Homeನಿಜವೋ ಸುಳ್ಳೋಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ...

ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು..

- Advertisement -
- Advertisement -

ಸುಳ್ಳು ಸುದ್ದಿಗಳನ್ನು ವೈರಲ್ ಮಾಡುವುದರಲ್ಲಿ ಚಡ್ಡಿ ಪೈಲ್ವಾನರು ನಿಸ್ಸೀಮರು. ಇಂತಹ ಫೇಕ್ ನ್ಯೂಸ್‌ಗಳನ್ನು ಹಬ್ಬಿಸಿಯೇ 2014ರಲ್ಲಿ ಅಧಿಕಾರದ ಗದ್ದುಗೆಯನ್ನು ಚೋರ್ ಚೌಕಿದಾರರು ಆಕ್ರಮಿಸಿಕೊಂಡರು. ಇವರ ಹುಸಿ ಆಶ್ವಾಸನೆಗಳಲ್ಲಿ ಪ್ರಮುಖವಾದುದು “ಸ್ವಿಸ್ ಬ್ಯಾಂಕ್ ನಲ್ಲಿ ಭಾರತದ ಲೂಟಿಕೋರರು ಇಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆಂಬ” ದಾಳ ಜನರ ಮೇಲೆ ಹೆಚ್ಚು ಪರಿಣಾಮ ಬೀರಿತ್ತು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬುರುಡೆ ಆಶ್ವಾಸನೆ ಮತ್ತು ಖಾತೆಗೆ ಹಣ ಹಾಕಲು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರಬೇಕು, ಅದಕ್ಕಾಗಿ ಜನಧನ್ ಅಕೌಂಟ್ ಮಾಡಿಸಬೇಕೆಂಬುದನ್ನು ನಂಬಿದ ಜನರು ಅಕೌಂಟ್ ಕೂಡ ಮಾಡಿಸಿದ್ದೂ ಆಯಿತು. ಆದರೆ ಖಾತೆಗೆ 15 ಲಕ್ಷ ಜಮೆಮಾಡುವುದಿರಲಿ, ಮಿನಿಮಮ್ ಬ್ಯಾಲೆನ್ಸ್ ರೂಲ್ಸ್ ತಂದು ಜನ ಅಷ್ಟೋ ಇಷ್ಟೊ ಕೂಡಿಟ್ಟಿದ್ದ  ಹಣವನ್ನೂ ಅಕೌಂಟ್ ಗೆ ಹಾಕುವಂತೆ ಮಾಡಿದರು. ಮತಹಾಕಿದ ತಪ್ಪಿಗೆ ಉಚಿತವಾಗಿ ಬಂದ ಅಕೌಂಟ್ ಗೆ ತಾವೇ ದಂಡ ಕಟ್ಟುವಂತಹ ದುಸ್ಥಿತಿಗೆ ಜನರನ್ನು ತಂದು ಫೇಕ್ ಸರದಾರರು ಜನರನ್ನು ಯಾಮಾರಿಸಿದರು.

ಈಗ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚಡ್ಡಿ ಸರದಾರರು ತಮ್ಮ ಫೇಕ್ ನ್ಯೂಸ್ ಕಾರ್ಖಾನೆಯಿಂದ ಮತ್ತೊಂದು ಫೇಕ್ ನ್ಯೂಸನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬಿಸುತ್ತಿದೆ. ಅದೇನೆಂದರೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿರುವ ಭಾರತದ 24 ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬುದು. ಮೋದಿ ಮಹಾಶಯ ಹೇಳಿದಂತೆ ಕಪ್ಪುಹಣ ಕೂಳರ ಪಟ್ಟಿಯನ್ನು ತಂದರು. ಇದು ಟ್ರೇಲರ್ ಇನ್ನೂ ಪಿಕ್ಚರ್ ಬಾಕಿ ಇದೆ ಎಂದು ಚಡ್ಡಿ ಪೈಲ್ವಾನರು ಹರ್ಷೋದ್ಘಾರದಿಂದ ಹಬ್ಬಿಸುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನ ಕಪ್ಪು ಕೂಳರ ಕೊರಳ ಪಟ್ಟಿ ಹಿಡಿದ ಮೋದಿ ಎಂದು ಮಾಧ್ಯಮಗಳು ಸುದ್ದಿ ಮಾಡಿ ಬಕೆಟ್ ಹಿಡಿಯುವಲ್ಲಿ ನಾ ಮುಂದು ತಾ ಮುಂದು ಪೈಪೋಟಿ ನಡೆಸಿದವು.

ಆದರೆ ಸತ್ಯ ಏನಂದ್ರೆ ವಿಕಿಲೀಕ್ಸ್ ಈ ಬಗ್ಗೆ ಯಾವುದೇ ವರದಿಯನ್ನು ಮಾಡಿಲ್ಲ. ಫೇಕ್ ಸರದಾರರು ಹರಿಬಿಟ್ಟಿದ್ದ ಈ ಸುದ್ದಿಯ ಬಗ್ಗೆ ಬೂಮ್ ಲೈವ್ ಸಂಸ್ಥೆಯು ಫ್ಯಾಕ್ಟ್ ಚೆಕ್ ಮಾಡಿ ವರದಿಯನ್ನು ಪ್ರಕಟಿಸಿದೆ. ವಿಕಿಲೀಕ್ಸ್ ಕಪ್ಪು ಹಣ ಹೊಂದಿರುವವರ ಪಟ್ಟಿಯ ಬಿಡುಗಡೆ ಮಾಡಿರುವ ಬಗ್ಗೆ ಎಲ್ಲಿಯೂ ವರದಿ ಮಾಡಿಲ್ಲ. ಅಲ್ಲದೆ ವಿಕಿಲೀಕ್ಸ್‌ ಅಧಿಕೃತ ಟ್ವಿಟರ್ ಖಾತೆಯಲ್ಲಾಗಲೀ, ವೆಬ್ ಸೈಟ್ ನಲ್ಲಾಗಲೀ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಬೂಮ್ ಲೈಮ್ ದೃಢಪಡಿಸಿದೆ.

ಅಂದಹಾಗೆ ಚುನಾವಣೆಗಳನ್ನು ಗಿಮಿಕ್ ಮಾಡುತ್ತಲೇ ಎದುರಿಸುತ್ತಿರುವ ಚಡ್ಡಿ ಪೈಲ್ವಾನರ ಇಂತಹ ವರಸೆ ಇದೇ ಮೊದಲೇನೂ ಅಲ್ಲ. 2011ರಲ್ಲೇ ಇಂತದ್ದೇ 24 ಜನರ ಹೆಸರಿರುವ ಪಟ್ಟಿ ಎಲ್ಲಾ ಕಡೆ ಹರಿದಾಡಿತ್ತು. ನಂತರ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರವೂ ಮೋದಿ ಮೊದಲ ಹೆಜ್ಜೆ ಎಂದೂ ಫೇಕ್ ಸರದಾರರು ಇಂತದ್ದೇ ಸುದ್ದಿಯನ್ನು ಹಬ್ಬಿಸಿದ್ದರು. ತಮಾಷೆಯೆಂದರೆ ಈ ಚಡ್ಡಿ ಸರದಾರರಿಗೆ ಕೌಂಟರ್ ಕೊಟ್ಟು 2017-18ರಲ್ಲಿಯೂ ಇಂಥ ಫೇಕ್ ನ್ಯೂಸ್ ಹರಿದಾಡಿತ್ತು. ಆ ಪಟ್ಟಿಯಲ್ಲಿ ನಾನೊಬ್ಬ ಚೌಕಿದಾರ, ನಾನೂ ತಿನ್ನಲ್ಲ – ತಿನ್ನೋರಿಗೂ ಬಿಡಲ್ಲ ಎಂದು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದ ಮೋದಿಯವರ ಹೆಸರನ್ನೂ ಸೇರಿಸಿ ವೈರಲ್ ಮಾಡಲಾಗಿತ್ತು.

2011ರಲ್ಲಿ ಮೊದಲ ಬಾರಿಗೆ ಹರಿದು ಬಂದ ಸುದ್ದಿ ಫೇಕ್ ಎಂದು ವಿಕಿಲೀಕ್ಸ್ ಸ್ಪಷ್ಟಪಡಿಸಿತ್ತು. ಮುಂದೆಯೂ ಇಂಥದ್ದೇ ಫೇಕ್ ನ್ಯೂಸ್ ಹರಿದಾಡಲಾರಂಭಿಸಿದಾಗ ವಿಕಿಲೀಕ್ಸ್ ತಲೆ ಕೆಡಿಸಿಕೊಳ್ಳಲಿಲ್ಲ. ಒಟ್ಟಿನಲ್ಲಿ ಚುನಾವಣೆಗಳು ಎದುರಾದಾಗಲೆಲ್ಲಾ ಈ ದೇಶಕ್ಕೆ ಕಪ್ಪು ಹಣ ಕೂಳರ ಪಟ್ಟಿಗಳು ಬಿಡುಗಡೆಯಾಗುತ್ತವೆ. ದಸರಾ ಸಂದರ್ಭದಲ್ಲಿ ಭಯೋತ್ಪಾದರು ಮೈಸೂರು, ಬೆಂಗಳೂರಿನ ಮೇಲೆ ಅಟ್ಯಾಕ್ ಮಾಡುವ ಫೇಕ್ ಸಂದರ್ಭಗಳೂ, ಫೇಕ್ ಸುದ್ದಿಗಳು ಹೆಗ್ಗಿಲ್ಲದೆ ಹರಿಯುತ್ತವೆ. ಇಂತಹ ಫೇಕ್ ಸುದ್ದಿಗಳನ್ನು ನೋಡಿ ನಿಜವಾಗಿಯೂ ಅಟ್ಯಾಕ್ ಆದರೂ ಜನರು ತಲೆ ಕೆಡಿಸಿಕೊಳ್ಳದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ.

ಇದೆಲ್ಲದರ ಮಧ್ಯೆ, ಸಾಮಾನ್ಯ ಜ್ಞಾನವೂ, ವಿಶ್ಲೇಷಣೆಯೂ ಇಲ್ಲದ ನ್ಯೂಸ್ ಚಾನಲ್ ಗಳು ಅದು ಫೇಕ್ ಅಥವಾ ಫ್ಯಾಕ್ಟ್ ಆಗಿದೆಯೇ ಎಂದೂ ನೋಡದೆ ನಾಮುಂದು ತಾಮುಂದು ಎಂಬಂತೆ ಫೇಕ್ ಸುದ್ದಿಯನ್ನೇ ಬಿತ್ತರಿಸುತ್ತಿರುವುದು ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....