Homeರಾಷ್ಟ್ರೀಯಸ್ವಿಸ್‌ ಬ್ಯಾಂಕ್‌: 30,849 ಕೋಟಿ ರೂ.ಗೆ ಏರಿಕೆಯಾದ ಭಾರತೀಯರ ಹಣ; 14 ವರ್ಷಗಳಲ್ಲೇ ಹೆಚ್ಚು!

ಸ್ವಿಸ್‌ ಬ್ಯಾಂಕ್‌: 30,849 ಕೋಟಿ ರೂ.ಗೆ ಏರಿಕೆಯಾದ ಭಾರತೀಯರ ಹಣ; 14 ವರ್ಷಗಳಲ್ಲೇ ಹೆಚ್ಚು!

- Advertisement -
- Advertisement -

2021 ರಲ್ಲಿ ಭಾರತೀಯರು ಸ್ವಿಸ್ ಬ್ಯಾಂಕ್‌ಗಳಲ್ಲಿ ಇಟ್ಟಿರುವ ಹಣದ ಮೊತ್ತವೂ 30,849 ಕೋಟಿ ರೂ.ಗಳಿಗಿಂತ ಹೆಚ್ಚಾಗಿದ್ದು, ಇದು ಕಳೆದ 14 ವರ್ಷಗಳಲ್ಲೇ ಗರಿಷ್ಠ ಏರಿಕೆಯಾಗಿದೆ ಎಂದು ಗುರುವಾರ ಸ್ವಿಟ್ಜರ್ಲೆಂಡ್‌ನ ಸೆಂಟ್ರಲ್ ಬ್ಯಾಂಕ್ ಬಿಡುಗಡೆ ಮಾಡಿದ ವಾರ್ಷಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

2014 ರ ಲೋಕಸಭಾ ಚುನಾವಣೆಯ ವೇಳೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಹಣದ ಬಗ್ಗೆ ಭಾರೀ ಚರ್ಚೆಯಾಗಿತ್ತು. ಬಿಜೆಪಿಯು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಭಾರತೀಯ ಹಣವನ್ನು ಭಾರತಕ್ಕೆ ತರುವುದಾಗಿ ಭರವಸೆಗಳನ್ನು ನೀಡಿತ್ತು. ಆದರೆ, ಇದೀಗ ಬಿಜೆಪಿಯ ಮೋದಿ ನೇತೃತ್ವವು ಎರಡನೆ ಬಾರಿಗೆ ಆಡಳಿತ ನಡೆಸುತ್ತಿದೆ. ಆದರೂ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯ ಜನರ, ಸಂಘ-ಸಂಸ್ಥೆಗಳು ಇರಿಸಿರುವ ಹಣದ ಮೊತ್ತ ಏರಿಕೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2018 ಮತ್ತು 2019 ರಲ್ಲಿ ಭಾರತೀಯರು ಸ್ವಿಸ್‌ ಬ್ಯಾಂಕಿನಲ್ಲಿ ಇಟ್ಟಿದ್ದ ಹಣವು ಕುಸಿದಿತ್ತು, ಆದರೆ ಇದೀಗ ಸತತ ಎರಡು ವರ್ಷಗಳಿಂದ ಮತ್ತೆ ಏರಿಕೆಯಾಗಿವೆ. 2020 ರಲ್ಲಿ ಭಾರತೀಯರ ಒಟ್ಟು ನಿಧಿಗಳು 20,700 ಕೋಟಿ ರೂ. ಹೆಚ್ಚಾಗಿತ್ತು.

ಭಾರತ ಮತ್ತು ಸ್ವಿಟ್ಜರ್ಲೆಂಡ್, ಹಣಕಾಸು ಖಾತೆ ಮಾಹಿತಿಯ ಸ್ವಯಂಚಾಲಿತ ಹಂಚಿಕೆಗಾಗಿ, ಎರಡು ರಾಷ್ಟ್ರಗಳ ನಡುವಿನ ತೆರಿಗೆ ವಿಷಯಗಳಲ್ಲಿ ‘ಹಣಕಾಸು ಖಾತೆ ಮಾಹಿತಿಯ ಸ್ವಯಂಚಾಲಿತ ವಿನಿಮಯ’(AEOI)ವನ್ನು ಸಕ್ರಿಯಗೊಳಿಸಲು 2016ರ ನವೆಂಬರ್ 22 ರಂದು ಜಂಟಿ ಘೋಷಣೆಗೆ ಸಹಿ ಹಾಕಿದ್ದವು. ಸ್ವೀಕರಿಸಿದ ಮಾಹಿತಿಯ ಬಳಕೆ ಮತ್ತು ಬಹಿರಂಗಪಡಿಸುವಿಕೆಯು ಭಾರತ-ಸ್ವಿಟ್ಜರ್ಲೆಂಡ್ ‘ತೆರಿಗೆ ಒಪ್ಪಂದದ ಗೌಪ್ಯತೆಯ ನಿಬಂಧನೆ’ಗಳ ಮೂಲಕ ನಿಯಂತ್ರಿಸಲ್ಪಡುತ್ತದೆ.

ಇದನ್ನೂ ಓದಿ: ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

239 ಬ್ಯಾಂಕ್‌ಗಳನ್ನು ಒಳಗೊಂಡಿರುವ ಸ್ವಿಸ್ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಒಟ್ಟು ಗ್ರಾಹಕರ ಠೇವಣಿಗಳು 2021 ರಲ್ಲಿ ಸುಮಾರು 2.25 ಟ್ರಿಲಿಯನ್‌ ಸ್ವಿಸ್ ಫ್ರಾಂಕ್‌ಗೆ ಏರಿದೆ. ವಿದೇಶಿ ಗ್ರಾಹಕರು ಹಾಗೂ ಸಂಸ್ಥೆಗಳು ಸೇರಿದಂತೆ ಒಟ್ಟಾರೆ ನಿಧಿಗಳು ಸುಮಾರು 1.5 ಟ್ರಿಲಿಯನ್‌ ಸ್ವಿಸ್‌ ಫ್ರಾಂಕ್‌ಗೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...