Homeನಿಜವೋ ಸುಳ್ಳೋFact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

Fact Check: ಸ್ವಿಟ್ಜರ್‌ಲ್ಯಾಂಡ್‌ ಪರ್ವತದಲ್ಲಿ ಭಾರತದ ತ್ರಿವರ್ಣ ಧ್ವಜ! ಬಿ.ಎಲ್‌ ಸಂತೋಷ್‌ ಸುಳ್ಳು ಹೇಳಿದರೆ?

- Advertisement -
- Advertisement -

ಭಾರತದ ಪ್ರಧಾನಿ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಹಲವು ದೇಶಗಳಿಗೆ ರಫ್ತು ಮಾಡಿದ ನಂತರ ಭಾರತದ ಈ ಮಹಾನ್ ಕಾರ್ಯಕ್ಕಾಗಿ ಸ್ವಿಟ್ಜರ್‌ಲ್ಯಾಂಡ್‌ ದೇಶವು ಭಾರತದ ತ್ರಿವರ್ಣ ಧ್ವಜವನ್ನು ಚಿತ್ರಿಸುವ ಮೂಲಕ ಗೌರವ ಸಲ್ಲಿಸಿದೆ ಎಂಬ ಸುದ್ದಿಯು ಶರವೇಗದಲ್ಲಿ ವೈರಲ್‌ ಆಗಿದೆ.

ಏಪ್ರಿಲ್ 18 ರಂದು, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು “ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜ ಹರಿಬಿಟ್ಟಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕಾಗಿ ಸ್ವಿಜ್ಟರ್‌ಲ್ಯಾಂಡ್‌ ದೇಶವು ಈ ಗೌರವ ಸಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಸಂದೇಶವನ್ನು ಪ್ರಸಾರಭಾರತಿ ನ್ಯೂಸ್‌ ಸರ್ವಿಸ್‌ ಸಹ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದೆ.

ಟ್ವಿಟ್ಟರ್‌, ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಈ ಚಿತ್ರ ಸಾಕಷ್ಟು ಬಾರಿ ಹರಿದಾಡಿದೆ. ಇದರೊಂದಿಗೆ ನರೇಂದ್ರ ಮೋದಿಯವರ ಗುಣಗಾನವೂ ಸಹ ಮುಂದುವರೆದಿದೆ.

ಫ್ಯಾಕ್ಟ್‌ ಚೆಕ್‌:

ಸ್ವಿಟ್ಜರ್ಲೆಂಡ್‌ನ ಮ್ಯಾಟರ್‌ಹಾರ್ನ್ ಪರ್ವತದ ಮೇಲೆ ಭಾರತದ ತ್ರಿವರ್ಣ ಧ್ವಜವನ್ನು ಪ್ರೊಜೆಕ್ಟ್‌ ಮಾಡಿರುವುದು ನಿಜವಾಗಿದೆ. ಆದರೆ ಮೋದಿಯವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ರಫ್ತು ಮಾಡಿದ್ದಕ್ಕೆ ಈ ಕ್ರಮ ಎಂಬುದು ಸುಳ್ಳಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ಇಂಡಿಯನ್‌ ಎಂಬೆಸ್ಸಿ ಸಹ ಈ ಚಿತ್ರವನ್ನು ಟ್ವೀಟ್‌ ಮಾಡಿದ್ದು ವಿವರಣೆಯನ್ನು ಬರೆದಿದೆ.


ಇದನ್ನೂ ಓದಿ: ಕೊರೊನಾ ಹರಡಲು ನೋಟುಗಳಿಗೆ ಎಂಜಲು ಸವರಿ ರಸ್ತೆಯಲ್ಲಿ ಎಸೆದಿದ್ದಾರೆಯೇ? ವಿಡಿಯೋದ ಅಸಲಿ ಸತ್ಯವೇನು? 


ಕೋವಿಡ್‌ ವಿರುದ್ಧ ಹೋರಾಟುತ್ತಿರುವ ಭಾರತೀಯರಿಗೆ ಸಾಲಿಡಾರಿಟಿ ತೋರಿಸಲು ಈ ಚಿತ್ರವನ್ನು ಪ್ರೊಜೆಕ್ಟ್‌ ಮಾಡಲಾಗಿತು ಎಂದು ಎಂಬೆಸ್ಸಿಯು ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಸ್ಪಷ್ಟವಾಗಿ ಬರೆದಿದೆ.

ಅಲ್ಲಿನ ಪ್ರವಾಸೋಧ್ಯಮ ಇಲಾಖೆಯ ಇನ್ಸಟ್ರಗ್ರಾಂ ಅಕೌಂಟ್‌ನಿಂದಲೂ ಸಹ ಈ ಚಿತ್ರವನ್ನು ಪ್ರಸಾರ ಮಾಡಲಾಗಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಭಾರತಕ್ಕೆ ಧನ್ಯವಾದ ತಿಳಿಸಿದೆ.

ಅಷ್ಟು ಮಾತ್ರವಲ್ಲದೇ ಜೆರ್ಮಾಟ್ ಮ್ಯಾಟರ್‌ಹಾರ್ನ್‌ನ ಪ್ರವಾಸೋದ್ಯಮ ವೆಬ್‌ಸೈಟ್‌ನ ಪ್ರಕಾರ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಹಲವಾರು ದೇಶಗಳ ಧ್ವಜಗಳನ್ನು ಪರ್ವತದ ಮೇಲೆ ಪ್ರೊಜೆಕ್ಟ್‌ ಮಾಡಲಾಗಿದೆ. ಅಂದರೆ ಅಲ್ಲಿ ಕೇವಲ ಭಾರತೀಯ ತ್ರಿವರ್ಣ ಮಾತ್ರವಲ್ಲದೇ ಚೀನಾ, ಅಮೆರಿಕ, ಜಪಾನ್, ಜರ್ಮನಿ, ಬ್ರಿಟನ್, ಸ್ಪೇನ್, ಫ್ರಾನ್ಸ್ ಮತ್ತು ಇಟಲಿಯ ರಾಷ್ಟ್ರೀಯ ಧ್ವಜಗಳೊಂದಿಗೆ ಬೆಳಗಿದ ಪರ್ವತದ ಚಿತ್ರಗಳನ್ನು ನೀವು ನೋಡಬಹುದು.

ಎಲ್ಲಾ ದೇಶಗಳಿಗೂ ಗೌರವ ಸಲ್ಲಿಸಲು ಆ ದೇಶಗಳ ಧ್ವಜಗಳನ್ನು ಪ್ರೊಜೆಕ್ಟ್‌ ಮಾಡಿದಾಗ ನಮ್ಮ ಭಾರತದಲ್ಲಿ ಮಾತ್ರ ನರೇಂದ್ರ ಮೋದಿಯವರ ಆಡಳಿತಕ್ಕೆ, ಅವರು ಹೈಡ್ರಾಕ್ಸಿಕ್ಲೋರೋಕ್ವಿನ್‌ ಮಾತ್ರೆಗಳನ್ನು ಕಳಿಸಿಕೊಟ್ಟಿದ್ದಕ್ಕೆ ಗೌರವ ಸೂಚಿಸಲಾಯಿತು ಎಂಬ ಸುಳ್ಳನ್ನು ಸಹ ಸೇರಿಸಿಕೊಂಡು ಪ್ರಸಾರ ಮಾಡಲಾಗಿದೆ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ಪ್ರಧಾನಿ ಪರಿಹಾರ ನಿಧಿಯಿಂದ ಹಣ ತೆಗೆಯಲು ಸೋನಿಯಾ ಒಪ್ಪಿಗೆ ಬೇಕೆ? ಅದಕ್ಕಾಗಿ ಮೋದಿ PM CARES ಶುರು ಮಾಡಿದರೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸುಳ್ಳು ಹೇಳುವುದನ್ನು ಮನುವಾದಿಗಳು ಜನ್ಮಸಿದ್ದ ಹಕ್ಕನ್ನಾಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...