Homeನಿಜವೋ ಸುಳ್ಳೋFact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

- Advertisement -
- Advertisement -

ಭಾರತದ ಪ್ರಧಾನಿ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಹಲವು ದೇಶಗಳಿಗೆ ರಫ್ತು ಮಾಡಿದ ನಂತರ ಭಾರತದ ಈ ಮಹಾನ್ ಕಾರ್ಯಕ್ಕಾಗಿ ಸ್ವಿಟ್ಜರ್‌ಲ್ಯಾಂಡ್‌ ದೇಶವು ಭಾರತದ ತ್ರಿವರ್ಣ ಧ್ವಜವನ್ನು ಚಿತ್ರಿಸುವ ಮೂಲಕ ಗೌರವ ಸಲ್ಲಿಸಿದೆ ಎಂಬ ಸುದ್ದಿಯು ಶರವೇಗದಲ್ಲಿ ವೈರಲ್‌ ಆಗಿದೆ.

ಏಪ್ರಿಲ್ 18 ರಂದು, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು “ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜ ಹರಿಬಿಟ್ಟಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕಾಗಿ ಸ್ವಿಜ್ಟರ್‌ಲ್ಯಾಂಡ್‌ ದೇಶವು ಈ ಗೌರವ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಸಂದೇಶವನ್ನು ಪ್ರಸಾರಭಾರತಿ ನ್ಯೂಸ್‌ ಸರ್ವಿಸ್‌ ಸಹ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದೆ.

ಟ್ವಿಟ್ಟರ್‌, ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಈ ಚಿತ್ರ ಸಾಕಷ್ಟು ಬಾರಿ ಹರಿದಾಡಿದೆ. ಇದರೊಂದಿಗೆ ನರೇಂದ್ರ ಮೋದಿಯವರ ಗುಣಗಾನವೂ ಸಹ ಮುಂದುವರೆದಿದೆ.

ಫ್ಯಾಕ್ಟ್‌ ಚೆಕ್‌:

ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಪ್ರೊಜೆಕ್ಟ್‌ ಮಾಡಿರುವುದು ನಿಜವಾಗಿದೆ. ಆದರೆ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕೆ ಈ ಕ್ರಮ ಎಂಬುದು ಸುಳ್ಳಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ಇಂಡಿಯನ್‌ ಎಂಬೆಸ್ಸಿ ಸಹ ಈ ಚಿತ್ರವನ್ನು ಟ್ವೀಟ್‌ ಮಾಡಿದ್ದು ವಿವರಣೆಯನ್ನು ಬರೆದಿದೆ.


ಇದನ್ನೂ ಓದಿ: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 


ಕೋವಿಡ್‌ ವಿರುದ್ಧ ಹೋರಾಟುತ್ತಿರುವ ಭಾರತೀಯರಿಗೆ ಸಾಲಿಡಾರಿಟಿ ತೋರಿಸಲು ಈ ಚಿತ್ರವನ್ನು ಪ್ರೊಜೆಕ್ಟ್‌ ಮಾಡಲಾಗಿತು ಎಂದು ಎಂಬೆಸ್ಸಿಯು ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಸ್ಪಷ್ಟವಾಗಿ ಬರೆದಿದೆ.

ಅಲ್ಲಿನ ಪ್ರವಾಸೋಧ್ಯಮ ಇಲಾಖೆಯ ಇನ್ಸಟ್ರಗ್ರಾಂ ಅಕೌಂಟ್‌ನಿಂದಲೂ ಸಹ ಈ ಚಿತ್ರವನ್ನು ಪ್ರಸಾರ ಮಾಡಲಾಗಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ಧನ್ಯವಾದ ತಿಳಿಸಿದೆ.

ಅಷ್ಟು ಮಾತ್ರವಲ್ಲದೇ ಜೆರ್ಮಾಟ್ ಮ್ಯಾಟರ್‌ಹಾರ್ನ್‌ನ ಪ್ರವಾಸೋದ್ಯಮ ವೆಬ್‌ಸೈಟ್‌ನ ಪ್ರಕಾರ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಹಲವಾರು ದೇಶಗಳ ಧ್ವಜಗಳನ್ನು ಪರ್ವತದ ಮೇಲೆ ಪ್ರೊಜೆಕ್ಟ್‌ ಮಾಡಲಾಗಿದೆ. ಅಂದರೆ ಅಲ್ಲಿ ಕೇವಲ ಭಾರತೀಯ ತ್ರಿವರ್ಣ ಮಾತ್ರವಲ್ಲದೇ ಚೀನಾ, ಅಮೆರಿಕ, ಜಪಾನ್, ಜರ್ಮನಿ, ಬ್ರಿಟನ್, ಸ್ಪೇನ್, ಫ್ರಾನ್ಸ್ ಮತ್ತು ಇಟಲಿಯ ರಾಷ್ಟ್ರೀಯ ಧ್ವಜಗಳೊಂದಿಗೆ ಬೆಳಗಿದ ಪರ್ವತದ ಚಿತ್ರಗಳನ್ನು ನೀವು ನೋಡಬಹುದು.

ಎಲ್ಲಾ ದೇಶಗಳಿಗೂ ಗೌರವ ಸಲ್ಲಿಸಲು ಆ ದೇಶಗಳ ಧ್ವಜಗಳನ್ನು ಪ್ರೊಜೆಕ್ಟ್‌ ಮಾಡಿದಾಗ ನಮ್ಮ ಭಾರತದಲ್ಲಿ ಮಾತ್ರ ನರೇಂದ್ರ ಮೋದಿಯವರ ಆಡಳಿತಕ್ಕೆ, ಅವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಕಳಿಸಿಕೊಟ್ಟಿದ್ದಕ್ಕೆ ಗೌರವ ಸೂಚಿಸಲಾಯಿತು ಎಂಬ ಸುಳ್ಳನ್ನು ಸಹ ಸೇರಿಸಿಕೊಂಡು ಪ್ರಸಾರ ಮಾಡಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸುಳ್ಳು ಹೇಳುವುದನ್ನು ಮನುವಾದಿಗಳು ಜನ್ಮಸಿದ್ದ ಹಕ್ಕನ್ನಾಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...