Homeಕರ್ನಾಟಕಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ...

ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

- Advertisement -
- Advertisement -

ಈದ್ ಮೀಲಾದ್‌‌ ಕಾರ್ಯಕ್ರಮದ ವೇಳೆ ಕತ್ತಿ ಪ್ರದರ್ಶಿಸಿದ ಆರೋಪದಲ್ಲಿ ಐವರು ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಕ್ಟೋಬರ್ 9ರ  ಭಾನುವಾರದಂದು ಬೆಂಗಳೂರು ದಕ್ಷಿಣದ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೊಗಳ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.

ಪುರಾವೆಗಳ ಆಧಾರದ ಮೇಲೆ ಕ್ರಮಕೈಗೊಂಡಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದರೂ, ಇದೇ ರೀತಿಯ ಮೆರವಣಿಗೆಯಲ್ಲಿ ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಶಸ್ತ್ರಾಸ್ತ್ರಗಳನ್ನು ಝಳಪಿಸುತ್ತಿರುವ ಇತರ ಪ್ರಕರಣಗಳ ಬಗ್ಗೆ ಪೊಲೀಸರು ಏಕೆ ಕ್ರಮ ಕೈಗೊಂಡಿಲ್ಲ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಕ್ಟೋಬರ್ 9 ರಂದು ಸಂಜೆ 5:45 ರ ಸುಮಾರಿಗೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಮಾರಂಭದಲ್ಲಿ ಕೆಲವು ಕತ್ತಿಗಳು ಮತ್ತು ಮಾರಕಾಸ್ತ್ರಗಳನ್ನು ಬಳಸಲಾಯಿತು. ಅಲ್ಲಿ ಒಟ್ಟು 24 ಜನರಿದ್ದರು, ಅದರಲ್ಲಿ 18 ಮಂದಿಯನ್ನು ನಾವು ಬಂಧಿಸಿದ್ದೇವೆ” ಎಂದು ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತ ಪಿ. ಕೃಷ್ಣಕಾಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

“ನಾವು ಇನ್ನೂ ಐದು ಜನರನ್ನು ಹುಡುಕುತ್ತಿದ್ದೇವೆ. ಮೆರವಣಿಗೆ ಪ್ರಾರಂಭವಾದ ನಂತರ ಕೆಲವು ಜನರು ಒಟ್ಟುಗೂಡಿ ಕತ್ತಿಗಳೊಂದಿಗೆ ನೃತ್ಯ ಮಾಡಿದ್ದಾರೆ. ಬಂಧಿತರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಐವರು ಅಪ್ರಾಪ್ತರನ್ನು ಬಾಲಾಪರಾಧಿಗಳೆಂದು ಪರಿಗಣಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಸೇರಿದಂತೆ ಇತರ ಹಿಂದೂ ಬಲಪಂಥೀಯ ಸಂಘಟನೆಗಳು ಮೆರವಣಿಗೆಯಲ್ಲಿ ಆಯುಧಗಳನ್ನು ಬಳಸಿದ ಇದೇ ರೀತಿಯ ಪ್ರಕರಣಗಳಲ್ಲಿ ಮೌನವಾಗಿದ್ದ ಪೊಲೀಸರು, ಮುಸ್ಲಿಮರ ವಿಚಾರದಲ್ಲಿ ಬೇಗನೇ ಕಾರ್ಯಪ್ರವೃತ್ತರಾಗುತ್ತಾರೆ, ಇದು ಪೊಲೀಸರ ಬೂಟಾಟಿಕೆ ಅಲ್ಲದೆ ಎಂಬ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಎತ್ತಿದ್ದಾರೆ.

ತೀರಾ ಇತ್ತೀಚಿಗೆ ಉಡುಪಿಯಲ್ಲಿ ಅಕ್ಟೋಬರ್ 2ರಂದು ದುರ್ಗಾ ದೌಡ್ ಮೆರವಣಿಗೆಯಲ್ಲಿ ಕೂಡಾ ಮಾರಕಾಸ್ತ್ರಗಳು ಕಂಡುಬಂದಿತ್ತು. ಹಿಂದೂ ಜಾಗರಣ ವೇದಿಕೆಯು 10 ಸಾವಿರಕ್ಕೂ ಹೆಚ್ಚು ಜನರನ್ನು ಸಂಘಟಿಸಿ ಹಿಂದೂ ರಾಷ್ಟ್ರಕ್ಕಾಗಿ ಘೋಷಣೆಗಳನ್ನು ಕೂಗಿತ್ತು. ಮೆರವಣಿಗೆಯನ್ನು ಮುನ್ನಡೆಸುತ್ತಿರುವ ಕೆಲವರು ಕತ್ತಿಗಳನ್ನು ಝಳಪಿಸುತ್ತಿರುವುದು ಕೂಡಾ ಕಂಡುಬಂದಿತು. ಈ ರ್‍ಯಾಲಿಯಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್‌ ಸೇರಿದಂತೆ ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ಮುಸ್ಲಿಮರ ವಿಚಾರದಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಪಿ, ಬೆಂಗಳೂರಿನಲ್ಲಿ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡು, ಮಾಹಿತಿ ಬಂದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

“ಬೆಂಗಳೂರಿನ ಪುಟ್ಟೇನಹಳ್ಳಿಯ ಗಣೇಶ ಮೆರವಣಿಗೆ ವೇಳೆ ಇಂತಹದ್ದೇ ಘಟನೆ ನಡೆದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಶಸ್ತ್ರಾಸ್ತ್ರ ಕಾಯ್ದೆಯ ಇದೇ ರೀತಿಯ ಸೆಕ್ಷನ್‌ಗಳ ಅಡಿಯಲ್ಲಿ ನಾವು ಅವರ ಮೇಲೆ ಕೂಡಾ ಪ್ರಕರಣ ದಾಖಲಿಸಿದ್ದೇವೆ. ಇದು ನಿರ್ದಿಷ್ಟ ಪ್ರಕರಣಕ್ಕೆ ಸೀಮಿತವಾಗಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...