Homeನಿಜವೋ ಸುಳ್ಳೋಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ...

ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು..

- Advertisement -
- Advertisement -

ಸುಳ್ಳು ಸುದ್ದಿಗಳನ್ನು ವೈರಲ್ ಮಾಡುವುದರಲ್ಲಿ ಚಡ್ಡಿ ಪೈಲ್ವಾನರು ನಿಸ್ಸೀಮರು. ಇಂತಹ ಫೇಕ್ ನ್ಯೂಸ್‌ಗಳನ್ನು ಹಬ್ಬಿಸಿಯೇ 2014ರಲ್ಲಿ ಅಧಿಕಾರದ ಗದ್ದುಗೆಯನ್ನು ಚೋರ್ ಚೌಕಿದಾರರು ಆಕ್ರಮಿಸಿಕೊಂಡರು. ಇವರ ಹುಸಿ ಆಶ್ವಾಸನೆಗಳಲ್ಲಿ ಪ್ರಮುಖವಾದುದು “ಸ್ವಿಸ್ ಬ್ಯಾಂಕ್ ನಲ್ಲಿ ಭಾರತದ ಲೂಟಿಕೋರರು ಇಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆಂಬ” ದಾಳ ಜನರ ಮೇಲೆ ಹೆಚ್ಚು ಪರಿಣಾಮ ಬೀರಿತ್ತು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬುರುಡೆ ಆಶ್ವಾಸನೆ ಮತ್ತು ಖಾತೆಗೆ ಹಣ ಹಾಕಲು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರಬೇಕು, ಅದಕ್ಕಾಗಿ ಜನಧನ್ ಅಕೌಂಟ್ ಮಾಡಿಸಬೇಕೆಂಬುದನ್ನು ನಂಬಿದ ಜನರು ಅಕೌಂಟ್ ಕೂಡ ಮಾಡಿಸಿದ್ದೂ ಆಯಿತು. ಆದರೆ ಖಾತೆಗೆ 15 ಲಕ್ಷ ಜಮೆಮಾಡುವುದಿರಲಿ, ಮಿನಿಮಮ್ ಬ್ಯಾಲೆನ್ಸ್ ರೂಲ್ಸ್ ತಂದು ಜನ ಅಷ್ಟೋ ಇಷ್ಟೊ ಕೂಡಿಟ್ಟಿದ್ದ  ಹಣವನ್ನೂ ಅಕೌಂಟ್ ಗೆ ಹಾಕುವಂತೆ ಮಾಡಿದರು. ಮತಹಾಕಿದ ತಪ್ಪಿಗೆ ಉಚಿತವಾಗಿ ಬಂದ ಅಕೌಂಟ್ ಗೆ ತಾವೇ ದಂಡ ಕಟ್ಟುವಂತಹ ದುಸ್ಥಿತಿಗೆ ಜನರನ್ನು ತಂದು ಫೇಕ್ ಸರದಾರರು ಜನರನ್ನು ಯಾಮಾರಿಸಿದರು.

ಈಗ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚಡ್ಡಿ ಸರದಾರರು ತಮ್ಮ ಫೇಕ್ ನ್ಯೂಸ್ ಕಾರ್ಖಾನೆಯಿಂದ ಮತ್ತೊಂದು ಫೇಕ್ ನ್ಯೂಸನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬಿಸುತ್ತಿದೆ. ಅದೇನೆಂದರೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿರುವ ಭಾರತದ 24 ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬುದು. ಮೋದಿ ಮಹಾಶಯ ಹೇಳಿದಂತೆ ಕಪ್ಪುಹಣ ಕೂಳರ ಪಟ್ಟಿಯನ್ನು ತಂದರು. ಇದು ಟ್ರೇಲರ್ ಇನ್ನೂ ಪಿಕ್ಚರ್ ಬಾಕಿ ಇದೆ ಎಂದು ಚಡ್ಡಿ ಪೈಲ್ವಾನರು ಹರ್ಷೋದ್ಘಾರದಿಂದ ಹಬ್ಬಿಸುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನ ಕಪ್ಪು ಕೂಳರ ಕೊರಳ ಪಟ್ಟಿ ಹಿಡಿದ ಮೋದಿ ಎಂದು ಮಾಧ್ಯಮಗಳು ಸುದ್ದಿ ಮಾಡಿ ಬಕೆಟ್ ಹಿಡಿಯುವಲ್ಲಿ ನಾ ಮುಂದು ತಾ ಮುಂದು ಪೈಪೋಟಿ ನಡೆಸಿದವು.

ಆದರೆ ಸತ್ಯ ಏನಂದ್ರೆ ವಿಕಿಲೀಕ್ಸ್ ಈ ಬಗ್ಗೆ ಯಾವುದೇ ವರದಿಯನ್ನು ಮಾಡಿಲ್ಲ. ಫೇಕ್ ಸರದಾರರು ಹರಿಬಿಟ್ಟಿದ್ದ ಈ ಸುದ್ದಿಯ ಬಗ್ಗೆ ಬೂಮ್ ಲೈವ್ ಸಂಸ್ಥೆಯು ಫ್ಯಾಕ್ಟ್ ಚೆಕ್ ಮಾಡಿ ವರದಿಯನ್ನು ಪ್ರಕಟಿಸಿದೆ. ವಿಕಿಲೀಕ್ಸ್ ಕಪ್ಪು ಹಣ ಹೊಂದಿರುವವರ ಪಟ್ಟಿಯ ಬಿಡುಗಡೆ ಮಾಡಿರುವ ಬಗ್ಗೆ ಎಲ್ಲಿಯೂ ವರದಿ ಮಾಡಿಲ್ಲ. ಅಲ್ಲದೆ ವಿಕಿಲೀಕ್ಸ್‌ ಅಧಿಕೃತ ಟ್ವಿಟರ್ ಖಾತೆಯಲ್ಲಾಗಲೀ, ವೆಬ್ ಸೈಟ್ ನಲ್ಲಾಗಲೀ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಬೂಮ್ ಲೈಮ್ ದೃಢಪಡಿಸಿದೆ.

ಅಂದಹಾಗೆ ಚುನಾವಣೆಗಳನ್ನು ಗಿಮಿಕ್ ಮಾಡುತ್ತಲೇ ಎದುರಿಸುತ್ತಿರುವ ಚಡ್ಡಿ ಪೈಲ್ವಾನರ ಇಂತಹ ವರಸೆ ಇದೇ ಮೊದಲೇನೂ ಅಲ್ಲ. 2011ರಲ್ಲೇ ಇಂತದ್ದೇ 24 ಜನರ ಹೆಸರಿರುವ ಪಟ್ಟಿ ಎಲ್ಲಾ ಕಡೆ ಹರಿದಾಡಿತ್ತು. ನಂತರ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರವೂ ಮೋದಿ ಮೊದಲ ಹೆಜ್ಜೆ ಎಂದೂ ಫೇಕ್ ಸರದಾರರು ಇಂತದ್ದೇ ಸುದ್ದಿಯನ್ನು ಹಬ್ಬಿಸಿದ್ದರು. ತಮಾಷೆಯೆಂದರೆ ಈ ಚಡ್ಡಿ ಸರದಾರರಿಗೆ ಕೌಂಟರ್ ಕೊಟ್ಟು 2017-18ರಲ್ಲಿಯೂ ಇಂಥ ಫೇಕ್ ನ್ಯೂಸ್ ಹರಿದಾಡಿತ್ತು. ಆ ಪಟ್ಟಿಯಲ್ಲಿ ನಾನೊಬ್ಬ ಚೌಕಿದಾರ, ನಾನೂ ತಿನ್ನಲ್ಲ – ತಿನ್ನೋರಿಗೂ ಬಿಡಲ್ಲ ಎಂದು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದ ಮೋದಿಯವರ ಹೆಸರನ್ನೂ ಸೇರಿಸಿ ವೈರಲ್ ಮಾಡಲಾಗಿತ್ತು.

2011ರಲ್ಲಿ ಮೊದಲ ಬಾರಿಗೆ ಹರಿದು ಬಂದ ಸುದ್ದಿ ಫೇಕ್ ಎಂದು ವಿಕಿಲೀಕ್ಸ್ ಸ್ಪಷ್ಟಪಡಿಸಿತ್ತು. ಮುಂದೆಯೂ ಇಂಥದ್ದೇ ಫೇಕ್ ನ್ಯೂಸ್ ಹರಿದಾಡಲಾರಂಭಿಸಿದಾಗ ವಿಕಿಲೀಕ್ಸ್ ತಲೆ ಕೆಡಿಸಿಕೊಳ್ಳಲಿಲ್ಲ. ಒಟ್ಟಿನಲ್ಲಿ ಚುನಾವಣೆಗಳು ಎದುರಾದಾಗಲೆಲ್ಲಾ ಈ ದೇಶಕ್ಕೆ ಕಪ್ಪು ಹಣ ಕೂಳರ ಪಟ್ಟಿಗಳು ಬಿಡುಗಡೆಯಾಗುತ್ತವೆ. ದಸರಾ ಸಂದರ್ಭದಲ್ಲಿ ಭಯೋತ್ಪಾದರು ಮೈಸೂರು, ಬೆಂಗಳೂರಿನ ಮೇಲೆ ಅಟ್ಯಾಕ್ ಮಾಡುವ ಫೇಕ್ ಸಂದರ್ಭಗಳೂ, ಫೇಕ್ ಸುದ್ದಿಗಳು ಹೆಗ್ಗಿಲ್ಲದೆ ಹರಿಯುತ್ತವೆ. ಇಂತಹ ಫೇಕ್ ಸುದ್ದಿಗಳನ್ನು ನೋಡಿ ನಿಜವಾಗಿಯೂ ಅಟ್ಯಾಕ್ ಆದರೂ ಜನರು ತಲೆ ಕೆಡಿಸಿಕೊಳ್ಳದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ.

ಇದೆಲ್ಲದರ ಮಧ್ಯೆ, ಸಾಮಾನ್ಯ ಜ್ಞಾನವೂ, ವಿಶ್ಲೇಷಣೆಯೂ ಇಲ್ಲದ ನ್ಯೂಸ್ ಚಾನಲ್ ಗಳು ಅದು ಫೇಕ್ ಅಥವಾ ಫ್ಯಾಕ್ಟ್ ಆಗಿದೆಯೇ ಎಂದೂ ನೋಡದೆ ನಾಮುಂದು ತಾಮುಂದು ಎಂಬಂತೆ ಫೇಕ್ ಸುದ್ದಿಯನ್ನೇ ಬಿತ್ತರಿಸುತ್ತಿರುವುದು ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...