Homeಅಂತರಾಷ್ಟ್ರೀಯಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

ಸ್ವಿಸ್‌ ಬ್ಯಾಂಕ್‌: 20,700 ಕೋಟಿಗೆ ಏರಿಕೆಯಾದ ಭಾರತೀಯರ ಹಣ; 13 ವರ್ಷಗಳಲ್ಲೇ ಹೆಚ್ಚು!

- Advertisement -
- Advertisement -

ಸ್ವಿಟ್ಜರ್ಲ್ಯಾಂಡ್ (ಸ್ವಿಸ್) ಬ್ಯಾಂಕುಗಳಲ್ಲಿ ಭಾರತೀಯರು ಇರಿಸಿರುವ ಹಣದ ಮೊತ್ತ 20,700 ಕೋಟಿಗೆ ಏರಿಕೆಯಾಗಿದೆ. ಇದು ಕಳೆದ 13 ವರ್ಷಗಳಲ್ಲೆ ಭಾರತಕ್ಕೆ ಸ್ವಿಸ್‌ ಬ್ಯಾಂಕಿಗೆ ಹರಿದ ಅತಿ ಹೆಚ್ಚಿನ ಮೊತ್ತ ಎಂದು ಸ್ವಿಟ್ಜರ್ಲ್ಯಾಂಡ್‌ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ.

2014 ರ ಲೋಕಸಭಾ ಚುನಾವಣೆಯ ವೇಳೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಹಣದ ಬಗ್ಗೆ ಭಾರೀ ಚರ್ಚೆಯಾಗಿತ್ತು. ಬಿಜೆಪಿಯು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ ಸ್ವಿಸ್‌ ಬ್ಯಾಂಕ್‌ನಲ್ಲಿರುವ ಭಾರತೀಯ ಹಣವನ್ನು ಭಾರತಕ್ಕೆ ತರುವುದಾಗಿ ಭರವಸೆಗಳನ್ನು ನೀಡಿತ್ತು. ಆದರೆ, ಇದೀಗ ಬಿಜೆಪಿಯ ಮೋದಿ ನೇತೃತ್ವವು ಎರಡನೆ ಬಾರಿಗೆ ಆಡಳಿತ ನಡೆಸುತ್ತಿದೆ. ಆದರೂ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯ ಜನರ, ಸಂಘ-ಸಂಸ್ಥೆಗಳು ಇರಿಸಿರುವ ಹಣದ ಮೊತ್ತ 20,700 ಕೋಟಿ ರೂ.ಗೆ ಏರಿಕೆಯಾಗಿದೆ.

ಇದನ್ನೂ ಓದಿ: ಫೇಕ್ ಪೈಲ್ವಾನರ ಮತ್ತೊಂದು ಫೇಕ್ ನ್ಯೂಸ್ : ಸ್ವಿಸ್‌ ಬ್ಯಾಂಕ್‌ನ ಪಟ್ಟಿ ಸಿಕ್ತು ಎಂಬ ಅಪ್ಪಟ ಸುಳ್ಳು!

2019 ರ ಅಂತ್ಯದ ವೇಳೆಗೆ ಸ್ವಿಸ್ ಬ್ಯಾಂಕ್‌ಗಳಲ್ಲಿ ಭಾರತೀಯರ ಹಣದ ಪ್ರಮಾಣದಲ್ಲಿ ಕುಸಿತವಾಗಿತ್ತು. ಆದರೆ 2020ರ ಅಂತ್ಯಕ್ಕೆ ಈ ಪ್ರಮಾಣ 13 ವರ್ಷಗಳಲ್ಲೇ ಗರಿಷ್ಟ ಪ್ರಮಾಣಕ್ಕೆ ಏರಿಕೆಯಾಗಿದೆ. ಎಸ್‌ಎನ್‌ಬಿ ವಿವರಗಳ ಅನ್ವಯ ಸಿಎಚ್‌ಎಫ್ ನಲ್ಲಿ ಪ್ರಸ್ತುತ ಒಟ್ಟು 20,706 ಕೋಟಿ ರೂ. ಭಾರತೀಯರ ಹಣವಿದೆ.

ಸ್ವಿಸ್ ಬ್ಯಾಂಕುಗಳ ‘ಒಟ್ಟು ಹೊಣೆಗಾರಿಕೆಗಳು’ ಅಥವಾ 2020 ರ ಕೊನೆಯಲ್ಲಿ ಅವರ ಭಾರತೀಯ ಗ್ರಾಹಕರ ಕಾರಣದಿಂದಾಗಿ ಸ್ವಿಸ್‌ ಬ್ಯಾಂಕಿಗೆ 4,000 ಕೋಟಿ ರೂ. ಹಣ ಹರಿದಿದೆ. ಅಂತೆಯೇ ಗ್ರಾಹಕರ ಠೇವಣಿಗಳಲ್ಲಿ, ಇತರ ಬ್ಯಾಂಕುಗಳ ಮೂಲಕ 3,100 ಕೋಟಿಗಿಂತ ಹೆಚ್ಚು ಹಣ ಜಮಾವಣೆ ಆಗಿದೆ.

ವಿಶ್ವಾಸಾರ್ಹರು ಅಥವಾ ಟ್ರಸ್ಟ್‌ಗಳ ಮೂಲಕ 16.5 ಕೋಟಿ ರೂ ಮತ್ತು ಸುಮಾರು 13,500 ಕೋಟಿಗೂ ಅಧಿಕ ಹಣ ಗ್ರಾಹಕರ ಬಾಂಡ್‌ಗಳು, ಸೆಕ್ಯುರಿಟೀಸ್ ಮತ್ತು ಇತರ ಹಣಕಾಸು ಸಾಧನಗಳ ರೂಪದಲ್ಲಿ ಬ್ಯಾಂಕ್‌ಗೆ ಸೇರ್ಪಡೆಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಪ್ಪು ಹಣ, ಅನಿಲ್ ಅಂಬಾನಿ, ಮೋದಿ, ಅಕೌಂಟಿಗೆ 15 ಲಕ್ಷ, ರಫೇಲ್ ಡೀಲ್: ಒಂದು ಸ್ಫೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...