Homeನಿಜವೋ ಸುಳ್ಳೋFact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

- Advertisement -
- Advertisement -

ಭಾರತದ ಪ್ರಧಾನಿ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಹಲವು ದೇಶಗಳಿಗೆ ರಫ್ತು ಮಾಡಿದ ನಂತರ ಭಾರತದ ಈ ಮಹಾನ್ ಕಾರ್ಯಕ್ಕಾಗಿ ಸ್ವಿಟ್ಜರ್‌ಲ್ಯಾಂಡ್‌ ದೇಶವು ಭಾರತದ ತ್ರಿವರ್ಣ ಧ್ವಜವನ್ನು ಚಿತ್ರಿಸುವ ಮೂಲಕ ಗೌರವ ಸಲ್ಲಿಸಿದೆ ಎಂಬ ಸುದ್ದಿಯು ಶರವೇಗದಲ್ಲಿ ವೈರಲ್‌ ಆಗಿದೆ.

ಏಪ್ರಿಲ್ 18 ರಂದು, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು “ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜ ಹರಿಬಿಟ್ಟಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕಾಗಿ ಸ್ವಿಜ್ಟರ್‌ಲ್ಯಾಂಡ್‌ ದೇಶವು ಈ ಗೌರವ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಸಂದೇಶವನ್ನು ಪ್ರಸಾರಭಾರತಿ ನ್ಯೂಸ್‌ ಸರ್ವಿಸ್‌ ಸಹ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದೆ.

ಟ್ವಿಟ್ಟರ್‌, ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಈ ಚಿತ್ರ ಸಾಕಷ್ಟು ಬಾರಿ ಹರಿದಾಡಿದೆ. ಇದರೊಂದಿಗೆ ನರೇಂದ್ರ ಮೋದಿಯವರ ಗುಣಗಾನವೂ ಸಹ ಮುಂದುವರೆದಿದೆ.

ಫ್ಯಾಕ್ಟ್‌ ಚೆಕ್‌:

ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಪ್ರೊಜೆಕ್ಟ್‌ ಮಾಡಿರುವುದು ನಿಜವಾಗಿದೆ. ಆದರೆ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕೆ ಈ ಕ್ರಮ ಎಂಬುದು ಸುಳ್ಳಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ಇಂಡಿಯನ್‌ ಎಂಬೆಸ್ಸಿ ಸಹ ಈ ಚಿತ್ರವನ್ನು ಟ್ವೀಟ್‌ ಮಾಡಿದ್ದು ವಿವರಣೆಯನ್ನು ಬರೆದಿದೆ.


ಇದನ್ನೂ ಓದಿ: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 


ಕೋವಿಡ್‌ ವಿರುದ್ಧ ಹೋರಾಟುತ್ತಿರುವ ಭಾರತೀಯರಿಗೆ ಸಾಲಿಡಾರಿಟಿ ತೋರಿಸಲು ಈ ಚಿತ್ರವನ್ನು ಪ್ರೊಜೆಕ್ಟ್‌ ಮಾಡಲಾಗಿತು ಎಂದು ಎಂಬೆಸ್ಸಿಯು ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಸ್ಪಷ್ಟವಾಗಿ ಬರೆದಿದೆ.

ಅಲ್ಲಿನ ಪ್ರವಾಸೋಧ್ಯಮ ಇಲಾಖೆಯ ಇನ್ಸಟ್ರಗ್ರಾಂ ಅಕೌಂಟ್‌ನಿಂದಲೂ ಸಹ ಈ ಚಿತ್ರವನ್ನು ಪ್ರಸಾರ ಮಾಡಲಾಗಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ಧನ್ಯವಾದ ತಿಳಿಸಿದೆ.

ಅಷ್ಟು ಮಾತ್ರವಲ್ಲದೇ ಜೆರ್ಮಾಟ್ ಮ್ಯಾಟರ್‌ಹಾರ್ನ್‌ನ ಪ್ರವಾಸೋದ್ಯಮ ವೆಬ್‌ಸೈಟ್‌ನ ಪ್ರಕಾರ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಹಲವಾರು ದೇಶಗಳ ಧ್ವಜಗಳನ್ನು ಪರ್ವತದ ಮೇಲೆ ಪ್ರೊಜೆಕ್ಟ್‌ ಮಾಡಲಾಗಿದೆ. ಅಂದರೆ ಅಲ್ಲಿ ಕೇವಲ ಭಾರತೀಯ ತ್ರಿವರ್ಣ ಮಾತ್ರವಲ್ಲದೇ ಚೀನಾ, ಅಮೆರಿಕ, ಜಪಾನ್, ಜರ್ಮನಿ, ಬ್ರಿಟನ್, ಸ್ಪೇನ್, ಫ್ರಾನ್ಸ್ ಮತ್ತು ಇಟಲಿಯ ರಾಷ್ಟ್ರೀಯ ಧ್ವಜಗಳೊಂದಿಗೆ ಬೆಳಗಿದ ಪರ್ವತದ ಚಿತ್ರಗಳನ್ನು ನೀವು ನೋಡಬಹುದು.

ಎಲ್ಲಾ ದೇಶಗಳಿಗೂ ಗೌರವ ಸಲ್ಲಿಸಲು ಆ ದೇಶಗಳ ಧ್ವಜಗಳನ್ನು ಪ್ರೊಜೆಕ್ಟ್‌ ಮಾಡಿದಾಗ ನಮ್ಮ ಭಾರತದಲ್ಲಿ ಮಾತ್ರ ನರೇಂದ್ರ ಮೋದಿಯವರ ಆಡಳಿತಕ್ಕೆ, ಅವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಕಳಿಸಿಕೊಟ್ಟಿದ್ದಕ್ಕೆ ಗೌರವ ಸೂಚಿಸಲಾಯಿತು ಎಂಬ ಸುಳ್ಳನ್ನು ಸಹ ಸೇರಿಸಿಕೊಂಡು ಪ್ರಸಾರ ಮಾಡಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸುಳ್ಳು ಹೇಳುವುದನ್ನು ಮನುವಾದಿಗಳು ಜನ್ಮಸಿದ್ದ ಹಕ್ಕನ್ನಾಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...