Homeನಿಜವೋ ಸುಳ್ಳೋFact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

- Advertisement -
- Advertisement -

ಭಾರತದ ಪ್ರಧಾನಿ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಹಲವು ದೇಶಗಳಿಗೆ ರಫ್ತು ಮಾಡಿದ ನಂತರ ಭಾರತದ ಈ ಮಹಾನ್ ಕಾರ್ಯಕ್ಕಾಗಿ ಸ್ವಿಟ್ಜರ್‌ಲ್ಯಾಂಡ್‌ ದೇಶವು ಭಾರತದ ತ್ರಿವರ್ಣ ಧ್ವಜವನ್ನು ಚಿತ್ರಿಸುವ ಮೂಲಕ ಗೌರವ ಸಲ್ಲಿಸಿದೆ ಎಂಬ ಸುದ್ದಿಯು ಶರವೇಗದಲ್ಲಿ ವೈರಲ್‌ ಆಗಿದೆ.

ಏಪ್ರಿಲ್ 18 ರಂದು, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು “ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜ ಹರಿಬಿಟ್ಟಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕಾಗಿ ಸ್ವಿಜ್ಟರ್‌ಲ್ಯಾಂಡ್‌ ದೇಶವು ಈ ಗೌರವ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಸಂದೇಶವನ್ನು ಪ್ರಸಾರಭಾರತಿ ನ್ಯೂಸ್‌ ಸರ್ವಿಸ್‌ ಸಹ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದೆ.

ಟ್ವಿಟ್ಟರ್‌, ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಈ ಚಿತ್ರ ಸಾಕಷ್ಟು ಬಾರಿ ಹರಿದಾಡಿದೆ. ಇದರೊಂದಿಗೆ ನರೇಂದ್ರ ಮೋದಿಯವರ ಗುಣಗಾನವೂ ಸಹ ಮುಂದುವರೆದಿದೆ.

ಫ್ಯಾಕ್ಟ್‌ ಚೆಕ್‌:

ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಪ್ರೊಜೆಕ್ಟ್‌ ಮಾಡಿರುವುದು ನಿಜವಾಗಿದೆ. ಆದರೆ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕೆ ಈ ಕ್ರಮ ಎಂಬುದು ಸುಳ್ಳಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ಇಂಡಿಯನ್‌ ಎಂಬೆಸ್ಸಿ ಸಹ ಈ ಚಿತ್ರವನ್ನು ಟ್ವೀಟ್‌ ಮಾಡಿದ್ದು ವಿವರಣೆಯನ್ನು ಬರೆದಿದೆ.


ಇದನ್ನೂ ಓದಿ: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 


ಕೋವಿಡ್‌ ವಿರುದ್ಧ ಹೋರಾಟುತ್ತಿರುವ ಭಾರತೀಯರಿಗೆ ಸಾಲಿಡಾರಿಟಿ ತೋರಿಸಲು ಈ ಚಿತ್ರವನ್ನು ಪ್ರೊಜೆಕ್ಟ್‌ ಮಾಡಲಾಗಿತು ಎಂದು ಎಂಬೆಸ್ಸಿಯು ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಸ್ಪಷ್ಟವಾಗಿ ಬರೆದಿದೆ.

ಅಲ್ಲಿನ ಪ್ರವಾಸೋಧ್ಯಮ ಇಲಾಖೆಯ ಇನ್ಸಟ್ರಗ್ರಾಂ ಅಕೌಂಟ್‌ನಿಂದಲೂ ಸಹ ಈ ಚಿತ್ರವನ್ನು ಪ್ರಸಾರ ಮಾಡಲಾಗಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ಧನ್ಯವಾದ ತಿಳಿಸಿದೆ.

ಅಷ್ಟು ಮಾತ್ರವಲ್ಲದೇ ಜೆರ್ಮಾಟ್ ಮ್ಯಾಟರ್‌ಹಾರ್ನ್‌ನ ಪ್ರವಾಸೋದ್ಯಮ ವೆಬ್‌ಸೈಟ್‌ನ ಪ್ರಕಾರ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಹಲವಾರು ದೇಶಗಳ ಧ್ವಜಗಳನ್ನು ಪರ್ವತದ ಮೇಲೆ ಪ್ರೊಜೆಕ್ಟ್‌ ಮಾಡಲಾಗಿದೆ. ಅಂದರೆ ಅಲ್ಲಿ ಕೇವಲ ಭಾರತೀಯ ತ್ರಿವರ್ಣ ಮಾತ್ರವಲ್ಲದೇ ಚೀನಾ, ಅಮೆರಿಕ, ಜಪಾನ್, ಜರ್ಮನಿ, ಬ್ರಿಟನ್, ಸ್ಪೇನ್, ಫ್ರಾನ್ಸ್ ಮತ್ತು ಇಟಲಿಯ ರಾಷ್ಟ್ರೀಯ ಧ್ವಜಗಳೊಂದಿಗೆ ಬೆಳಗಿದ ಪರ್ವತದ ಚಿತ್ರಗಳನ್ನು ನೀವು ನೋಡಬಹುದು.

ಎಲ್ಲಾ ದೇಶಗಳಿಗೂ ಗೌರವ ಸಲ್ಲಿಸಲು ಆ ದೇಶಗಳ ಧ್ವಜಗಳನ್ನು ಪ್ರೊಜೆಕ್ಟ್‌ ಮಾಡಿದಾಗ ನಮ್ಮ ಭಾರತದಲ್ಲಿ ಮಾತ್ರ ನರೇಂದ್ರ ಮೋದಿಯವರ ಆಡಳಿತಕ್ಕೆ, ಅವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಕಳಿಸಿಕೊಟ್ಟಿದ್ದಕ್ಕೆ ಗೌರವ ಸೂಚಿಸಲಾಯಿತು ಎಂಬ ಸುಳ್ಳನ್ನು ಸಹ ಸೇರಿಸಿಕೊಂಡು ಪ್ರಸಾರ ಮಾಡಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸುಳ್ಳು ಹೇಳುವುದನ್ನು ಮನುವಾದಿಗಳು ಜನ್ಮಸಿದ್ದ ಹಕ್ಕನ್ನಾಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...