Homeನಿಜವೋ ಸುಳ್ಳೋಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ...

ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು..

- Advertisement -
- Advertisement -

ಸುಳ್ಳು ಸುದ್ದಿಗಳನ್ನು ವೈರಲ್ ಮಾಡುವುದರಲ್ಲಿ ಚಡ್ಡಿ ಪೈಲ್ವಾನರು ನಿಸ್ಸೀಮರು. ಇಂತಹ ಫೇಕ್ ನ್ಯೂಸ್‌ಗಳನ್ನು ಹಬ್ಬಿಸಿಯೇ 2014ರಲ್ಲಿ ಅಧಿಕಾರದ ಗದ್ದುಗೆಯನ್ನು ಚೋರ್ ಚೌಕಿದಾರರು ಆಕ್ರಮಿಸಿಕೊಂಡರು. ಇವರ ಹುಸಿ ಆಶ್ವಾಸನೆಗಳಲ್ಲಿ ಪ್ರಮುಖವಾದುದು “ಸ್ವಿಸ್ ಬ್ಯಾಂಕ್ ನಲ್ಲಿ ಭಾರತದ ಲೂಟಿಕೋರರು ಇಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆಂಬ” ದಾಳ ಜನರ ಮೇಲೆ ಹೆಚ್ಚು ಪರಿಣಾಮ ಬೀರಿತ್ತು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬುರುಡೆ ಆಶ್ವಾಸನೆ ಮತ್ತು ಖಾತೆಗೆ ಹಣ ಹಾಕಲು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರಬೇಕು, ಅದಕ್ಕಾಗಿ ಜನಧನ್ ಅಕೌಂಟ್ ಮಾಡಿಸಬೇಕೆಂಬುದನ್ನು ನಂಬಿದ ಜನರು ಅಕೌಂಟ್ ಕೂಡ ಮಾಡಿಸಿದ್ದೂ ಆಯಿತು. ಆದರೆ ಖಾತೆಗೆ 15 ಲಕ್ಷ ಜಮೆಮಾಡುವುದಿರಲಿ, ಮಿನಿಮಮ್ ಬ್ಯಾಲೆನ್ಸ್ ರೂಲ್ಸ್ ತಂದು ಜನ ಅಷ್ಟೋ ಇಷ್ಟೊ ಕೂಡಿಟ್ಟಿದ್ದ  ಹಣವನ್ನೂ ಅಕೌಂಟ್ ಗೆ ಹಾಕುವಂತೆ ಮಾಡಿದರು. ಮತಹಾಕಿದ ತಪ್ಪಿಗೆ ಉಚಿತವಾಗಿ ಬಂದ ಅಕೌಂಟ್ ಗೆ ತಾವೇ ದಂಡ ಕಟ್ಟುವಂತಹ ದುಸ್ಥಿತಿಗೆ ಜನರನ್ನು ತಂದು ಫೇಕ್ ಸರದಾರರು ಜನರನ್ನು ಯಾಮಾರಿಸಿದರು.

ಈಗ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚಡ್ಡಿ ಸರದಾರರು ತಮ್ಮ ಫೇಕ್ ನ್ಯೂಸ್ ಕಾರ್ಖಾನೆಯಿಂದ ಮತ್ತೊಂದು ಫೇಕ್ ನ್ಯೂಸನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬಿಸುತ್ತಿದೆ. ಅದೇನೆಂದರೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿರುವ ಭಾರತದ 24 ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬುದು. ಮೋದಿ ಮಹಾಶಯ ಹೇಳಿದಂತೆ ಕಪ್ಪುಹಣ ಕೂಳರ ಪಟ್ಟಿಯನ್ನು ತಂದರು. ಇದು ಟ್ರೇಲರ್ ಇನ್ನೂ ಪಿಕ್ಚರ್ ಬಾಕಿ ಇದೆ ಎಂದು ಚಡ್ಡಿ ಪೈಲ್ವಾನರು ಹರ್ಷೋದ್ಘಾರದಿಂದ ಹಬ್ಬಿಸುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನ ಕಪ್ಪು ಕೂಳರ ಕೊರಳ ಪಟ್ಟಿ ಹಿಡಿದ ಮೋದಿ ಎಂದು ಮಾಧ್ಯಮಗಳು ಸುದ್ದಿ ಮಾಡಿ ಬಕೆಟ್ ಹಿಡಿಯುವಲ್ಲಿ ನಾ ಮುಂದು ತಾ ಮುಂದು ಪೈಪೋಟಿ ನಡೆಸಿದವು.

ಆದರೆ ಸತ್ಯ ಏನಂದ್ರೆ ವಿಕಿಲೀಕ್ಸ್ ಈ ಬಗ್ಗೆ ಯಾವುದೇ ವರದಿಯನ್ನು ಮಾಡಿಲ್ಲ. ಫೇಕ್ ಸರದಾರರು ಹರಿಬಿಟ್ಟಿದ್ದ ಈ ಸುದ್ದಿಯ ಬಗ್ಗೆ ಬೂಮ್ ಲೈವ್ ಸಂಸ್ಥೆಯು ಫ್ಯಾಕ್ಟ್ ಚೆಕ್ ಮಾಡಿ ವರದಿಯನ್ನು ಪ್ರಕಟಿಸಿದೆ. ವಿಕಿಲೀಕ್ಸ್ ಕಪ್ಪು ಹಣ ಹೊಂದಿರುವವರ ಪಟ್ಟಿಯ ಬಿಡುಗಡೆ ಮಾಡಿರುವ ಬಗ್ಗೆ ಎಲ್ಲಿಯೂ ವರದಿ ಮಾಡಿಲ್ಲ. ಅಲ್ಲದೆ ವಿಕಿಲೀಕ್ಸ್‌ ಅಧಿಕೃತ ಟ್ವಿಟರ್ ಖಾತೆಯಲ್ಲಾಗಲೀ, ವೆಬ್ ಸೈಟ್ ನಲ್ಲಾಗಲೀ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಬೂಮ್ ಲೈಮ್ ದೃಢಪಡಿಸಿದೆ.

ಅಂದಹಾಗೆ ಚುನಾವಣೆಗಳನ್ನು ಗಿಮಿಕ್ ಮಾಡುತ್ತಲೇ ಎದುರಿಸುತ್ತಿರುವ ಚಡ್ಡಿ ಪೈಲ್ವಾನರ ಇಂತಹ ವರಸೆ ಇದೇ ಮೊದಲೇನೂ ಅಲ್ಲ. 2011ರಲ್ಲೇ ಇಂತದ್ದೇ 24 ಜನರ ಹೆಸರಿರುವ ಪಟ್ಟಿ ಎಲ್ಲಾ ಕಡೆ ಹರಿದಾಡಿತ್ತು. ನಂತರ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರವೂ ಮೋದಿ ಮೊದಲ ಹೆಜ್ಜೆ ಎಂದೂ ಫೇಕ್ ಸರದಾರರು ಇಂತದ್ದೇ ಸುದ್ದಿಯನ್ನು ಹಬ್ಬಿಸಿದ್ದರು. ತಮಾಷೆಯೆಂದರೆ ಈ ಚಡ್ಡಿ ಸರದಾರರಿಗೆ ಕೌಂಟರ್ ಕೊಟ್ಟು 2017-18ರಲ್ಲಿಯೂ ಇಂಥ ಫೇಕ್ ನ್ಯೂಸ್ ಹರಿದಾಡಿತ್ತು. ಆ ಪಟ್ಟಿಯಲ್ಲಿ ನಾನೊಬ್ಬ ಚೌಕಿದಾರ, ನಾನೂ ತಿನ್ನಲ್ಲ – ತಿನ್ನೋರಿಗೂ ಬಿಡಲ್ಲ ಎಂದು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದ ಮೋದಿಯವರ ಹೆಸರನ್ನೂ ಸೇರಿಸಿ ವೈರಲ್ ಮಾಡಲಾಗಿತ್ತು.

2011ರಲ್ಲಿ ಮೊದಲ ಬಾರಿಗೆ ಹರಿದು ಬಂದ ಸುದ್ದಿ ಫೇಕ್ ಎಂದು ವಿಕಿಲೀಕ್ಸ್ ಸ್ಪಷ್ಟಪಡಿಸಿತ್ತು. ಮುಂದೆಯೂ ಇಂಥದ್ದೇ ಫೇಕ್ ನ್ಯೂಸ್ ಹರಿದಾಡಲಾರಂಭಿಸಿದಾಗ ವಿಕಿಲೀಕ್ಸ್ ತಲೆ ಕೆಡಿಸಿಕೊಳ್ಳಲಿಲ್ಲ. ಒಟ್ಟಿನಲ್ಲಿ ಚುನಾವಣೆಗಳು ಎದುರಾದಾಗಲೆಲ್ಲಾ ಈ ದೇಶಕ್ಕೆ ಕಪ್ಪು ಹಣ ಕೂಳರ ಪಟ್ಟಿಗಳು ಬಿಡುಗಡೆಯಾಗುತ್ತವೆ. ದಸರಾ ಸಂದರ್ಭದಲ್ಲಿ ಭಯೋತ್ಪಾದರು ಮೈಸೂರು, ಬೆಂಗಳೂರಿನ ಮೇಲೆ ಅಟ್ಯಾಕ್ ಮಾಡುವ ಫೇಕ್ ಸಂದರ್ಭಗಳೂ, ಫೇಕ್ ಸುದ್ದಿಗಳು ಹೆಗ್ಗಿಲ್ಲದೆ ಹರಿಯುತ್ತವೆ. ಇಂತಹ ಫೇಕ್ ಸುದ್ದಿಗಳನ್ನು ನೋಡಿ ನಿಜವಾಗಿಯೂ ಅಟ್ಯಾಕ್ ಆದರೂ ಜನರು ತಲೆ ಕೆಡಿಸಿಕೊಳ್ಳದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ.

ಇದೆಲ್ಲದರ ಮಧ್ಯೆ, ಸಾಮಾನ್ಯ ಜ್ಞಾನವೂ, ವಿಶ್ಲೇಷಣೆಯೂ ಇಲ್ಲದ ನ್ಯೂಸ್ ಚಾನಲ್ ಗಳು ಅದು ಫೇಕ್ ಅಥವಾ ಫ್ಯಾಕ್ಟ್ ಆಗಿದೆಯೇ ಎಂದೂ ನೋಡದೆ ನಾಮುಂದು ತಾಮುಂದು ಎಂಬಂತೆ ಫೇಕ್ ಸುದ್ದಿಯನ್ನೇ ಬಿತ್ತರಿಸುತ್ತಿರುವುದು ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...