Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...