Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...