Homeಅಂತರಾಷ್ಟ್ರೀಯಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

- Advertisement -
- Advertisement -

ಸ್ವಿಟ್ಜರ್ಲ್ಯಾಂಡ್ (ಸ್ವಿಸ್) ಬ್ಯಾಂಕುಗಳಲ್ಲಿ ಭಾರತೀಯರು ಇರಿಸಿರುವ ಹಣದ ಮೊತ್ತ 20,700 ಕೋಟಿಗೆ ಏರಿಕೆಯಾಗಿದೆ. ಇದು ಕಳೆದ 13 ವರ್ಷಗಳಲ್ಲೆ ಭಾರತಕ್ಕೆ ಸ್ವಿಸ್‌ ಬ್ಯಾಂಕಿಗೆ ಹರಿದ ಅತಿ ಹೆಚ್ಚಿನ ಮೊತ್ತ ಎಂದು ಸ್ವಿಟ್ಜರ್ಲ್ಯಾಂಡ್‌ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ.

2014 ರ ಲೋಕಸಭಾ ಚುನಾವಣೆಯ ವೇಳೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಹಣದ ಬಗ್ಗೆ ಭಾರೀ ಚರ್ಚೆಯಾಗಿತ್ತು. ಬಿಜೆಪಿಯು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಭಾರತೀಯ ಹಣವನ್ನು ಭಾರತಕ್ಕೆ ತರುವುದಾಗಿ ಭರವಸೆಗಳನ್ನು ನೀಡಿತ್ತು. ಆದರೆ, ಇದೀಗ ಬಿಜೆಪಿಯ ಮೋದಿ ನೇತೃತ್ವವು ಎರಡನೆ ಬಾರಿಗೆ ಆಡಳಿತ ನಡೆಸುತ್ತಿದೆ. ಆದರೂ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯ ಜನರ, ಸಂಘ-ಸಂಸ್ಥೆಗಳು ಇರಿಸಿರುವ ಹಣದ ಮೊತ್ತ 20,700 ಕೋಟಿ ರೂ.ಗೆ ಏರಿಕೆಯಾಗಿದೆ.

ಇದನ್ನೂ ಓದಿ: ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು!

2019 ರ ಅಂತ್ಯದ ವೇಳೆಗೆ ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರ ಹಣದ ಪ್ರಮಾಣದಲ್ಲಿ ಕುಸಿತವಾಗಿತ್ತು. ಆದರೆ 2020ರ ಅಂತ್ಯಕ್ಕೆ ಈ ಪ್ರಮಾಣ 13 ವರ್ಷಗಳಲ್ಲೇ ಗರಿಷ್ಟ ಪ್ರಮಾಣಕ್ಕೆ ಏರಿಕೆಯಾಗಿದೆ. ಎಸ್‌ಎನ್‌ಬಿ ವಿವರಗಳ ಅನ್ವಯ ಸಿಎಚ್‌ಎಫ್ ನಲ್ಲಿ ಪ್ರಸ್ತುತ ಒಟ್ಟು 20,706 ಕೋಟಿ ರೂ. ಭಾರತೀಯರ ಹಣವಿದೆ.

ಸ್ವಿಸ್ ಬ್ಯಾಂಕುಗಳ ‘ಒಟ್ಟು ಹೊಣೆಗಾರಿಕೆಗಳು’ ಅಥವಾ 2020 ರ ಕೊನೆಯಲ್ಲಿ ಅವರ ಭಾರತೀಯ ಗ್ರಾಹಕರ ಕಾರಣದಿಂದಾಗಿ ಸ್ವಿಸ್‌ ಬ್ಯಾಂಕಿಗೆ 4,000 ಕೋಟಿ ರೂ. ಹಣ ಹರಿದಿದೆ. ಅಂತೆಯೇ ಗ್ರಾಹಕರ ಠೇವಣಿಗಳಲ್ಲಿ, ಇತರ ಬ್ಯಾಂಕುಗಳ ಮೂಲಕ 3,100 ಕೋಟಿಗಿಂತ ಹೆಚ್ಚು ಹಣ ಜಮಾವಣೆ ಆಗಿದೆ.

ವಿಶ್ವಾಸಾರ್ಹರು ಅಥವಾ ಟ್ರಸ್ಟ್‌ಗಳ ಮೂಲಕ 16.5 ಕೋಟಿ ರೂ ಮತ್ತು ಸುಮಾರು 13,500 ಕೋಟಿಗೂ ಅಧಿಕ ಹಣ ಗ್ರಾಹಕರ ಬಾಂಡ್‌ಗಳು, ಸೆಕ್ಯುರಿಟೀಸ್ ಮತ್ತು ಇತರ ಹಣಕಾಸು ಸಾಧನಗಳ ರೂಪದಲ್ಲಿ ಬ್ಯಾಂಕ್‌ಗೆ ಸೇರ್ಪಡೆಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...