋರ್, ಕಾನ್ಪುರ, ಡೆಹತ್, ಲಕ್ನೋದಲ್ಲಿ 10 ಜನರನ್ನು ಬಂಧಿಸಲಾಗಿತ್ತು ಎಂದು ಹೇಳಿದೆ.

ಪ್ರಕರಣದಲ್ಲಿ ಆರೋಪಿಗಳಿಗಾಗಿ ಹುಡುಕಾಟ ತೀವ್ರಗೊಂಡಿದೆ. ಎಎಸ್ಪಿ ದಿನೇಶ್ ಪುರಿ, ವಲಯ ಅಧಿಕಾರಿ ಗಾಜಿಪುರ ಡಿ.ಕೆ.ಸಿಂಗ್, ಸಿಒ ಹಜರತ್ ಗಂಜ್ ಅಭಯ್ ಮಿಶ್ರಾ ನೇತೃತ್ವದ ಮೂರು ಪ್ರಮುಖ ತಂಡಗಳು ತನಿಖೆ ನಡೆಸಿವೆ. ಸಿಸಿ ಕ್ಯಾಮರಾ ಮತ್ತು ಇತರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...