Homeನಿಜವೋ ಸುಳ್ಳೋಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ...

ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು..

- Advertisement -
- Advertisement -

ಸುಳ್ಳು ಸುದ್ದಿಗಳನ್ನು ವೈರಲ್ ಮಾಡುವುದರಲ್ಲಿ ಚಡ್ಡಿ ಪೈಲ್ವಾನರು ನಿಸ್ಸೀಮರು. ಇಂತಹ ಫೇಕ್ ನ್ಯೂಸ್‌ಗಳನ್ನು ಹಬ್ಬಿಸಿಯೇ 2014ರಲ್ಲಿ ಅಧಿಕಾರದ ಗದ್ದುಗೆಯನ್ನು ಚೋರ್ ಚೌಕಿದಾರರು ಆಕ್ರಮಿಸಿಕೊಂಡರು. ಇವರ ಹುಸಿ ಆಶ್ವಾಸನೆಗಳಲ್ಲಿ ಪ್ರಮುಖವಾದುದು “ಸ್ವಿಸ್ ಬ್ಯಾಂಕ್ ನಲ್ಲಿ ಭಾರತದ ಲೂಟಿಕೋರರು ಇಟ್ಟಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇವೆಂಬ” ದಾಳ ಜನರ ಮೇಲೆ ಹೆಚ್ಚು ಪರಿಣಾಮ ಬೀರಿತ್ತು.

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬುರುಡೆ ಆಶ್ವಾಸನೆ ಮತ್ತು ಖಾತೆಗೆ ಹಣ ಹಾಕಲು ಎಲ್ಲರೂ ಬ್ಯಾಂಕ್ ಖಾತೆ ಹೊಂದಿರಬೇಕು, ಅದಕ್ಕಾಗಿ ಜನಧನ್ ಅಕೌಂಟ್ ಮಾಡಿಸಬೇಕೆಂಬುದನ್ನು ನಂಬಿದ ಜನರು ಅಕೌಂಟ್ ಕೂಡ ಮಾಡಿಸಿದ್ದೂ ಆಯಿತು. ಆದರೆ ಖಾತೆಗೆ 15 ಲಕ್ಷ ಜಮೆಮಾಡುವುದಿರಲಿ, ಮಿನಿಮಮ್ ಬ್ಯಾಲೆನ್ಸ್ ರೂಲ್ಸ್ ತಂದು ಜನ ಅಷ್ಟೋ ಇಷ್ಟೊ ಕೂಡಿಟ್ಟಿದ್ದ  ಹಣವನ್ನೂ ಅಕೌಂಟ್ ಗೆ ಹಾಕುವಂತೆ ಮಾಡಿದರು. ಮತಹಾಕಿದ ತಪ್ಪಿಗೆ ಉಚಿತವಾಗಿ ಬಂದ ಅಕೌಂಟ್ ಗೆ ತಾವೇ ದಂಡ ಕಟ್ಟುವಂತಹ ದುಸ್ಥಿತಿಗೆ ಜನರನ್ನು ತಂದು ಫೇಕ್ ಸರದಾರರು ಜನರನ್ನು ಯಾಮಾರಿಸಿದರು.

ಈಗ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ಚಡ್ಡಿ ಸರದಾರರು ತಮ್ಮ ಫೇಕ್ ನ್ಯೂಸ್ ಕಾರ್ಖಾನೆಯಿಂದ ಮತ್ತೊಂದು ಫೇಕ್ ನ್ಯೂಸನ್ನು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹಬ್ಬಿಸುತ್ತಿದೆ. ಅದೇನೆಂದರೆ ಸ್ವಿಸ್ ಬ್ಯಾಂಕ್ ನಲ್ಲಿ ಕಪ್ಪು ಹಣ ಹೊಂದಿರುವ ಭಾರತದ 24 ರಾಜಕಾರಣಿಗಳು ಮತ್ತು ಉದ್ಯಮಿಗಳ ಹೆಸರನ್ನು ವಿಕಿಲೀಕ್ಸ್ ಪ್ರಕಟಿಸಿದೆ ಎಂಬುದು. ಮೋದಿ ಮಹಾಶಯ ಹೇಳಿದಂತೆ ಕಪ್ಪುಹಣ ಕೂಳರ ಪಟ್ಟಿಯನ್ನು ತಂದರು. ಇದು ಟ್ರೇಲರ್ ಇನ್ನೂ ಪಿಕ್ಚರ್ ಬಾಕಿ ಇದೆ ಎಂದು ಚಡ್ಡಿ ಪೈಲ್ವಾನರು ಹರ್ಷೋದ್ಘಾರದಿಂದ ಹಬ್ಬಿಸುತ್ತಿದ್ದಾರೆ. ಸ್ವಿಸ್‌ ಬ್ಯಾಂಕ್‌ನ ಕಪ್ಪು ಕೂಳರ ಕೊರಳ ಪಟ್ಟಿ ಹಿಡಿದ ಮೋದಿ ಎಂದು ಮಾಧ್ಯಮಗಳು ಸುದ್ದಿ ಮಾಡಿ ಬಕೆಟ್ ಹಿಡಿಯುವಲ್ಲಿ ನಾ ಮುಂದು ತಾ ಮುಂದು ಪೈಪೋಟಿ ನಡೆಸಿದವು.

ಆದರೆ ಸತ್ಯ ಏನಂದ್ರೆ ವಿಕಿಲೀಕ್ಸ್ ಈ ಬಗ್ಗೆ ಯಾವುದೇ ವರದಿಯನ್ನು ಮಾಡಿಲ್ಲ. ಫೇಕ್ ಸರದಾರರು ಹರಿಬಿಟ್ಟಿದ್ದ ಈ ಸುದ್ದಿಯ ಬಗ್ಗೆ ಬೂಮ್ ಲೈವ್ ಸಂಸ್ಥೆಯು ಫ್ಯಾಕ್ಟ್ ಚೆಕ್ ಮಾಡಿ ವರದಿಯನ್ನು ಪ್ರಕಟಿಸಿದೆ. ವಿಕಿಲೀಕ್ಸ್ ಕಪ್ಪು ಹಣ ಹೊಂದಿರುವವರ ಪಟ್ಟಿಯ ಬಿಡುಗಡೆ ಮಾಡಿರುವ ಬಗ್ಗೆ ಎಲ್ಲಿಯೂ ವರದಿ ಮಾಡಿಲ್ಲ. ಅಲ್ಲದೆ ವಿಕಿಲೀಕ್ಸ್‌ ಅಧಿಕೃತ ಟ್ವಿಟರ್ ಖಾತೆಯಲ್ಲಾಗಲೀ, ವೆಬ್ ಸೈಟ್ ನಲ್ಲಾಗಲೀ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಬೂಮ್ ಲೈಮ್ ದೃಢಪಡಿಸಿದೆ.

ಅಂದಹಾಗೆ ಚುನಾವಣೆಗಳನ್ನು ಗಿಮಿಕ್ ಮಾಡುತ್ತಲೇ ಎದುರಿಸುತ್ತಿರುವ ಚಡ್ಡಿ ಪೈಲ್ವಾನರ ಇಂತಹ ವರಸೆ ಇದೇ ಮೊದಲೇನೂ ಅಲ್ಲ. 2011ರಲ್ಲೇ ಇಂತದ್ದೇ 24 ಜನರ ಹೆಸರಿರುವ ಪಟ್ಟಿ ಎಲ್ಲಾ ಕಡೆ ಹರಿದಾಡಿತ್ತು. ನಂತರ 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರವೂ ಮೋದಿ ಮೊದಲ ಹೆಜ್ಜೆ ಎಂದೂ ಫೇಕ್ ಸರದಾರರು ಇಂತದ್ದೇ ಸುದ್ದಿಯನ್ನು ಹಬ್ಬಿಸಿದ್ದರು. ತಮಾಷೆಯೆಂದರೆ ಈ ಚಡ್ಡಿ ಸರದಾರರಿಗೆ ಕೌಂಟರ್ ಕೊಟ್ಟು 2017-18ರಲ್ಲಿಯೂ ಇಂಥ ಫೇಕ್ ನ್ಯೂಸ್ ಹರಿದಾಡಿತ್ತು. ಆ ಪಟ್ಟಿಯಲ್ಲಿ ನಾನೊಬ್ಬ ಚೌಕಿದಾರ, ನಾನೂ ತಿನ್ನಲ್ಲ – ತಿನ್ನೋರಿಗೂ ಬಿಡಲ್ಲ ಎಂದು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದ ಮೋದಿಯವರ ಹೆಸರನ್ನೂ ಸೇರಿಸಿ ವೈರಲ್ ಮಾಡಲಾಗಿತ್ತು.

2011ರಲ್ಲಿ ಮೊದಲ ಬಾರಿಗೆ ಹರಿದು ಬಂದ ಸುದ್ದಿ ಫೇಕ್ ಎಂದು ವಿಕಿಲೀಕ್ಸ್ ಸ್ಪಷ್ಟಪಡಿಸಿತ್ತು. ಮುಂದೆಯೂ ಇಂಥದ್ದೇ ಫೇಕ್ ನ್ಯೂಸ್ ಹರಿದಾಡಲಾರಂಭಿಸಿದಾಗ ವಿಕಿಲೀಕ್ಸ್ ತಲೆ ಕೆಡಿಸಿಕೊಳ್ಳಲಿಲ್ಲ. ಒಟ್ಟಿನಲ್ಲಿ ಚುನಾವಣೆಗಳು ಎದುರಾದಾಗಲೆಲ್ಲಾ ಈ ದೇಶಕ್ಕೆ ಕಪ್ಪು ಹಣ ಕೂಳರ ಪಟ್ಟಿಗಳು ಬಿಡುಗಡೆಯಾಗುತ್ತವೆ. ದಸರಾ ಸಂದರ್ಭದಲ್ಲಿ ಭಯೋತ್ಪಾದರು ಮೈಸೂರು, ಬೆಂಗಳೂರಿನ ಮೇಲೆ ಅಟ್ಯಾಕ್ ಮಾಡುವ ಫೇಕ್ ಸಂದರ್ಭಗಳೂ, ಫೇಕ್ ಸುದ್ದಿಗಳು ಹೆಗ್ಗಿಲ್ಲದೆ ಹರಿಯುತ್ತವೆ. ಇಂತಹ ಫೇಕ್ ಸುದ್ದಿಗಳನ್ನು ನೋಡಿ ನಿಜವಾಗಿಯೂ ಅಟ್ಯಾಕ್ ಆದರೂ ಜನರು ತಲೆ ಕೆಡಿಸಿಕೊಳ್ಳದ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ.

ಇದೆಲ್ಲದರ ಮಧ್ಯೆ, ಸಾಮಾನ್ಯ ಜ್ಞಾನವೂ, ವಿಶ್ಲೇಷಣೆಯೂ ಇಲ್ಲದ ನ್ಯೂಸ್ ಚಾನಲ್ ಗಳು ಅದು ಫೇಕ್ ಅಥವಾ ಫ್ಯಾಕ್ಟ್ ಆಗಿದೆಯೇ ಎಂದೂ ನೋಡದೆ ನಾಮುಂದು ತಾಮುಂದು ಎಂಬಂತೆ ಫೇಕ್ ಸುದ್ದಿಯನ್ನೇ ಬಿತ್ತರಿಸುತ್ತಿರುವುದು ವಿಪರ್ಯಾಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...