Homeಕರ್ನಾಟಕಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ...

ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

- Advertisement -
- Advertisement -

ಈದ್ ಮೀಲಾದ್‌‌ ಕಾರ್ಯಕ್ರಮದ ವೇಳೆ ಕತ್ತಿ ಪ್ರದರ್ಶಿಸಿದ ಆರೋಪದಲ್ಲಿ ಐವರು ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಕ್ಟೋಬರ್ 9ರ  ಭಾನುವಾರದಂದು ಬೆಂಗಳೂರು ದಕ್ಷಿಣದ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೊಗಳ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.

ಪುರಾವೆಗಳ ಆಧಾರದ ಮೇಲೆ ಕ್ರಮಕೈಗೊಂಡಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದರೂ, ಇದೇ ರೀತಿಯ ಮೆರವಣಿಗೆಯಲ್ಲಿ ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಶಸ್ತ್ರಾಸ್ತ್ರಗಳನ್ನು ಝಳಪಿಸುತ್ತಿರುವ ಇತರ ಪ್ರಕರಣಗಳ ಬಗ್ಗೆ ಪೊಲೀಸರು ಏಕೆ ಕ್ರಮ ಕೈಗೊಂಡಿಲ್ಲ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಕ್ಟೋಬರ್ 9 ರಂದು ಸಂಜೆ 5:45 ರ ಸುಮಾರಿಗೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಮಾರಂಭದಲ್ಲಿ ಕೆಲವು ಕತ್ತಿಗಳು ಮತ್ತು ಮಾರಕಾಸ್ತ್ರಗಳನ್ನು ಬಳಸಲಾಯಿತು. ಅಲ್ಲಿ ಒಟ್ಟು 24 ಜನರಿದ್ದರು, ಅದರಲ್ಲಿ 18 ಮಂದಿಯನ್ನು ನಾವು ಬಂಧಿಸಿದ್ದೇವೆ” ಎಂದು ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತ ಪಿ. ಕೃಷ್ಣಕಾಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

“ನಾವು ಇನ್ನೂ ಐದು ಜನರನ್ನು ಹುಡುಕುತ್ತಿದ್ದೇವೆ. ಮೆರವಣಿಗೆ ಪ್ರಾರಂಭವಾದ ನಂತರ ಕೆಲವು ಜನರು ಒಟ್ಟುಗೂಡಿ ಕತ್ತಿಗಳೊಂದಿಗೆ ನೃತ್ಯ ಮಾಡಿದ್ದಾರೆ. ಬಂಧಿತರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಐವರು ಅಪ್ರಾಪ್ತರನ್ನು ಬಾಲಾಪರಾಧಿಗಳೆಂದು ಪರಿಗಣಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಸೇರಿದಂತೆ ಇತರ ಹಿಂದೂ ಬಲಪಂಥೀಯ ಸಂಘಟನೆಗಳು ಮೆರವಣಿಗೆಯಲ್ಲಿ ಆಯುಧಗಳನ್ನು ಬಳಸಿದ ಇದೇ ರೀತಿಯ ಪ್ರಕರಣಗಳಲ್ಲಿ ಮೌನವಾಗಿದ್ದ ಪೊಲೀಸರು, ಮುಸ್ಲಿಮರ ವಿಚಾರದಲ್ಲಿ ಬೇಗನೇ ಕಾರ್ಯಪ್ರವೃತ್ತರಾಗುತ್ತಾರೆ, ಇದು ಪೊಲೀಸರ ಬೂಟಾಟಿಕೆ ಅಲ್ಲದೆ ಎಂಬ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಎತ್ತಿದ್ದಾರೆ.

ತೀರಾ ಇತ್ತೀಚಿಗೆ ಉಡುಪಿಯಲ್ಲಿ ಅಕ್ಟೋಬರ್ 2ರಂದು ದುರ್ಗಾ ದೌಡ್ ಮೆರವಣಿಗೆಯಲ್ಲಿ ಕೂಡಾ ಮಾರಕಾಸ್ತ್ರಗಳು ಕಂಡುಬಂದಿತ್ತು. ಹಿಂದೂ ಜಾಗರಣ ವೇದಿಕೆಯು 10 ಸಾವಿರಕ್ಕೂ ಹೆಚ್ಚು ಜನರನ್ನು ಸಂಘಟಿಸಿ ಹಿಂದೂ ರಾಷ್ಟ್ರಕ್ಕಾಗಿ ಘೋಷಣೆಗಳನ್ನು ಕೂಗಿತ್ತು. ಮೆರವಣಿಗೆಯನ್ನು ಮುನ್ನಡೆಸುತ್ತಿರುವ ಕೆಲವರು ಕತ್ತಿಗಳನ್ನು ಝಳಪಿಸುತ್ತಿರುವುದು ಕೂಡಾ ಕಂಡುಬಂದಿತು. ಈ ರ್‍ಯಾಲಿಯಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್‌ ಸೇರಿದಂತೆ ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ಮುಸ್ಲಿಮರ ವಿಚಾರದಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಪಿ, ಬೆಂಗಳೂರಿನಲ್ಲಿ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡು, ಮಾಹಿತಿ ಬಂದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

“ಬೆಂಗಳೂರಿನ ಪುಟ್ಟೇನಹಳ್ಳಿಯ ಗಣೇಶ ಮೆರವಣಿಗೆ ವೇಳೆ ಇಂತಹದ್ದೇ ಘಟನೆ ನಡೆದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಶಸ್ತ್ರಾಸ್ತ್ರ ಕಾಯ್ದೆಯ ಇದೇ ರೀತಿಯ ಸೆಕ್ಷನ್‌ಗಳ ಅಡಿಯಲ್ಲಿ ನಾವು ಅವರ ಮೇಲೆ ಕೂಡಾ ಪ್ರಕರಣ ದಾಖಲಿಸಿದ್ದೇವೆ. ಇದು ನಿರ್ದಿಷ್ಟ ಪ್ರಕರಣಕ್ಕೆ ಸೀಮಿತವಾಗಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...