Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...