Homeಕರ್ನಾಟಕಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ...

ಈದ್‌ ಮೀಲಾದ್‌ ರ್‍ಯಾಲಿಯಲ್ಲಿ ಕತ್ತಿ ಪ್ರದರ್ಶನ: ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಿದ ಬೆಂಗಳೂರು ಪೊಲೀಸ್

- Advertisement -
- Advertisement -

ಈದ್ ಮೀಲಾದ್‌‌ ಕಾರ್ಯಕ್ರಮದ ವೇಳೆ ಕತ್ತಿ ಪ್ರದರ್ಶಿಸಿದ ಆರೋಪದಲ್ಲಿ ಐವರು ಅಪ್ರಾಪ್ತರು ಸೇರಿದಂತೆ 18 ಜನರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಕ್ಟೋಬರ್ 9ರ  ಭಾನುವಾರದಂದು ಬೆಂಗಳೂರು ದಕ್ಷಿಣದ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ವೀಡಿಯೊಗಳ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ.

ಪುರಾವೆಗಳ ಆಧಾರದ ಮೇಲೆ ಕ್ರಮಕೈಗೊಂಡಿದ್ದೇವೆ ಎಂದು ಪೊಲೀಸರು ಹೇಳುತ್ತಿದ್ದರೂ, ಇದೇ ರೀತಿಯ ಮೆರವಣಿಗೆಯಲ್ಲಿ ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆಗಳು ಶಸ್ತ್ರಾಸ್ತ್ರಗಳನ್ನು ಝಳಪಿಸುತ್ತಿರುವ ಇತರ ಪ್ರಕರಣಗಳ ಬಗ್ಗೆ ಪೊಲೀಸರು ಏಕೆ ಕ್ರಮ ಕೈಗೊಂಡಿಲ್ಲ ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರಶ್ನಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಕ್ಟೋಬರ್ 9 ರಂದು ಸಂಜೆ 5:45 ರ ಸುಮಾರಿಗೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸಮಾರಂಭದಲ್ಲಿ ಕೆಲವು ಕತ್ತಿಗಳು ಮತ್ತು ಮಾರಕಾಸ್ತ್ರಗಳನ್ನು ಬಳಸಲಾಯಿತು. ಅಲ್ಲಿ ಒಟ್ಟು 24 ಜನರಿದ್ದರು, ಅದರಲ್ಲಿ 18 ಮಂದಿಯನ್ನು ನಾವು ಬಂಧಿಸಿದ್ದೇವೆ” ಎಂದು ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತ ಪಿ. ಕೃಷ್ಣಕಾಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

“ನಾವು ಇನ್ನೂ ಐದು ಜನರನ್ನು ಹುಡುಕುತ್ತಿದ್ದೇವೆ. ಮೆರವಣಿಗೆ ಪ್ರಾರಂಭವಾದ ನಂತರ ಕೆಲವು ಜನರು ಒಟ್ಟುಗೂಡಿ ಕತ್ತಿಗಳೊಂದಿಗೆ ನೃತ್ಯ ಮಾಡಿದ್ದಾರೆ. ಬಂಧಿತರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಐವರು ಅಪ್ರಾಪ್ತರನ್ನು ಬಾಲಾಪರಾಧಿಗಳೆಂದು ಪರಿಗಣಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಸೇರಿದಂತೆ ಇತರ ಹಿಂದೂ ಬಲಪಂಥೀಯ ಸಂಘಟನೆಗಳು ಮೆರವಣಿಗೆಯಲ್ಲಿ ಆಯುಧಗಳನ್ನು ಬಳಸಿದ ಇದೇ ರೀತಿಯ ಪ್ರಕರಣಗಳಲ್ಲಿ ಮೌನವಾಗಿದ್ದ ಪೊಲೀಸರು, ಮುಸ್ಲಿಮರ ವಿಚಾರದಲ್ಲಿ ಬೇಗನೇ ಕಾರ್ಯಪ್ರವೃತ್ತರಾಗುತ್ತಾರೆ, ಇದು ಪೊಲೀಸರ ಬೂಟಾಟಿಕೆ ಅಲ್ಲದೆ ಎಂಬ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಎತ್ತಿದ್ದಾರೆ.

ತೀರಾ ಇತ್ತೀಚಿಗೆ ಉಡುಪಿಯಲ್ಲಿ ಅಕ್ಟೋಬರ್ 2ರಂದು ದುರ್ಗಾ ದೌಡ್ ಮೆರವಣಿಗೆಯಲ್ಲಿ ಕೂಡಾ ಮಾರಕಾಸ್ತ್ರಗಳು ಕಂಡುಬಂದಿತ್ತು. ಹಿಂದೂ ಜಾಗರಣ ವೇದಿಕೆಯು 10 ಸಾವಿರಕ್ಕೂ ಹೆಚ್ಚು ಜನರನ್ನು ಸಂಘಟಿಸಿ ಹಿಂದೂ ರಾಷ್ಟ್ರಕ್ಕಾಗಿ ಘೋಷಣೆಗಳನ್ನು ಕೂಗಿತ್ತು. ಮೆರವಣಿಗೆಯನ್ನು ಮುನ್ನಡೆಸುತ್ತಿರುವ ಕೆಲವರು ಕತ್ತಿಗಳನ್ನು ಝಳಪಿಸುತ್ತಿರುವುದು ಕೂಡಾ ಕಂಡುಬಂದಿತು. ಈ ರ್‍ಯಾಲಿಯಲ್ಲಿ ಬಿಜೆಪಿ ಶಾಸಕ ರಘುಪತಿ ಭಟ್‌ ಸೇರಿದಂತೆ ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ಮುಸ್ಲಿಮರ ವಿಚಾರದಲ್ಲಿ ಪಕ್ಷಪಾತ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಪಿ, ಬೆಂಗಳೂರಿನಲ್ಲಿ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡು, ಮಾಹಿತಿ ಬಂದಾಗ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

“ಬೆಂಗಳೂರಿನ ಪುಟ್ಟೇನಹಳ್ಳಿಯ ಗಣೇಶ ಮೆರವಣಿಗೆ ವೇಳೆ ಇಂತಹದ್ದೇ ಘಟನೆ ನಡೆದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಶಸ್ತ್ರಾಸ್ತ್ರ ಕಾಯ್ದೆಯ ಇದೇ ರೀತಿಯ ಸೆಕ್ಷನ್‌ಗಳ ಅಡಿಯಲ್ಲಿ ನಾವು ಅವರ ಮೇಲೆ ಕೂಡಾ ಪ್ರಕರಣ ದಾಖಲಿಸಿದ್ದೇವೆ. ಇದು ನಿರ್ದಿಷ್ಟ ಪ್ರಕರಣಕ್ಕೆ ಸೀಮಿತವಾಗಿಲ್ಲ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...