Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...