Homeಕರ್ನಾಟಕಛಲಬಿಡದ ಕನ್ನಡ ಪ್ರೇಮಿ ಸೈಯದ್ ಇಸಾಕ್‌: ಗಣರಾಜ್ಯ ದಿನದಂದು ಗ್ರಂಥಾಲಯ ಓಪನ್‌

ಛಲಬಿಡದ ಕನ್ನಡ ಪ್ರೇಮಿ ಸೈಯದ್ ಇಸಾಕ್‌: ಗಣರಾಜ್ಯ ದಿನದಂದು ಗ್ರಂಥಾಲಯ ಓಪನ್‌

- Advertisement -
- Advertisement -

ಮೈಸೂರಿನ ರಾಜೀವನಗರ 2ನೇ ಹಂತದಲ್ಲಿ ಕನ್ನಡಪ್ರೇಮಿ ಸೈಯದ್ ಇಸಾಕ್‌ ಅವರು ನಿರ್ಮಿಸಿದ್ದ ಗ್ರಂಥಾಲಯ ಸುಟ್ಟು ಹೋಗಿದ್ದು ಭಾರೀ ಸುದ್ದಿಯಾಗಿತ್ತು. ಕುಡುಕನೊಬ್ಬನ ಅತಾಚುರ್ಯದಿಂದ ಬೀಡಿ ಬೆಂಕಿ ತಾಕಿ ಕಳೆದ ಏಪ್ರಿಲ್‌ನಲ್ಲಿ ಗ್ರಂಥಾಲಯ ಭಸ್ಮವಾದ ಬಳಿಕ, ಸೈಯದ್ ಅವರಿಗೆ ನೆರವಿನ ಮಹಾಪೂರದ ಭರವಸೆಯೇ ಹರಿದುಬಂದಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಸೈಯದ್ ಅವರ ಕನ್ನಡ ಪ್ರೇಮವನ್ನು ಕೊಂಡಾಡಲಾಯಿತು. ಪತ್ರಿಕೆಗಳು ವರದಿಗಳನ್ನು ಪ್ರಕಟಿಸಿದವು. ಸ್ಥಳಕ್ಕೆ ಶಾಸಕರು, ಸಂಸದರು, ಅಧಿಕಾರಿಗಳು ಭೇಟಿ ನೀಡಿದರು. ಮೈಸೂರು ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಂಟಿಯಾಗಿ ಪತ್ರಿಕಾ ಪ್ರಕಟಣೆ ನೀಡಿ ಗ್ರಂಥಾಲಯ ನಿರ್ಮಿಸುವುದಾಗಿ ಹೇಳಿದ್ದವು. ಮಿಸ್ಬಾ ಪತೇನ್‌ ಎಂಬವರು ಫಂಡ್‌ ರೈಸಿಂಗ್‌ ಮಾಡಿದ್ದರು. ಆದರೆ ಸರ್ಕಾರ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾಗಿದ್ದರಿಂದ ಸುಮಾರು 29 ಲಕ್ಷ ರೂ.ಗಳನ್ನು ದಾನಿಗಳಿಗೆ ಮಿಸ್ಬಾ ಹಿಂತಿರಿಸಿದ್ದರು.

ಗ್ರಂಥಾಲಯ ಸುಟ್ಟು ಹೋದ ಬಳಿಕ ಕೆಲವು ಜನಪ್ರತಿನಿಧಿಗಳು ಬೋರ ಎಂಬ ಸಂಸ್ಥೆಗೆ ಸೇರಿದ ನಿವೇಶನದಲ್ಲಿ ಸೈಯದ್ ಅವರು 2011ರಿಂದ ಗ್ರಂಥಾಲಯ ನಡೆಸುತ್ತಿದ್ದರು. ಹೀಗಾಗಿ ಬೋರ ಸಂಸ್ಥೆಯಿಂದ ಜಾಗವನ್ನು ಬಿಡಿಸಿಕೊಂಡು, ಗ್ರಂಥಾಲಯಕ್ಕೆ ಜಾಗವನ್ನು ಬಿಡಿಸಿಕೊಡುವುದಾಗಿ ಅಧಿಕಾರಿಗಳು ಹೇಳಿದ್ದರು. ನಿವೇಶನವೇನೋ ಮಂಜೂರಾಗಿತ್ತು. ಆದರೆ ಗ್ರಂಥಾಲಯ ನಿರ್ಮಾಣ ವಿಳಂಬವಾಗಿತ್ತು. ಕೊನೆಗೂ ಸರ್ಕಾರ ಗ್ರಂಥಾಲಯ ನಿರ್ಮಾಣ ಮಾಡಿಕೊಡುವಲ್ಲಿ ತಡ ಮಾಡಿತು. ಹೀಗಾಗಿ ವಿವಿಧ ದಾನಿಗಳಿಂದ ಬಂದಿದ್ದ ಹಣವನ್ನೆಲ್ಲ ಖರ್ಚು ಮಾಡಿ ಸೈಯದ್ ಇಸಾಕ್ ಅವರೇ ಗ್ರಂಥಾಲಯವನ್ನು ನಿರ್ಮಿಸಿದ್ದಾರೆ.

“ಗ್ರಂಥಾಲಯ ನಿರ್ಮಾಣ ವಿಳಂಬವಾಗುತ್ತಿದೆ. ಜಾಗವೇನೋ ಮಂಜೂರಾಗಿದೆ. ಆದರೆ, ಸರ್ಕಾರ ಗ್ರಂಥಾಲಯ ನಿರ್ಮಿಸದಿದ್ದರೆ ದಾನಿಗಳು ನೀಡಿರುವ ಒಂದಿಷ್ಟು ಹಣವಿದ್ದು, ಅದರಲ್ಲೇ ಮೊದಲಿನಂತೆ ಗುಡಿಸಲು ನಿರ್ಮಿಸಿ, ದಾನಿಗಳಿಂದ ಬಂದಿರುವ ಸಾವಿರಾರು ಪುಸ್ತಕಗಳನ್ನು ಗ್ರಂಥಾಲಯಕ್ಕೆ ಇರಿಸುತ್ತೇನೆ. ಮೈಸೂರಿನ ರಾಜೀವನಗರ ಭಾಗದಲ್ಲಿ ಕನ್ನಡ ಓದುವವರು ಕಡಿಮೆ ಇದ್ದಾರೆ. ಉರ್ದು ಬಳಕೆ ಹೆಚ್ಚಿದೆ. ಇಂತಹ ಜಾಗದಲ್ಲಿ ಕನ್ನಡ ಗ್ರಂಥಾಲಯ ಅಗತ್ಯವಿದೆ” ಎಂದು ಸೈಯದ್ ಹೇಳುತ್ತಲೇ ಬಂದಿದ್ದರು. ಕೊನೆಗೂ ತಮ್ಮ ಕನಸನ್ನು ಸೈಯದ್ ಇಸಾಕ್‌ ನನಸು ಮಾಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಜನರು ಕೊಟ್ಟಿದ್ದ ಹಣದಲ್ಲೇ ಗ್ರಂಥಾಲಯ ಮಾಡಿದ್ದೇನೆ. ಶಾಸಕ ಜಮೀರ್‌ ಅಹಮದ್ 2 ಲಕ್ಷ ರೂ., ಸಂಸದ ಪ್ರತಾಪ್‌ ಸಿಂಹ 50 ಸಾವಿರ ರೂ., ಸಚಿವ ಎಸ್.ಟಿ.ಸೋಮಶೇಖರ್‌ 25,000 ರೂ. ನೀಡಿದ್ದರು. ಅನೇಕರು ತಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದರು. ಎಲ್ಲ ಸೇರಿ 3,45,000 ರೂ. ಇತ್ತು. ಗ್ರಂಥಾಲಯ ನಿರ್ಮಾಣಕ್ಕೆ ಒಟ್ಟು ನಾಲ್ಕು ಲಕ್ಷ ರೂ. ಖರ್ಚಾಗಿದೆ. ಸಿಸಿಟಿವಿ ಹಾಕಿಸಬೇಕೆಂದು ಯೋಚಿಸಿದ್ದೆ. ಆದರೆ ಅಷ್ಟು ಹಣ ಸಿಗಲಿಲ್ಲ. ಇರುವಷ್ಟರಲ್ಲಿ ಸಂತೋಷದಲ್ಲಿದ್ದೇನೆ. ಜನವರಿ 26ಕ್ಕೆ ಸರ್ಕಾರಿ ಶಾಲಾ ಮಕ್ಕಳನ್ನು ಕರೆಸಿ, ರಾಷ್ಟ್ರಗೀತೆ, ನಾಡಗೀತೆ ಹಾಡಿಸಿ ಟೇಪ್‌ ಕತ್ತರಿಸಿ, ದೀಪ ಹಚ್ಚಿಸಿ ಶಾಲಾ ಮಕ್ಕಳಿಂದಲೇ ಗ್ರಂಥಾಲಯ ಉದ್ಘಾಟಿಸಲಿದ್ದೇನೆ” ಎಂದು ತಿಳಿಸಿದರು.

“ಕೂತುಕೊಳ್ಳಲು ಪ್ಲಾಸ್ಟಿಕ್‌ ಚೇರ್‌ ಹಾಕಿಸಬೇಕೆಂದಿದ್ದೇನೆ. ಈಗ ಆರು ಚೇರುಗಳಿವೆ. ಅದರಲ್ಲಿ ಎರಡು ಮುರಿದು ಹೋಗಿವೆ. ಇನ್ನೂ ನಾಲ್ಕು ಚೇರ್‌ಗಳನ್ನು ಖರೀದಿಸುತ್ತೇನೆ. ಕೂತು ಓದಲು ಅವಕಾಶ ಮಾಡಿಕೊಡುತ್ತೇನೆ. ಸಾಲಲಿಲ್ಲ ಎಂದರೆ ಸಿಮೆಂಟ್ ಇಟ್ಟಿಗೆ ತಂದು ಸುಣ್ಣು ಹೊಡೆದು ಒಳಗೆ ಜೋಡಿಸುತ್ತೇನೆ” ಎಂದರು.

“ಗ್ರಂಥಾಲಯ ನಿರ್ಮಿಸಿಕೊಡದಿದ್ದರೂ ಕರ್ನಾಟಕ ಸರ್ಕಾರ ಜಾಗವನ್ನು ಮಂಜೂರು ಮಾಡಿದೆ. ಅದಕ್ಕಾಗಿ ಹೃದಯಪೂರ್ವಕ ವಂದನೆಗಳು. ಈಗ ಬಂದೋಬಸ್ತ್‌ ಆಗಿ ಗ್ರಂಥಾಲಯ ನಿರ್ಮಾಣವಾಗಿದೆ. ಮೂರು ಅಡಿ ಗೋಡೆ ಕಟ್ಟಿ ಬಂದೋಬಸ್ತ್‌ ಮಾಡಲಾಗಿದೆ. ಶೀಟ್ ಹಾಕಿಸಲಾಗಿದೆ” ಎಂದು ಹೇಳಿದರು.

ಗ್ರಂಥಾಲಯ ಇಲಾಖೆಗೆ ಹಣ ನೀಡಿದ್ದೇವೆ: ಪಾಲಿಕೆ ಆಯುಕ್ತ

ಸೈಯದ್ ಅವರಿಗೆ ಗ್ರಂಥಾಲಯ ನಿರ್ಮಿಸುವ ಭರವಸೆ ನೀಡಿ ವಿಳಂಬ ಮಾಡುತ್ತಿರುವುದು ಏತಕ್ಕೆ ಎಂದು ಹಿಂದೊಮ್ಮೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್‌ ರೆಡ್ಡಿ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತ್ತು. “ಪ್ರತ್ಯೇಕವಾಗಿ ನಾವು ಲೈಬ್ರರಿ ಸೆಸ್‌ ಸಂಗ್ರಹಿಸುತ್ತೇವೆ. ಅದನ್ನು ಗ್ರಂಥಾಲಯ ಇಲಾಖೆಗೆ ನೀಡಿದ್ದೇವೆ. ಅವರು ಪ್ರಕ್ರಿಯೆ ನಡೆಸುತ್ತಿದ್ದಾರೆ. ಭೂಮಿಯನ್ನು ಮಂಜೂರು ಮಾಡಲಾಗಿದೆ. ಕಟ್ಟಡ ನಿರ್ಮಾಣವು ಗ್ರಂಥಾಲಯ ಇಲಾಖೆಯಿಂದ ಆಗಬೇಕು. ಕೊಡಬೇಕಾದ ಹಣವನ್ನು ಗ್ರಂಥಾಲಯ ಇಲಾಖೆಗೆ ನಾವು ನೀಡಿದ್ದೇವೆ” ಎಂದಿದ್ದರು.

ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ

20 ಕೋಟಿ ರೂ. ಸೆಸ್‌ ಬಾಕಿ ಇದೆ: ಗ್ರಂಥಾಲಯ ಇಲಾಖೆ

ಗ್ರಂಥಾಲಯ ನಿರ್ಮಾಣಕ್ಕೆ ಪಾಲಿಕೆಯಿಂದ ನೀಡಬೇಕಾದ ಹಣವನ್ನೆಲ್ಲ ನೀಡಲಾಗಿದೆ ಎಂದು ಪಾಲಿಕೆ ಆಯುಕ್ತರು ಹೇಳಿದರೆ ಮೈಸೂರು ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್ ಅವರು ಬೇರೆ ತೊಂದರೆಗಳನ್ನು ಹೇಳಿಕೊಂಡಿದ್ದರು.

“ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್‌ ಅವರು ಗ್ರಂಥಾಲಯ ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದರು. ನಮ್ಮ ಇಲಾಖೆಯಲ್ಲಿ ಕಟ್ಟಡ ನಿರ್ಮಾಣಕ್ಕಾಗುವಷ್ಟು ಹಣವಿಲ್ಲ. ನಿತ್ಯದ ಖರ್ಚು ವೆಚ್ಚಕ್ಕೆ ಹಣ ಸಾಕಾಗುತ್ತಿಲ್ಲ. ಪಾಲಿಕೆಯಿಂದ 20 ಕೋಟಿ ರೂ. ಸೆಸ್ ಬಾಕಿ ಇದೆ. ಈಗ ಪ್ರಸ್ತುತವಾಗಿ ಬರಬೇಕಾಗಿರುವ ಸೆಸ್ ಬರುತ್ತಿದೆ. ಆದರೆ ನಿತ್ಯದ ಖರ್ಚು ವೆಚ್ಚಕ್ಕೇ ಆ ಹಣ ಹೋಗುತ್ತಿದೆ. ಮೈಸೂರು ನಗರದ ಪೀಪಲ್ಸ್ ಪಾರ್ಕ್‌‌ನಲ್ಲಿ ಐದೂವರೆ ಕೋಟಿ ರೂ.ಗಳಲ್ಲಿ ನಿರ್ಮಾಣವಾಗಿರುವ ಗ್ರಂಥಾಲಯ ಅಭಿವೃದ್ಧಿ ಕಾರ್ಯಗಳಿಗೆ ಇನ್ನೂ ಮೂರರಿಂದ ನಾಲ್ಕು ಕೋಟಿ ರೂ. ಬೇಕಾಗಿದೆ. ನಮ್ಮ ಬಳಿ ಅಷ್ಟು ಹಣವಿಲ್ಲ” ಎಂದು ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್‌ ಹೇಳಿದ್ದರು.

ಗ್ರಂಥಾಲಯ ಉಪನಿರ್ದೇಶಕ ಬಿ.ಮಂಜುನಾಥ್‌

“ಸುಮಾರು 35 ಲಕ್ಷ ರೂ.ಗಳಲ್ಲಿ ಸೈಯದ್‌ ಅವರ ಗ್ರಂಥಾಲಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದಿಂದ ಯೋಜನೆ ಸಿದ್ಧಪಡಿಸಲಾಗಿದೆ. ಮುಡಾದವರು ನಿವೇಶನ ನೀಡಿದ್ದಾರೆ. ಸಿಎ ನಿವೇಶನ ಆಗಿರುವುದರಿಂದ ಹಣ ಕಟ್ಟಬೇಕು ಎಂದು ಲೆಟರ್‌ ಕೊಟ್ಟಿದ್ದಾರೆ. ಆದರೆ ನಂತರದಲ್ಲಿ ನಡೆದ ಸಭೆಯಲ್ಲಿ ಹಣ ಕಟ್ಟುವುದೇನೂ ಬೇಡವೆಂದು ಮುಡಾ ಆಯುಕ್ತರು ಭರವಸೆ ನೀಡಿದ್ದಾರೆ. ಪಾಲಿಕೆ ಮತ್ತು ಗ್ರಂಥಾಲಯ ಇಲಾಖೆಯಿಂದ ಕಟ್ಟಡ ನಿರ್ಮಿಸಿಕೊಳ್ಳಿ ಎಂದು ತಿಳಿಸಿದ್ದಾರೆ. ಯೋಜಿತ 35 ಲಕ್ಷ ರೂ.ಗಳಲ್ಲಿ 20 ಲಕ್ಷ ರೂ.ಗಳನ್ನಾದರೂ ಪಾಲಿಕೆ ನೀಡಿದರೆ ಗ್ರಂಥಾಲಯ ಕಟ್ಟಡ ನಿರ್ಮಿಸಬಹುದು. ಇದಕ್ಕೆ ಸಂಬಂಧಿಸಿದಂತೆ ಪತ್ರವನ್ನೂ ಬರೆದಿದ್ದೇನೆ” ಎಂದಿದ್ದರು.

ಸರ್ಕಾರದಿಂದ ವಿಳಂಬವಂತೂ ಆಯಿತು. ಅನೇಕರು ಪುಸ್ತಕಗಳನ್ನು ಸೈಯದ್ ಅವರಿಗೆ ಕಳುಹಿಸಿದ್ದರು. ಮನೆಯಲ್ಲಿಯೇ ಬಹುಕಾಲ ಪುಸ್ತಕಗಳನ್ನು ಇರಿಸಿಕೊಂಡಿದ್ದರು. ಆದರೆ ಕಟ್ಟಡ ನಿರ್ಮಾಣವಾಗುವುದು ಮರೀಚಿಕೆಯಾದಾಗ ದಾನಿಗಳ ಹಣ ಬಳಸಿ ಗ್ರಂಥಾಲಯ ಮರು ನಿರ್ಮಿಸಿದ್ದಾರೆ. “ಪೀಠೋಪಕರಣಗಳ ಅಗತ್ಯವಿದೆ. ದಾನಿಗಳು ಹೆಚ್ಚಿನ ಪುಸ್ತಕಗಳನ್ನೂ ನೀಡಬಹುದು” ಎಂದು ಸೈಯದ್ ಹೇಳಿದ್ದಾರೆ. ಅವರಿಗೆ ಹೆಚ್ಚಿನ ಸಹಾಯ ನೀಡಲು ಬಯಸುವವರು ಮೊ.ಸಂ. 99012 66487 ಸಂಪರ್ಕಿಸಬಹುದು.


ಇದನ್ನೂ ಓದಿರಿ: ಎಷ್ಟು ದಿನ ಕಾಯಲಿ? ಗುಡಿಸಲು ನಿರ್ಮಿಸಿ ಗ್ರಂಥಾಲಯ ಆರಂಭಿಸುವೆ: ಸೈಯದ್ ಇಸಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್ಕಾರ ಮಾಡಲಾಗದ್ದನ್ನು ಒಬ್ಬ ವ್ಯಕ್ತಿ ಮಾಡಿದ್ದಾರೆ. ಇದು ನಿಜವಾದ ಕನ್ನಡ ಪ್ರೇಮ ಮತ್ತು ಸಮಾಜಸೇವೆ.

  2. ಸೈಯದ್ ಇಸಾಕ್ ನಂತಹವರು ,ಇನ್ನೂ ಹೆಚ್ಚಿನ ರೀತಿಯಲ್ಲಿ ಮುಂದುಬರಲಿ. ಕನ್ನಡದ ಜನರು ನಡೆ ,ನುಡಿಯಲ್ಲಿ ಎಲ್ಲಾದರೂ ಇರಲಿ , ಎಂತಾದರು ಇರಲಿ ,ಕನ್ನಡ ನಾಗಿರಲಿ ಎಂಬ ಆಶಾಭಾವನೆ ಎಲ್ಲರಲ್ಲಿ ಮೂಡಿ ಬರಲಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...