Homeನಿಜವೋ ಸುಳ್ಳೋಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ...

ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು..

- Advertisement -
- Advertisement -

ಸುಳ್ಳು ಸುದ್ದಿಗಳನ್ನು ವೈರಲ್ ಮಾಡುವುದರಲ್ಲಿ ಚಡ್ಡಿ ಪೈಲ್ವಾನರು ನಿಸ್ಸೀಮರು. ಇಂತಹ ಫೇಕ್ ನ್ಯೂಸ್‌ಗಳನ್ನು ಹಬ್ಬಿಸಿಯೇ 2014ರಲ್ಲಿ ಅಧಿಕಾರದ ಗದ್ದುಗೆಯನ್ನು ಚೋರ್ ಚೌಕಿದಾರರು ಆಕ್ರಮಿಸಿಕೊಂಡರು. ಇವರ ಹುಸಿ ಆಶ್ವಾಸನೆಗಳಲ್ಲಿ ಪ್ರಮುಖವಾದುದು “ಸ್ವಿಸ್ ಬ್ಯಾಂಕ್ ನಲ್ಲಿ ಭಾರತದ ಲೂಟಿಕೋರರು ಇಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆಂಬ” ದಾಳ ಜನರ ಮೇಲೆ ಹೆಚ್ಚು ಪರಿಣಾಮ ಬೀರಿತ್ತು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬುರುಡೆ ಆಶ್ವಾಸನೆ ಮತ್ತು ಖಾತೆಗೆ ಹಣ ಹಾಕಲು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರಬೇಕು, ಅದಕ್ಕಾಗಿ ಜನಧನ್ ಅಕೌಂಟ್ ಮಾಡಿಸಬೇಕೆಂಬುದನ್ನು ನಂಬಿದ ಜನರು ಅಕೌಂಟ್ ಕೂಡ ಮಾಡಿಸಿದ್ದೂ ಆಯಿತು. ಆದರೆ ಖಾತೆಗೆ 15 ಲಕ್ಷ ಜಮೆಮಾಡುವುದಿರಲಿ, ಮಿನಿಮಮ್ ಬ್ಯಾಲೆನ್ಸ್ ರೂಲ್ಸ್ ತಂದು ಜನ ಅಷ್ಟೋ ಇಷ್ಟೊ ಕೂಡಿಟ್ಟಿದ್ದ  ಹಣವನ್ನೂ ಅಕೌಂಟ್ ಗೆ ಹಾಕುವಂತೆ ಮಾಡಿದರು. ಮತಹಾಕಿದ ತಪ್ಪಿಗೆ ಉಚಿತವಾಗಿ ಬಂದ ಅಕೌಂಟ್ ಗೆ ತಾವೇ ದಂಡ ಕಟ್ಟುವಂತಹ ದುಸ್ಥಿತಿಗೆ ಜನರನ್ನು ತಂದು ಫೇಕ್ ಸರದಾರರು ಜನರನ್ನು ಯಾಮಾರಿಸಿದರು.

ಈಗ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚಡ್ಡಿ ಸರದಾರರು ತಮ್ಮ ಫೇಕ್ ನ್ಯೂಸ್ ಕಾರ್ಖಾನೆಯಿಂದ ಮತ್ತೊಂದು ಫೇಕ್ ನ್ಯೂಸನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬಿಸುತ್ತಿದೆ. ಅದೇನೆಂದರೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿರುವ ಭಾರತದ 24 ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬುದು. ಮೋದಿ ಮಹಾಶಯ ಹೇಳಿದಂತೆ ಕಪ್ಪುಹಣ ಕೂಳರ ಪಟ್ಟಿಯನ್ನು ತಂದರು. ಇದು ಟ್ರೇಲರ್ ಇನ್ನೂ ಪಿಕ್ಚರ್ ಬಾಕಿ ಇದೆ ಎಂದು ಚಡ್ಡಿ ಪೈಲ್ವಾನರು ಹರ್ಷೋದ್ಘಾರದಿಂದ ಹಬ್ಬಿಸುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನ ಕಪ್ಪು ಕೂಳರ ಕೊರಳ ಪಟ್ಟಿ ಹಿಡಿದ ಮೋದಿ ಎಂದು ಮಾಧ್ಯಮಗಳು ಸುದ್ದಿ ಮಾಡಿ ಬಕೆಟ್ ಹಿಡಿಯುವಲ್ಲಿ ನಾ ಮುಂದು ತಾ ಮುಂದು ಪೈಪೋಟಿ ನಡೆಸಿದವು.

ಆದರೆ ಸತ್ಯ ಏನಂದ್ರೆ ವಿಕಿಲೀಕ್ಸ್ ಈ ಬಗ್ಗೆ ಯಾವುದೇ ವರದಿಯನ್ನು ಮಾಡಿಲ್ಲ. ಫೇಕ್ ಸರದಾರರು ಹರಿಬಿಟ್ಟಿದ್ದ ಈ ಸುದ್ದಿಯ ಬಗ್ಗೆ ಬೂಮ್ ಲೈವ್ ಸಂಸ್ಥೆಯು ಫ್ಯಾಕ್ಟ್ ಚೆಕ್ ಮಾಡಿ ವರದಿಯನ್ನು ಪ್ರಕಟಿಸಿದೆ. ವಿಕಿಲೀಕ್ಸ್ ಕಪ್ಪು ಹಣ ಹೊಂದಿರುವವರ ಪಟ್ಟಿಯ ಬಿಡುಗಡೆ ಮಾಡಿರುವ ಬಗ್ಗೆ ಎಲ್ಲಿಯೂ ವರದಿ ಮಾಡಿಲ್ಲ. ಅಲ್ಲದೆ ವಿಕಿಲೀಕ್ಸ್‌ ಅಧಿಕೃತ ಟ್ವಿಟರ್ ಖಾತೆಯಲ್ಲಾಗಲೀ, ವೆಬ್ ಸೈಟ್ ನಲ್ಲಾಗಲೀ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಬೂಮ್ ಲೈಮ್ ದೃಢಪಡಿಸಿದೆ.

ಅಂದಹಾಗೆ ಚುನಾವಣೆಗಳನ್ನು ಗಿಮಿಕ್ ಮಾಡುತ್ತಲೇ ಎದುರಿಸುತ್ತಿರುವ ಚಡ್ಡಿ ಪೈಲ್ವಾನರ ಇಂತಹ ವರಸೆ ಇದೇ ಮೊದಲೇನೂ ಅಲ್ಲ. 2011ರಲ್ಲೇ ಇಂತದ್ದೇ 24 ಜನರ ಹೆಸರಿರುವ ಪಟ್ಟಿ ಎಲ್ಲಾ ಕಡೆ ಹರಿದಾಡಿತ್ತು. ನಂತರ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರವೂ ಮೋದಿ ಮೊದಲ ಹೆಜ್ಜೆ ಎಂದೂ ಫೇಕ್ ಸರದಾರರು ಇಂತದ್ದೇ ಸುದ್ದಿಯನ್ನು ಹಬ್ಬಿಸಿದ್ದರು. ತಮಾಷೆಯೆಂದರೆ ಈ ಚಡ್ಡಿ ಸರದಾರರಿಗೆ ಕೌಂಟರ್ ಕೊಟ್ಟು 2017-18ರಲ್ಲಿಯೂ ಇಂಥ ಫೇಕ್ ನ್ಯೂಸ್ ಹರಿದಾಡಿತ್ತು. ಆ ಪಟ್ಟಿಯಲ್ಲಿ ನಾನೊಬ್ಬ ಚೌಕಿದಾರ, ನಾನೂ ತಿನ್ನಲ್ಲ – ತಿನ್ನೋರಿಗೂ ಬಿಡಲ್ಲ ಎಂದು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದ ಮೋದಿಯವರ ಹೆಸರನ್ನೂ ಸೇರಿಸಿ ವೈರಲ್ ಮಾಡಲಾಗಿತ್ತು.

2011ರಲ್ಲಿ ಮೊದಲ ಬಾರಿಗೆ ಹರಿದು ಬಂದ ಸುದ್ದಿ ಫೇಕ್ ಎಂದು ವಿಕಿಲೀಕ್ಸ್ ಸ್ಪಷ್ಟಪಡಿಸಿತ್ತು. ಮುಂದೆಯೂ ಇಂಥದ್ದೇ ಫೇಕ್ ನ್ಯೂಸ್ ಹರಿದಾಡಲಾರಂಭಿಸಿದಾಗ ವಿಕಿಲೀಕ್ಸ್ ತಲೆ ಕೆಡಿಸಿಕೊಳ್ಳಲಿಲ್ಲ. ಒಟ್ಟಿನಲ್ಲಿ ಚುನಾವಣೆಗಳು ಎದುರಾದಾಗಲೆಲ್ಲಾ ಈ ದೇಶಕ್ಕೆ ಕಪ್ಪು ಹಣ ಕೂಳರ ಪಟ್ಟಿಗಳು ಬಿಡುಗಡೆಯಾಗುತ್ತವೆ. ದಸರಾ ಸಂದರ್ಭದಲ್ಲಿ ಭಯೋತ್ಪಾದರು ಮೈಸೂರು, ಬೆಂಗಳೂರಿನ ಮೇಲೆ ಅಟ್ಯಾಕ್ ಮಾಡುವ ಫೇಕ್ ಸಂದರ್ಭಗಳೂ, ಫೇಕ್ ಸುದ್ದಿಗಳು ಹೆಗ್ಗಿಲ್ಲದೆ ಹರಿಯುತ್ತವೆ. ಇಂತಹ ಫೇಕ್ ಸುದ್ದಿಗಳನ್ನು ನೋಡಿ ನಿಜವಾಗಿಯೂ ಅಟ್ಯಾಕ್ ಆದರೂ ಜನರು ತಲೆ ಕೆಡಿಸಿಕೊಳ್ಳದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ.

ಇದೆಲ್ಲದರ ಮಧ್ಯೆ, ಸಾಮಾನ್ಯ ಜ್ಞಾನವೂ, ವಿಶ್ಲೇಷಣೆಯೂ ಇಲ್ಲದ ನ್ಯೂಸ್ ಚಾನಲ್ ಗಳು ಅದು ಫೇಕ್ ಅಥವಾ ಫ್ಯಾಕ್ಟ್ ಆಗಿದೆಯೇ ಎಂದೂ ನೋಡದೆ ನಾಮುಂದು ತಾಮುಂದು ಎಂಬಂತೆ ಫೇಕ್ ಸುದ್ದಿಯನ್ನೇ ಬಿತ್ತರಿಸುತ್ತಿರುವುದು ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...