Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...