Homeಅಂತರಾಷ್ಟ್ರೀಯಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಲಕ್ಷಾಂತರ ಮಹಿಳೆಯರು ಒಮ್ಮೆಗೆ ಬೀದಿಗಿಳಿದಿದ್ದು ಏಕೆ ಗೊತ್ತಾ!

ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು

- Advertisement -
- Advertisement -

ದೇಶಗಳು ಎಷ್ಟೇ ಶ್ರೀಮಂತವಾಗಿದ್ದರೂ, ಅಭಿವೃದ್ಧಿ ಹೊಂದಿದ್ದರೂ ಅಲ್ಲಿನ ಮಹಿಳೆಯರನ್ನು ಎರಡನೇ ದರ್ಜೆಯ ಪ್ರಜೆಯನ್ನಾಗಿ ನೋಡುವ ಮನಸ್ಥಿತಿ ಇಂದಿಗೂ ಬದಲಾಗಿಲ್ಲ ಎಂಬುದು ಬೇಸರದ ಸಂಗತಿ. ಇವತ್ತು ನಾವು ಹೇಳ ಹೊರಟಿರುವುದು ‘ಕಪ್ಪು ಹಣದ ಖಜಾನೆ’ಯಾಗಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರ ಬಗ್ಗೆ.

ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಸ್ವಿಟ್ಜರ್ ಲೆಂಡ್ ತನ್ನ ದೇಶದ ಮಹಿಳೆಯರನ್ನು ಅಸಮಾನತೆಯಿಂದ ನಡೆಸಿಕೊಳ್ಳುತ್ತದೆ ಎಂದರೆ ನೀವು ನಂಬಲೇಬೇಕು. ಕಳೆದ ಒಂದು ವಾರದ ಹಿಂದೆ ಶುಕ್ರವಾರ (ಜೂನ್ 14)ರಂದು ಸ್ವಿಟ್ಜರ್ ಲೆಂಡ್ ನ ಮಹಿಳೆಯರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹೆಚ್ಚಿನ ಗೌರವ ಹಾಗೂ ಸಮಾನತೆ ಸಿಗಲೇಬೇಕು ಇದು ಹೋರಾಟದ ಹಕ್ಕೊತ್ತಾಯವಾಗಿತ್ತು.

ಸುಮಾರು 30 ವರ್ಷಗಳ ತರುವಾಯು ರಾಷ್ಟ್ರದಾದ್ಯಂತ ಸಮಾನ ಹಕ್ಕುಗಳಿಗಾಗಿ ಆಗ್ರಹಿಸಿ ಲಕ್ಷಾಂತರ ಮಹಿಳೆಯರು ಬೀದಿಗಿಳಿದಿದ್ದಾರೆ. ರಸ್ತೆ, ಇಕ್ಕೆಲಗಳ ತುಂಬೆಲ್ಲಾ ನೇರಳೆ ಬಣ್ಣದ ಧ್ವಜಗಳು, ಮಹಿಳೆಯರ ಮೆರವಣಿಗೆಗಳು ರಾರಾಜಿಸುತ್ತಿದ್ದವು.

ಸ್ವಿಟ್ಜರ್ ಲೆಂಡ್ ಮಹಿಳೆಯರಿಗೆ ಮತದಾನದ ಹಕ್ಕು ಸಿಕ್ಕಿದ್ದು ಯಾವಾಗ ಗೊತ್ತೆ?

ಪ್ರವಾಸಿಗರ ಸ್ವರ್ಗವಾಗಿರುವ, ‘ಅಭಿವೃದ್ಧಿ ದೇಶ’ ಎನಿಸಿಕೊಂಡಿರುವ ಸ್ವಿಟ್ಜರ್ ಲೆಂಡ್ ನ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿದ್ದು 1971ರಲ್ಲಿ. ಅಂದರೆ ಭಾರತ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಮತದಾನದ ಹಕ್ಕು ಸಿಕ್ಕ ಹಲವು ದಶಕಗಳ ನಂತರ. ಅಷ್ಟು ಮಾತ್ರವಲ್ಲ, 1985ರವರೆಗೆ ಸ್ವಿಟ್ಜರ್ಲೆಂಡ್ ನ ಮಹಿಳೆ ಬ್ಯಾಂಕ್ ಅಕೌಂಟ್ ತೆರೆಯಲು ಗಂಡನ ಅನುಮತಿ ಪಡೆಯಲೇಬೇಕಿತ್ತು ಎಂಬುದು ಅಲ್ಲಿನ ಅಸಮಾನತೆಯ, ಪುರುಷಾಧಿಪತ್ಯದ ಗಂಭೀರತೆಯನ್ನು ತಿಳಿಸುತ್ತದೆ.

ಮಹಿಳೆಯರಿಗೆ ಪುರುಷರಷ್ಟೆ ಸಮಾನ ಅವಕಾಶ ಸಿಗುತ್ತಿದೆಯೇ ಎಂದು ನೋಡಿದರೆ ಅದು ಕೂಡ ಪ್ರಶ್ನೆಯಾಗಿಯೇ ಉಳಿಯಬಹುದು. ಇಲ್ಲಿನ ಮಹಿಳಾ ಉದ್ಯೋಗಿಗಳಿಗೆ ‘ಹೆರಿಗೆ ರಜೆ’ ಪರಿಚಯವಾಗಿದ್ದು, ಜಾರಿಗೆ ಬಂದದ್ದು ತೀರಾ ಇತ್ತೀಚೆಗೆ 2005ರಲ್ಲಿ.

ಸ್ವಿಟ್ಜರ್ ಲೆಂಡ್ ಶೇ.59 ರಷ್ಟು ಮಹಿಳೆಯರು ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಾರೆ ಎನ್ನುತ್ತವೆ ಇತ್ತೀಚಿನ ಆಮ್ನೆಸ್ಟಿ ಅಂತರರಾಷ್ಟ್ರೀಯ ಸಮೀಕ್ಷೆಯ ನಡೆಸಿದ ವರದಿಗಳು. ಅಂದರೆ ಅಲ್ಲಿನ ಮಹಿಳೆಯರಿಗೆ ಸಮಾನ ಗೌರವವೆಂಬುದು ಕನಸಿನ ಮಾತಾಗಿದೆ

ಹಾಗಾಗಿ ಶಿಕ್ಷಕರು, ಕ್ಲೀನರ್ ಗಳು, ಆರೋಗ್ಯ ಪಾಲಕರು ಹಾಗೂ ಇತರೆ ಉದ್ಯೋಗದಲ್ಲಿ ಸಮಾನ ವೇತನ ಸಿಗಬೇಕು, ಸಮಾನ ಗೌರವ ಸಿಗಬೇಕು ಎಂಬುದು ಇವರ ಹಕ್ಕೊತ್ತಾಯವಾಗಿದೆ.

ಸ್ವಿಟ್ಜರ್ ಲೆಂಡ್ ಇತಿಹಾಸದಲ್ಲಿಯೇ 1991ರಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಇತಿಹಾಸ ನಿರ್ಮಿಸಿದ್ದರು. ಸುಮಾರು ಎರಡು ದಶಕಗಳ ನಂತರ ಜೂನ್ 14ರಂದು ಇವರು ನಡೆಸಿದ ಹೋರಾಟದಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚಿನ ಮಹಿಳೆಯರು ಕೆಲಸವನ್ನು ಬಿಟ್ಟು ಬೀದಿಗಳಿದು ಹೋರಾಟ ನಡೆಸಿದ್ದರು.

ಹಲವಾರು ಪತ್ರಿಕೆಗಳು ಈ ಹೋರಾಟಕ್ಕೆ  ಬೆಂಬಲ ಸೂಚಿಸಿ ಅದಕ್ಕಾಗಿ ರಜೆ ಹಾಕಿದ್ದ ಮಹಿಳೆಯರಿಗೆ ದಂಡ ವಿಧಿಸುವುದಿಲ್ಲ ಎಂದು ಘೋಷಿಸಿದ್ದರು. ಅಷ್ಟೆ ಅಲ್ಲದೇ ಲೀ ಟೈಮ್ಸ್ ಪತ್ರಿಕೆ ಮಹಿಳಾ ಪತ್ರಕರ್ತರು ಬರೆಯುತ್ತಿದ್ದ ಅಂಕಣಗಳ ಜಾಗವನ್ನು ಖಾಲಿ ಬಿಟ್ಟು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು ಎನ್ನಲಾಗಿದೆ.

ಆಧಾರ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...