Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...