Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...