Homeನಿಜವೋ ಸುಳ್ಳೋಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ...

ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು..

- Advertisement -
- Advertisement -

ಸುಳ್ಳು ಸುದ್ದಿಗಳನ್ನು ವೈರಲ್ ಮಾಡುವುದರಲ್ಲಿ ಚಡ್ಡಿ ಪೈಲ್ವಾನರು ನಿಸ್ಸೀಮರು. ಇಂತಹ ಫೇಕ್ ನ್ಯೂಸ್‌ಗಳನ್ನು ಹಬ್ಬಿಸಿಯೇ 2014ರಲ್ಲಿ ಅಧಿಕಾರದ ಗದ್ದುಗೆಯನ್ನು ಚೋರ್ ಚೌಕಿದಾರರು ಆಕ್ರಮಿಸಿಕೊಂಡರು. ಇವರ ಹುಸಿ ಆಶ್ವಾಸನೆಗಳಲ್ಲಿ ಪ್ರಮುಖವಾದುದು “ಸ್ವಿಸ್ ಬ್ಯಾಂಕ್ ನಲ್ಲಿ ಭಾರತದ ಲೂಟಿಕೋರರು ಇಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆಂಬ” ದಾಳ ಜನರ ಮೇಲೆ ಹೆಚ್ಚು ಪರಿಣಾಮ ಬೀರಿತ್ತು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬುರುಡೆ ಆಶ್ವಾಸನೆ ಮತ್ತು ಖಾತೆಗೆ ಹಣ ಹಾಕಲು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರಬೇಕು, ಅದಕ್ಕಾಗಿ ಜನಧನ್ ಅಕೌಂಟ್ ಮಾಡಿಸಬೇಕೆಂಬುದನ್ನು ನಂಬಿದ ಜನರು ಅಕೌಂಟ್ ಕೂಡ ಮಾಡಿಸಿದ್ದೂ ಆಯಿತು. ಆದರೆ ಖಾತೆಗೆ 15 ಲಕ್ಷ ಜಮೆಮಾಡುವುದಿರಲಿ, ಮಿನಿಮಮ್ ಬ್ಯಾಲೆನ್ಸ್ ರೂಲ್ಸ್ ತಂದು ಜನ ಅಷ್ಟೋ ಇಷ್ಟೊ ಕೂಡಿಟ್ಟಿದ್ದ  ಹಣವನ್ನೂ ಅಕೌಂಟ್ ಗೆ ಹಾಕುವಂತೆ ಮಾಡಿದರು. ಮತಹಾಕಿದ ತಪ್ಪಿಗೆ ಉಚಿತವಾಗಿ ಬಂದ ಅಕೌಂಟ್ ಗೆ ತಾವೇ ದಂಡ ಕಟ್ಟುವಂತಹ ದುಸ್ಥಿತಿಗೆ ಜನರನ್ನು ತಂದು ಫೇಕ್ ಸರದಾರರು ಜನರನ್ನು ಯಾಮಾರಿಸಿದರು.

ಈಗ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚಡ್ಡಿ ಸರದಾರರು ತಮ್ಮ ಫೇಕ್ ನ್ಯೂಸ್ ಕಾರ್ಖಾನೆಯಿಂದ ಮತ್ತೊಂದು ಫೇಕ್ ನ್ಯೂಸನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬಿಸುತ್ತಿದೆ. ಅದೇನೆಂದರೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿರುವ ಭಾರತದ 24 ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬುದು. ಮೋದಿ ಮಹಾಶಯ ಹೇಳಿದಂತೆ ಕಪ್ಪುಹಣ ಕೂಳರ ಪಟ್ಟಿಯನ್ನು ತಂದರು. ಇದು ಟ್ರೇಲರ್ ಇನ್ನೂ ಪಿಕ್ಚರ್ ಬಾಕಿ ಇದೆ ಎಂದು ಚಡ್ಡಿ ಪೈಲ್ವಾನರು ಹರ್ಷೋದ್ಘಾರದಿಂದ ಹಬ್ಬಿಸುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನ ಕಪ್ಪು ಕೂಳರ ಕೊರಳ ಪಟ್ಟಿ ಹಿಡಿದ ಮೋದಿ ಎಂದು ಮಾಧ್ಯಮಗಳು ಸುದ್ದಿ ಮಾಡಿ ಬಕೆಟ್ ಹಿಡಿಯುವಲ್ಲಿ ನಾ ಮುಂದು ತಾ ಮುಂದು ಪೈಪೋಟಿ ನಡೆಸಿದವು.

ಆದರೆ ಸತ್ಯ ಏನಂದ್ರೆ ವಿಕಿಲೀಕ್ಸ್ ಈ ಬಗ್ಗೆ ಯಾವುದೇ ವರದಿಯನ್ನು ಮಾಡಿಲ್ಲ. ಫೇಕ್ ಸರದಾರರು ಹರಿಬಿಟ್ಟಿದ್ದ ಈ ಸುದ್ದಿಯ ಬಗ್ಗೆ ಬೂಮ್ ಲೈವ್ ಸಂಸ್ಥೆಯು ಫ್ಯಾಕ್ಟ್ ಚೆಕ್ ಮಾಡಿ ವರದಿಯನ್ನು ಪ್ರಕಟಿಸಿದೆ. ವಿಕಿಲೀಕ್ಸ್ ಕಪ್ಪು ಹಣ ಹೊಂದಿರುವವರ ಪಟ್ಟಿಯ ಬಿಡುಗಡೆ ಮಾಡಿರುವ ಬಗ್ಗೆ ಎಲ್ಲಿಯೂ ವರದಿ ಮಾಡಿಲ್ಲ. ಅಲ್ಲದೆ ವಿಕಿಲೀಕ್ಸ್‌ ಅಧಿಕೃತ ಟ್ವಿಟರ್ ಖಾತೆಯಲ್ಲಾಗಲೀ, ವೆಬ್ ಸೈಟ್ ನಲ್ಲಾಗಲೀ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಬೂಮ್ ಲೈಮ್ ದೃಢಪಡಿಸಿದೆ.

ಅಂದಹಾಗೆ ಚುನಾವಣೆಗಳನ್ನು ಗಿಮಿಕ್ ಮಾಡುತ್ತಲೇ ಎದುರಿಸುತ್ತಿರುವ ಚಡ್ಡಿ ಪೈಲ್ವಾನರ ಇಂತಹ ವರಸೆ ಇದೇ ಮೊದಲೇನೂ ಅಲ್ಲ. 2011ರಲ್ಲೇ ಇಂತದ್ದೇ 24 ಜನರ ಹೆಸರಿರುವ ಪಟ್ಟಿ ಎಲ್ಲಾ ಕಡೆ ಹರಿದಾಡಿತ್ತು. ನಂತರ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರವೂ ಮೋದಿ ಮೊದಲ ಹೆಜ್ಜೆ ಎಂದೂ ಫೇಕ್ ಸರದಾರರು ಇಂತದ್ದೇ ಸುದ್ದಿಯನ್ನು ಹಬ್ಬಿಸಿದ್ದರು. ತಮಾಷೆಯೆಂದರೆ ಈ ಚಡ್ಡಿ ಸರದಾರರಿಗೆ ಕೌಂಟರ್ ಕೊಟ್ಟು 2017-18ರಲ್ಲಿಯೂ ಇಂಥ ಫೇಕ್ ನ್ಯೂಸ್ ಹರಿದಾಡಿತ್ತು. ಆ ಪಟ್ಟಿಯಲ್ಲಿ ನಾನೊಬ್ಬ ಚೌಕಿದಾರ, ನಾನೂ ತಿನ್ನಲ್ಲ – ತಿನ್ನೋರಿಗೂ ಬಿಡಲ್ಲ ಎಂದು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದ ಮೋದಿಯವರ ಹೆಸರನ್ನೂ ಸೇರಿಸಿ ವೈರಲ್ ಮಾಡಲಾಗಿತ್ತು.

2011ರಲ್ಲಿ ಮೊದಲ ಬಾರಿಗೆ ಹರಿದು ಬಂದ ಸುದ್ದಿ ಫೇಕ್ ಎಂದು ವಿಕಿಲೀಕ್ಸ್ ಸ್ಪಷ್ಟಪಡಿಸಿತ್ತು. ಮುಂದೆಯೂ ಇಂಥದ್ದೇ ಫೇಕ್ ನ್ಯೂಸ್ ಹರಿದಾಡಲಾರಂಭಿಸಿದಾಗ ವಿಕಿಲೀಕ್ಸ್ ತಲೆ ಕೆಡಿಸಿಕೊಳ್ಳಲಿಲ್ಲ. ಒಟ್ಟಿನಲ್ಲಿ ಚುನಾವಣೆಗಳು ಎದುರಾದಾಗಲೆಲ್ಲಾ ಈ ದೇಶಕ್ಕೆ ಕಪ್ಪು ಹಣ ಕೂಳರ ಪಟ್ಟಿಗಳು ಬಿಡುಗಡೆಯಾಗುತ್ತವೆ. ದಸರಾ ಸಂದರ್ಭದಲ್ಲಿ ಭಯೋತ್ಪಾದರು ಮೈಸೂರು, ಬೆಂಗಳೂರಿನ ಮೇಲೆ ಅಟ್ಯಾಕ್ ಮಾಡುವ ಫೇಕ್ ಸಂದರ್ಭಗಳೂ, ಫೇಕ್ ಸುದ್ದಿಗಳು ಹೆಗ್ಗಿಲ್ಲದೆ ಹರಿಯುತ್ತವೆ. ಇಂತಹ ಫೇಕ್ ಸುದ್ದಿಗಳನ್ನು ನೋಡಿ ನಿಜವಾಗಿಯೂ ಅಟ್ಯಾಕ್ ಆದರೂ ಜನರು ತಲೆ ಕೆಡಿಸಿಕೊಳ್ಳದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ.

ಇದೆಲ್ಲದರ ಮಧ್ಯೆ, ಸಾಮಾನ್ಯ ಜ್ಞಾನವೂ, ವಿಶ್ಲೇಷಣೆಯೂ ಇಲ್ಲದ ನ್ಯೂಸ್ ಚಾನಲ್ ಗಳು ಅದು ಫೇಕ್ ಅಥವಾ ಫ್ಯಾಕ್ಟ್ ಆಗಿದೆಯೇ ಎಂದೂ ನೋಡದೆ ನಾಮುಂದು ತಾಮುಂದು ಎಂಬಂತೆ ಫೇಕ್ ಸುದ್ದಿಯನ್ನೇ ಬಿತ್ತರಿಸುತ್ತಿರುವುದು ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...