Homeಕರ್ನಾಟಕಛಲಬಿಡದ ಕನ್ನಡ ಪ್ರೇಮಿ ಸೈಯದ್ ಇಸಾಕ್‌: ಗಣರಾಜ್ಯ ದಿನದಂದು ಗ್ರಂಥಾಲಯ ಓಪನ್‌

ಛಲಬಿಡದ ಕನ್ನಡ ಪ್ರೇಮಿ ಸೈಯದ್ ಇಸಾಕ್‌: ಗಣರಾಜ್ಯ ದಿನದಂದು ಗ್ರಂಥಾಲಯ ಓಪನ್‌

- Advertisement -
- Advertisement -

ಮೈಸೂರಿನ ರಾಜೀವನಗರ 2ನೇ ಹಂತದಲ್ಲಿ ಕನ್ನಡಪ್ರೇಮಿ ಸೈಯದ್ ಇಸಾಕ್‌ ಅವರು ನಿರ್ಮಿಸಿದ್ದ ಗ್ರಂಥಾಲಯ ಸುಟ್ಟು ಹೋಗಿದ್ದು ಭಾರೀ ಸುದ್ದಿಯಾಗಿತ್ತು. ಕುಡುಕನೊಬ್ಬನ ಅತಾಚುರ್ಯದಿಂದ ಬೀಡಿ ಬೆಂಕಿ ತಾಕಿ ಕಳೆದ ಏಪ್ರಿಲ್‌ನಲ್ಲಿ ಗ್ರಂಥಾಲಯ ಭಸ್ಮವಾದ ಬಳಿಕ, ಸೈಯದ್ ಅವರಿಗೆ ನೆರವಿನ ಮಹಾಪೂರದ ಭರವಸೆಯೇ ಹರಿದುಬಂದಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಸೈಯದ್ ಅವರ ಕನ್ನಡ ಪ್ರೇಮವನ್ನು ಕೊಂಡಾಡಲಾಯಿತು. ಪತ್ರಿಕೆಗಳು ವರದಿಗಳನ್ನು ಪ್ರಕಟಿಸಿದವು. ಸ್ಥಳಕ್ಕೆ ಶಾಸಕರು, ಸಂಸದರು, ಅಧಿಕಾರಿಗಳು ಭೇಟಿ ನೀಡಿದರು. ಮೈಸೂರು ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಂಟಿಯಾಗಿ ಪತ್ರಿಕಾ ಪ್ರಕಟಣೆ ನೀಡಿ ಗ್ರಂಥಾಲಯ ನಿರ್ಮಿಸುವುದಾಗಿ ಹೇಳಿದ್ದವು. ಮಿಸ್ಬಾ ಪತೇನ್‌ ಎಂಬವರು ಫಂಡ್‌ ರೈಸಿಂಗ್‌ ಮಾಡಿದ್ದರು. ಆದರೆ ಸರ್ಕಾರ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾಗಿದ್ದರಿಂದ ಸುಮಾರು 29 ಲಕ್ಷ ರೂ.ಗಳನ್ನು ದಾನಿಗಳಿಗೆ ಮಿಸ್ಬಾ ಹಿಂತಿರಿಸಿದ್ದರು.

ಗ್ರಂಥಾಲಯ ಸುಟ್ಟು ಹೋದ ಬಳಿಕ ಕೆಲವು ಜನಪ್ರತಿನಿಧಿಗಳು ಬೋರ ಎಂಬ ಸಂಸ್ಥೆಗೆ ಸೇರಿದ ನಿವೇಶನದಲ್ಲಿ ಸೈಯದ್ ಅವರು 2011ರಿಂದ ಗ್ರಂಥಾಲಯ ನಡೆಸುತ್ತಿದ್ದರು. ಹೀಗಾಗಿ ಬೋರ ಸಂಸ್ಥೆಯಿಂದ ಜಾಗವನ್ನು ಬಿಡಿಸಿಕೊಂಡು, ಗ್ರಂಥಾಲಯಕ್ಕೆ ಜಾಗವನ್ನು ಬಿಡಿಸಿಕೊಡುವುದಾಗಿ ಅಧಿಕಾರಿಗಳು ಹೇಳಿದ್ದರು. ನಿವೇಶನವೇನೋ ಮಂಜೂರಾಗಿತ್ತು. ಆದರೆ ಗ್ರಂಥಾಲಯ ನಿರ್ಮಾಣ ವಿಳಂಬವಾಗಿತ್ತು. ಕೊನೆಗೂ ಸರ್ಕಾರ ಗ್ರಂಥಾಲಯ ನಿರ್ಮಾಣ ಮಾಡಿಕೊಡುವಲ್ಲಿ ತಡ ಮಾಡಿತು. ಹೀಗಾಗಿ ವಿವಿಧ ದಾನಿಗಳಿಂದ ಬಂದಿದ್ದ ಹಣವನ್ನೆಲ್ಲ ಖರ್ಚು ಮಾಡಿ ಸೈಯದ್ ಇಸಾಕ್ ಅವರೇ ಗ್ರಂಥಾಲಯವನ್ನು ನಿರ್ಮಿಸಿದ್ದಾರೆ.

“ಗ್ರಂಥಾಲಯ ನಿರ್ಮಾಣ ವಿಳಂಬವಾಗುತ್ತಿದೆ. ಜಾಗವೇನೋ ಮಂಜೂರಾಗಿದೆ. ಆದರೆ, ಸರ್ಕಾರ ಗ್ರಂಥಾಲಯ ನಿರ್ಮಿಸದಿದ್ದರೆ ದಾನಿಗಳು ನೀಡಿರುವ ಒಂದಿಷ್ಟು ಹಣವಿದ್ದು, ಅದರಲ್ಲೇ ಮೊದಲಿನಂತೆ ಗುಡಿಸಲು ನಿರ್ಮಿಸಿ, ದಾನಿಗಳಿಂದ ಬಂದಿರುವ ಸಾವಿರಾರು ಪುಸ್ತಕಗಳನ್ನು ಗ್ರಂಥಾಲಯಕ್ಕೆ ಇರಿಸುತ್ತೇನೆ. ಮೈಸೂರಿನ ರಾಜೀವನಗರ ಭಾಗದಲ್ಲಿ ಕನ್ನಡ ಓದುವವರು ಕಡಿಮೆ ಇದ್ದಾರೆ. ಉರ್ದು ಬಳಕೆ ಹೆಚ್ಚಿದೆ. ಇಂತಹ ಜಾಗದಲ್ಲಿ ಕನ್ನಡ ಗ್ರಂಥಾಲಯ ಅಗತ್ಯವಿದೆ” ಎಂದು ಸೈಯದ್ ಹೇಳುತ್ತಲೇ ಬಂದಿದ್ದರು. ಕೊನೆಗೂ ತಮ್ಮ ಕನಸನ್ನು ಸೈಯದ್ ಇಸಾಕ್‌ ನನಸು ಮಾಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಜನರು ಕೊಟ್ಟಿದ್ದ ಹಣದಲ್ಲೇ ಗ್ರಂಥಾಲಯ ಮಾಡಿದ್ದೇನೆ. ಶಾಸಕ ಜಮೀರ್‌ ಅಹಮದ್ 2 ಲಕ್ಷ ರೂ., ಸಂಸದ ಪ್ರತಾಪ್‌ ಸಿಂಹ 50 ಸಾವಿರ ರೂ., ಸಚಿವ ಎಸ್.ಟಿ.ಸೋಮಶೇಖರ್‌ 25,000 ರೂ. ನೀಡಿದ್ದರು. ಅನೇಕರು ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದರು. ಎಲ್ಲ ಸೇರಿ 3,45,000 ರೂ. ಇತ್ತು. ಗ್ರಂಥಾಲಯ ನಿರ್ಮಾಣಕ್ಕೆ ಒಟ್ಟು ನಾಲ್ಕು ಲಕ್ಷ ರೂ. ಖರ್ಚಾಗಿದೆ. ಸಿಸಿಟಿವಿ ಹಾಕಿಸಬೇಕೆಂದು ಯೋಚಿಸಿದ್ದೆ. ಆದರೆ ಅಷ್ಟು ಹಣ ಸಿಗಲಿಲ್ಲ. ಇರುವಷ್ಟರಲ್ಲಿ ಸಂತೋಷದಲ್ಲಿದ್ದೇನೆ. ಜನವರಿ 26ಕ್ಕೆ ಸರ್ಕಾರಿ ಶಾಲಾ ಮಕ್ಕಳನ್ನು ಕರೆಸಿ, ರಾಷ್ಟ್ರಗೀತೆ, ನಾಡಗೀತೆ ಹಾಡಿಸಿ ಟೇಪ್‌ ಕತ್ತರಿಸಿ, ದೀಪ ಹಚ್ಚಿಸಿ ಶಾಲಾ ಮಕ್ಕಳಿಂದಲೇ ಗ್ರಂಥಾಲಯ ಉದ್ಘಾಟಿಸಲಿದ್ದೇನೆ” ಎಂದು ತಿಳಿಸಿದರು.

“ಕೂತುಕೊಳ್ಳಲು ಪ್ಲಾಸ್ಟಿಕ್‌ ಚೇರ್‌ ಹಾಕಿಸಬೇಕೆಂದಿದ್ದೇನೆ. ಈಗ ಆರು ಚೇರುಗಳಿವೆ. ಅದರಲ್ಲಿ ಎರಡು ಮುರಿದು ಹೋಗಿವೆ. ಇನ್ನೂ ನಾಲ್ಕು ಚೇರ್‌ಗಳನ್ನು ಖರೀದಿಸುತ್ತೇನೆ. ಕೂತು ಓದಲು ಅವಕಾಶ ಮಾಡಿಕೊಡುತ್ತೇನೆ. ಸಾಲಲಿಲ್ಲ ಎಂದರೆ ಸಿಮೆಂಟ್ ಇಟ್ಟಿಗೆ ತಂದು ಸುಣ್ಣು ಹೊಡೆದು ಒಳಗೆ ಜೋಡಿಸುತ್ತೇನೆ” ಎಂದರು.

“ಗ್ರಂಥಾಲಯ ನಿರ್ಮಿಸಿಕೊಡದಿದ್ದರೂ ಕರ್ನಾಟಕ ಸರ್ಕಾರ ಜಾಗವನ್ನು ಮಂಜೂರು ಮಾಡಿದೆ. ಅದಕ್ಕಾಗಿ ಹೃದಯಪೂರ್ವಕ ವಂದನೆಗಳು. ಈಗ ಬಂದೋಬಸ್ತ್‌ ಆಗಿ ಗ್ರಂಥಾಲಯ ನಿರ್ಮಾಣವಾಗಿದೆ. ಮೂರು ಅಡಿ ಗೋಡೆ ಕಟ್ಟಿ ಬಂದೋಬಸ್ತ್‌ ಮಾಡಲಾಗಿದೆ. ಶೀಟ್ ಹಾಕಿಸಲಾಗಿದೆ” ಎಂದು ಹೇಳಿದರು.

ಗ್ರಂಥಾಲಯ ಇಲಾಖೆಗೆ ಹಣ ನೀಡಿದ್ದೇವೆ: ಪಾಲಿಕೆ ಆಯುಕ್ತ

ಸೈಯದ್ ಅವರಿಗೆ ಗ್ರಂಥಾಲಯ ನಿರ್ಮಿಸುವ ಭರವಸೆ ನೀಡಿ ವಿಳಂಬ ಮಾಡುತ್ತಿರುವುದು ಏತಕ್ಕೆ ಎಂದು ಹಿಂದೊಮ್ಮೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್‌ ರೆಡ್ಡಿ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತ್ತು. “ಪ್ರತ್ಯೇಕವಾಗಿ ನಾವು ಲೈಬ್ರರಿ ಸೆಸ್‌ ಸಂಗ್ರಹಿಸುತ್ತೇವೆ. ಅದನ್ನು ಗ್ರಂಥಾಲಯ ಇಲಾಖೆಗೆ ನೀಡಿದ್ದೇವೆ. ಅವರು ಪ್ರಕ್ರಿಯೆ ನಡೆಸುತ್ತಿದ್ದಾರೆ. ಭೂಮಿಯನ್ನು ಮಂಜೂರು ಮಾಡಲಾಗಿದೆ. ಕಟ್ಟಡ ನಿರ್ಮಾಣವು ಗ್ರಂಥಾಲಯ ಇಲಾಖೆಯಿಂದ ಆಗಬೇಕು. ಕೊಡಬೇಕಾದ ಹಣವನ್ನು ಗ್ರಂಥಾಲಯ ಇಲಾಖೆಗೆ ನಾವು ನೀಡಿದ್ದೇವೆ” ಎಂದಿದ್ದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ

20 ಕೋಟಿ ರೂ. ಸೆಸ್‌ ಬಾಕಿ ಇದೆ: ಗ್ರಂಥಾಲಯ ಇಲಾಖೆ

ಗ್ರಂಥಾಲಯ ನಿರ್ಮಾಣಕ್ಕೆ ಪಾಲಿಕೆಯಿಂದ ನೀಡಬೇಕಾದ ಹಣವನ್ನೆಲ್ಲ ನೀಡಲಾಗಿದೆ ಎಂದು ಪಾಲಿಕೆ ಆಯುಕ್ತರು ಹೇಳಿದರೆ ಮೈಸೂರು ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್ ಅವರು ಬೇರೆ ತೊಂದರೆಗಳನ್ನು ಹೇಳಿಕೊಂಡಿದ್ದರು.

“ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್‌ ಅವರು ಗ್ರಂಥಾಲಯ ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದರು. ನಮ್ಮ ಇಲಾಖೆಯಲ್ಲಿ ಕಟ್ಟಡ ನಿರ್ಮಾಣಕ್ಕಾಗುವಷ್ಟು ಹಣವಿಲ್ಲ. ನಿತ್ಯದ ಖರ್ಚು ವೆಚ್ಚಕ್ಕೆ ಹಣ ಸಾಕಾಗುತ್ತಿಲ್ಲ. ಪಾಲಿಕೆಯಿಂದ 20 ಕೋಟಿ ರೂ. ಸೆಸ್ ಬಾಕಿ ಇದೆ. ಈಗ ಪ್ರಸ್ತುತವಾಗಿ ಬರಬೇಕಾಗಿರುವ ಸೆಸ್ ಬರುತ್ತಿದೆ. ಆದರೆ ನಿತ್ಯದ ಖರ್ಚು ವೆಚ್ಚಕ್ಕೇ ಆ ಹಣ ಹೋಗುತ್ತಿದೆ. ಮೈಸೂರು ನಗರದ ಪೀಪಲ್ಸ್ ಪಾರ್ಕ್‌‌ನಲ್ಲಿ ಐದೂವರೆ ಕೋಟಿ ರೂ.ಗಳಲ್ಲಿ ನಿರ್ಮಾಣವಾಗಿರುವ ಗ್ರಂಥಾಲಯ ಅಭಿವೃದ್ಧಿ ಕಾರ್ಯಗಳಿಗೆ ಇನ್ನೂ ಮೂರರಿಂದ ನಾಲ್ಕು ಕೋಟಿ ರೂ. ಬೇಕಾಗಿದೆ. ನಮ್ಮ ಬಳಿ ಅಷ್ಟು ಹಣವಿಲ್ಲ” ಎಂದು ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್‌ ಹೇಳಿದ್ದರು.

ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್‌

“ಸುಮಾರು 35 ಲಕ್ಷ ರೂ.ಗಳಲ್ಲಿ ಸೈಯದ್‌ ಅವರ ಗ್ರಂಥಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದಿಂದ ಯೋಜನೆ ಸಿದ್ಧಪಡಿಸಲಾಗಿದೆ. ಮುಡಾದವರು ನಿವೇಶನ ನೀಡಿದ್ದಾರೆ. ಸಿಎ ನಿವೇಶನ ಆಗಿರುವುದರಿಂದ ಹಣ ಕಟ್ಟಬೇಕು ಎಂದು ಲೆಟರ್‌ ಕೊಟ್ಟಿದ್ದಾರೆ. ಆದರೆ ನಂತರದಲ್ಲಿ ನಡೆದ ಸಭೆಯಲ್ಲಿ ಹಣ ಕಟ್ಟುವುದೇನೂ ಬೇಡವೆಂದು ಮುಡಾ ಆಯುಕ್ತರು ಭರವಸೆ ನೀಡಿದ್ದಾರೆ. ಪಾಲಿಕೆ ಮತ್ತು ಗ್ರಂಥಾಲಯ ಇಲಾಖೆಯಿಂದ ಕಟ್ಟಡ ನಿರ್ಮಿಸಿಕೊಳ್ಳಿ ಎಂದು ತಿಳಿಸಿದ್ದಾರೆ. ಯೋಜಿತ 35 ಲಕ್ಷ ರೂ.ಗಳಲ್ಲಿ 20 ಲಕ್ಷ ರೂ.ಗಳನ್ನಾದರೂ ಪಾಲಿಕೆ ನೀಡಿದರೆ ಗ್ರಂಥಾಲಯ ಕಟ್ಟಡ ನಿರ್ಮಿಸಬಹುದು. ಇದಕ್ಕೆ ಸಂಬಂಧಿಸಿದಂತೆ ಪತ್ರವನ್ನೂ ಬರೆದಿದ್ದೇನೆ” ಎಂದಿದ್ದರು.

ಸರ್ಕಾರದಿಂದ ವಿಳಂಬವಂತೂ ಆಯಿತು. ಅನೇಕರು ಪುಸ್ತಕಗಳನ್ನು ಸೈಯದ್ ಅವರಿಗೆ ಕಳುಹಿಸಿದ್ದರು. ಮನೆಯಲ್ಲಿಯೇ ಬಹುಕಾಲ ಪುಸ್ತಕಗಳನ್ನು ಇರಿಸಿಕೊಂಡಿದ್ದರು. ಆದರೆ ಕಟ್ಟಡ ನಿರ್ಮಾಣವಾಗುವುದು ಮರೀಚಿಕೆಯಾದಾಗ ದಾನಿಗಳ ಹಣ ಬಳಸಿ ಗ್ರಂಥಾಲಯ ಮರು ನಿರ್ಮಿಸಿದ್ದಾರೆ. “ಪೀಠೋಪಕರಣಗಳ ಅಗತ್ಯವಿದೆ. ದಾನಿಗಳು ಹೆಚ್ಚಿನ ಪುಸ್ತಕಗಳನ್ನೂ ನೀಡಬಹುದು” ಎಂದು ಸೈಯದ್ ಹೇಳಿದ್ದಾರೆ. ಅವರಿಗೆ ಹೆಚ್ಚಿನ ಸಹಾಯ ನೀಡಲು ಬಯಸುವವರು ಮೊ.ಸಂ. 99012 66487 ಸಂಪರ್ಕಿಸಬಹುದು.


ಇದನ್ನೂ ಓದಿರಿ: ಎಷ್ಟು ದಿನ ಕಾಯಲಿ? ಗುಡಿಸಲು ನಿರ್ಮಿಸಿ ಗ್ರಂಥಾಲಯ ಆರಂಭಿಸುವೆ: ಸೈಯದ್ ಇಸಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್ಕಾರ ಮಾಡಲಾಗದ್ದನ್ನು ಒಬ್ಬ ವ್ಯಕ್ತಿ ಮಾಡಿದ್ದಾರೆ. ಇದು ನಿಜವಾದ ಕನ್ನಡ ಪ್ರೇಮ ಮತ್ತು ಸಮಾಜಸೇವೆ.

  2. ಸೈಯದ್ ಇಸಾಕ್ ನಂತಹವರು ,ಇನ್ನೂ ಹೆಚ್ಚಿನ ರೀತಿಯಲ್ಲಿ ಮುಂದುಬರಲಿ. ಕನ್ನಡದ ಜನರು ನಡೆ ,ನುಡಿಯಲ್ಲಿ ಎಲ್ಲಾದರೂ ಇರಲಿ , ಎಂತಾದರು ಇರಲಿ ,ಕನ್ನಡ ನಾಗಿರಲಿ ಎಂಬ ಆಶಾಭಾವನೆ ಎಲ್ಲರಲ್ಲಿ ಮೂಡಿ ಬರಲಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...