Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...