Homeಸಿನಿಮಾಕ್ರೀಡೆಸೈಯದ್ ಮುಷ್ತಾಕ್ ಅಲಿ ಟ್ರೋಫಿ; ಕರ್ನಾಟಕ ಎಡವಿದ್ದೇಕೆ?: ವಿಶ್ಲೇಷಣೆ

ಸೈಯದ್ ಮುಷ್ತಾಕ್ ಅಲಿ ಟ್ರೋಫಿ; ಕರ್ನಾಟಕ ಎಡವಿದ್ದೇಕೆ?: ವಿಶ್ಲೇಷಣೆ

ಭಾರತೀಯ ದೇಶಿ ಕ್ರಿಕೆಟ್‌ನಲ್ಲಿ ಸೈಯದ್ ಮುಷ್ತಾಕ್ ಅಲಿ ಕ್ರಿಕೆಟ್ ಟ್ರೋಫಿಗೆ ಎಲ್ಲಿಲ್ಲದ ಮಹತ್ವವಿದೆ. ಅಸಲಿಗೆ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತುಂಗದಲ್ಲಿರುವ ಪಾಂಡ್ಯ ಸಹೋದರರಾದ ಹಾರ್ದಿಕ್ ಪಾಂಡ್ಯ, ಕುನ್ರಾಲ್ ಪಾಂಡ್ಯ ಹಾಗೂ ಯೂಸುಫ್ ಪಠಾಣ್ ಸೇರಿದಂತೆ ಅನೇಕ ಸ್ಫೋಟಕ ಆಟ ಆಡುವ ಆಟಗಾರರನ್ನು ಐಪಿಎಲ್ ಮತ್ತು ರಾಷ್ಟ್ರೀಯ ತಂಡಕ್ಕೆ ಪರಿಚಯಿಸಿದ್ದೇ ಈ ಸೈಯದ್ ಮುಷ್ತಾಕ್ ಅಲಿ ಟೂರ್ನಿ.

- Advertisement -
- Advertisement -

ಕಳೆದ ಎರಡು ವಾರಗಳಿಂದ ದೇಶಿ ಕ್ರಿಕೆಟ್‌ನಲ್ಲಿ ಅಕ್ಷರಶಃ ಮಿಂಚು ಹರಿಸಿದ್ದ ಸೈಯದ್ ಮುಷ್ತಾಕ್ ಅಲಿ ಕ್ರಿಕೆಟ್ ಟೂರ್ನಿ ಕೊನೆಗೂ ಅಂತ್ಯವಾಗಿದ್ದು, ಟೂರ್ನಿಯ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ದಿನೇಶ್ ಕಾರ್ತಿಕ್ ನೇತೃತ್ವದ ತಮಿಳುನಾಡು ತಂಡ ಎರಡನೇ ಬಾರಿಗೆ ಭಾರತೀಯ ಕ್ರಿಕೆಟ್‌ನ ಪ್ರತಿಷ್ಠಿತ ಕಪ್‌ಗೆ ಮುತ್ತಿಕ್ಕಿದೆ. ಈ ಟೂರ್ನಿ ಆರಂಭವಾದದ್ದೇ 2006-07ರ ಸಾಲಿನಲ್ಲಿ. ಚೊಚ್ಚಲ ಟೂರ್ನಿಯನ್ನು ತಮಿಳುನಾಡು ತಂಡ ಇದೇ ದಿನೇಶ್ ಕಾರ್ತಿಕ್ ಅವರ ನಾಯಕತ್ವದಲ್ಲಿ ಗೆದ್ದಿತ್ತು. ಈಗಲೂ ಸಹ ಮತ್ತೆ ಅವರದ್ದೇ ನಾಯಕತ್ವದಲ್ಲಿ ತಮಿಳುನಾಡು ತಂಡ ಎರಡನೇ ಭಾರಿ ಟ್ರೋಫಿಯನ್ನು ಗೆದ್ದುಕೊಂಡಿದೆ ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ ಈ ವರ್ಷದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯನ್ನು ಕರ್ನಾಟಕ ಗೆಲ್ಲಲಿದೆ ಎಂಬ ನಿರೀಕ್ಷೆ ಭಾರಿ ಮಟ್ಟದಲ್ಲಿತ್ತು. ಟೂರ್ನಿ ಆರಂಭಕ್ಕೂ ಮುನ್ನವೇ ಗೆಲ್ಲುವ ಫೇವರಿಟ್ ತಂಡಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿತ್ತು. ಏಕೆಂದರೆ, ಕರ್ನಾಟಕ 2018-19 ಮತ್ತು 2019-20ರ ಸಾಲಿನಲ್ಲಿ ಸತತ ಎರಡು ಬಾರಿ ಈ ಕಪ್ ಗೆದ್ದಿತ್ತು. ಈ ಮೂಲಕ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಸತತ ಎರಡು ಬಾರಿ ಕಪ್ ಜಯಿಸಿದ ತಂಡ ಎಂಬ ಅಪರೂಪದ ಶ್ರೇಯಕ್ಕೆ ಪಾತ್ರವಾಗಿತ್ತು. ಅದಕ್ಕೆ ತಕ್ಕಂತೆ ನಾಯಕ ಕರುಣ್ ನಾಯರ್ ನೇತೃತ್ವದಲ್ಲಿ ಬಲಿಷ್ಠವಾದ ತಂಡವನ್ನೇ ಆಯ್ಕೆ ಮಾಡಲಾಗಿತ್ತು.

ಇತ್ತೀಚೆಗೆ ಐಪಿಎಲ್‌ನಲ್ಲಿ ಸದ್ದು ಮಾಡಿದ್ದ ದೇವದತ್ ಪಡಿಕ್ಕಲ್, ಅನುಭವಿ ಆಟಗಾರ ಅನಿರುದ್ಧ ಜೋಶಿ ಜೊತೆಗೆ ನಾಯಕ ಕರುಣ್ ನಾಯರ್ ಬ್ಯಾಟಿಂಗ್ ಬಲ ತಂಡಕ್ಕಿದ್ದರೆ, ಅಭಿಮನ್ಯು ಮಿಥುನ್, ಮ್ಯಾಜಿಕ್ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಸೇರಿದಂತೆ ಅನುಭವಿ ಬೌಲಿಂಗ್ ಪಡೆಯ ಬಲವೂ ಇತ್ತು. ಆದರೂ, ಕರ್ನಾಟಕ ಪಂಜಾಬ್ ವಿರುದ್ಧ ಕ್ವಾರ್ಟರ್ ಫೈನಲ್‌ನಲ್ಲಿ ದಯನೀಯವಾಗಿ ಸೋಲನುಭವಿಸಿ ಕೂಟದಿಂದ ಹೊರ ಬಿದ್ದಿತ್ತು.

ಕರ್ನಾಟಕ ಎಡವಿದ್ದೆಲ್ಲಿ?

ಈ ಋತುವಿನ ಸೈಯದ್ ಮುಷ್ತಾಕ್ ಅಲಿ ಟೂರ್ನಿಯನ್ನು ಕರ್ನಾಟಕ ತಂಡ ಉತ್ತಮವಾಗಿಯೇ ಆರಂಭಿಸಿತ್ತು. ಎಲೈಟ್ ’ಎ’ ಗ್ರೂಪ್‌ನಲ್ಲಿ ಪಂಜಾಬ್ ತಂಡ ಜೊತೆಗೆ ಸ್ಥಾನ ಪಡೆದಿದ್ದ ಕರ್ನಾಟಕ ತಾನು ಆಡಿದ 5 ಪಂದ್ಯಗಳಲ್ಲಿ ಪೈಕಿ 4ರಲ್ಲಿ ಅದ್ಭುತ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಗ್ರೂಪ್ ಹಂತದಲ್ಲೇ ಕರ್ನಾಟಕ ಪಂಜಾಬ್ ಎದುರು ಸೋತಿತ್ತು. ಆದರೂ ಪಾಠ ಕಲಿಯಲಿಲ್ಲ.

ಸಾಮಾನ್ಯವಾಗಿ ಎಲ್ಲಾ ತಂಡಗಳ ಎದುರು ಉತ್ತಮವಾಗಿಯೇ ಬ್ಯಾಟಿಂಗ್ ಪ್ರದರ್ಶಿಸಿದ್ದ ಕರ್ನಾಟಕದ ಅನುಭವಿ ಬ್ಯಾಟಿಂಗ್ ಪಡೆ ಪಂಜಾಬ್ ಎದುರು ಮಾತ್ರ ಎರಡೂ ಪಂದ್ಯದಲ್ಲೂ ಮುಗ್ಗರಿಸಿತ್ತು. ಐಪಿಎಲ್ ಸ್ಟಾರ್ ಬೌಲರ್‌ಗಳಾದ ಸಂದೀಪ್ ಶರ್ಮ, ಹರ್ಷದೀಪ್ ಸಿಂಗ್, ಸಿದ್ದಾರ್ಥ್ ಕೌಲ್ ಹಾಗೂ ಮಾಯಾಂಕ್ ಮಾರ್ಕಂಡೆ ಪಂಜಾಬ್ ತಂಡದ ಬೌಲಿಂಗ್ ಬಲವಾಗಿ ಮುನ್ನುಗ್ಗಿದ್ದರು.

ಈ ನಾಲ್ವರೂ ಆಟಗಾರರು ತಮ್ಮ ಸಾಮರ್ಥ್ಯವೇನು ಎಂಬುದನ್ನು ಐಪಿಎಲ್‌ನಲ್ಲಿ ಈಗಾಗಲೇ ಸಾಬೀತುಪಡಿಸಿದ್ದಾರೆ. ಅದರಲ್ಲೂ ಸಂದೀಪ್ ಶರ್ಮಾ ಮತ್ತು ಹರ್ಷದೀಪ್ ಸಿಂಗ್ ತೀರಾ ಎಕಾನಮಿ ಬೌಲರ್‌ಗಳು. ಇವರ ಬೌಲಿಂಗ್‌ನಲ್ಲಿ ರನ್ ಗಳಿಸುವುದು ಅಷ್ಟು ಸುಲಭವಲ್ಲ. ಈ ಬೌಲರ್‌ಗಳು ಕರ್ನಾಟಕದ ಬ್ಯಾಟ್ಸ್‌ಮನ್‌ಗಳಿಗೆ ಕಬ್ಬಿಣದ ಕಡಲೆಯಾಗಲಿದ್ದಾರೆ ಎಂಬ ವಿಚಾರ ಕರುಣ್ ನಾಯರ್ ಪಡೆಗೆ ತಿಳಿಯದ ವಿಚಾರ ಏನಲ್ಲ.

PC: InsideSport

ಹೀಗಾಗಿ ಪಂದ್ಯದ ಆರಂಭಕ್ಕೂ ಮುನ್ನವೇ ನಾಯರ್ ಪಡೆ ಈ ಬೌಲರ್‌ಗಳನ್ನು ಎದುರಿಸುವುದು ಹೇಗೆ ಎಂದು ಗೇಮ್ ಪ್ಲ್ಯಾನ್ ಮಾಡಬೇಕಿತ್ತು. ಇವರ ಎಸೆತಗಳನ್ನು ದಿಟ್ಟವಾಗಿ ಎದುರಿಸಿ ರನ್ ಪೇರಿಸಬೇಕಿತ್ತು. ಆದರೆ, ಅಂತಹ ಕೆಲಸ ಮಾಡುವಲ್ಲಿ ಕರ್ನಾಟಕ ತಂಡ ಎಡವಿದೆ ಎಂಬುದನ್ನು ಪಂದ್ಯ ವೀಕ್ಷಿಸಿದ ಯಾರಾದರೂ ತಿಳಿದುಕೊಳ್ಳಬಹುದು.

ಏಕೆಂದರೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಕರ್ನಾಟಕ ಬ್ಯಾಟಿಂಗ್ ಪಡೆ ಪಂಜಾಬ್ ಎದುರು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕೇವಲ 87 ರನ್‌ಗಳಿಗೆ ಸರ್ವಪತನ ಅನುಭವಿಸಿತ್ತು. 20 ಓವರ್‌ಗಳ ಪೈಕಿ ಕರ್ನಾಟಕದ ದಾಂಡಿಗರು ಆಡಿದ್ದು ಕೇವಲ 17.2 ಓವರ್‌ಗಳು ಮಾತ್ರ.

ಕಾಡಿದ ಮನೀಶ್-ರಾಹುಲ್ ಅಲಭ್ಯತೆ

ಕಳೆದ ಎರಡು ಋತುಗಳಲ್ಲಿ ಕರ್ನಾಟಕ ಸತತವಾಗಿ ಮುಷ್ತಾಕ್ ಅಲಿ ಟ್ರೋಫಿಯನ್ನು ಗೆಲ್ಲುವಲ್ಲಿ ಮನೀಶ್ ಪಾಂಡೆ ಹಾಗೂ ಕೆ.ಎಲ್. ರಾಹುಲ್ ಪ್ರಮುಖ ಪಾತ್ರವಹಿಸಿದ್ದರು. ಈ ಇಬ್ಬರೂ ದಾಂಡಿಗರು ಕರ್ನಾಟಕದ ಬ್ಯಾಟಿಂಗ್ ಬೆನ್ನೆಲುಬು ಎಂದರೆ ತಪ್ಪಾಗಲಾರದು. ಆದರೆ, ಈ ಇಬ್ಬರೂ ಆಟಗಾರರನ್ನು ಆಸ್ಟ್ರೇಲಿಯಾ ಎದುರಿನ ಸರಣಿಗೆ ಆಯ್ಕೆ ಮಾಡಲಾಗಿತ್ತು.

ಇದನ್ನೂ ಓದಿ: ಮೊಹಮ್ಮದ್ ಸಿರಾಜ್: ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಛಾಪು

 

ಹೀಗಾಗಿ ಈ ಆಟಗಾರರು ಕಳೆದ ಡಿಸೆಂಬರ್‌ನಲ್ಲೇ ಆಸ್ಟ್ರೇಲಿಯಾಗೆ ತೆರಳಿದ್ದರು, ಅಲ್ಲದೆ, ಗವಾಸ್ಕರ್-ಬಾರ್ಡರ್ ಟೂರ್ನಿಯಲ್ಲೂ ಅದ್ಭುತ ಪ್ರದರ್ಶನ ನೀಡಿದ್ದರು. ಇದೇ ಕಾರಣಕ್ಕೆ ಈ ಆಟಗಾರರು ಸೈಯದ್ ಮುಷ್ತಾಕ್ ಅಲಿ ಟೂರ್ನಿಗೆ ಅಲಭ್ಯರಾಗಿದ್ದರು. ಇವರ ಅಲಭ್ಯತೆ ಇಡೀ ಟೂರ್ನಿಯ ಉದ್ದಕ್ಕೂ ಕರ್ನಾಟಕವನ್ನು ಕಾಡಿದೆ ಎಂದರೆ ತಪ್ಪಾಗಲಾರದು. ಕರ್ನಾಟಕದ ಬ್ಯಾಟಿಂಗ್ ಈ ಟೂರ್ನಿಯಲ್ಲಿ ಸೊರಗಲೂ ಸಹ ಇವರ ಅಲಭ್ಯತೆಯೇ ಕಾರಣ ಎಂದು ಕ್ರಿಕೆಟ್ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ಇಲ್ಲಿದೆ ಈ ವರ್ಷದ ದಾಖಲೆ ಪಟ್ಟಿ

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಪ್ರತಿ ವರ್ಷ ಒಂದಲ್ಲಾ ಒಂದು ದಾಖಲೆಗಳು ನಿರ್ಮಾಣವಾಗುತ್ತಲೇ ಇರುತ್ತದೆ. ಅಷ್ಟೇ ಅಲ್ಲ ಪ್ರತಿ ವರ್ಷ ಉದಯೋನ್ಮುಖ ಆಟಗಾರರ ಸಾಮರ್ಥ್ಯವೂ ಈ ಟೂರ್ನಿ ಮೂಲಕ ಅನಾವರಣ ಆಗುತ್ತಲೇ ಇರುತ್ತದೆ.

ಆ ನಿಟ್ಟಿನಲ್ಲಿ ಈ ವರ್ಷ ಬ್ಯಾಟಿಂಗ್‌ನಲ್ಲಿ ಮಿಂಚು ಹರಿಸಿದ ಆಟಗಾರ ಎಂದರೆ, ಅದು ತಮಿಳುನಾಡಿನ ಎನ್. ಜಗದೀಶನ್. ಈ ವರ್ಷ ಒಟ್ಟು 8 ಪಂದ್ಯಗಳಲ್ಲಿ ಕಣಕ್ಕಿಳಿದ ಜಗದೀಶನ್ 72.80 ಸರಾಸರಿಯಲ್ಲಿ 4 ಅರ್ಧ ಶತಕಗಳೊಂದಿಗೆ ಬರೋಬ್ಬರಿ 364 ರನ್‌ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಈ ವರ್ಷದ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಅಸಲಿಗೆ ಜಗದೀಶನ್ ಅವರನ್ನು ಕಳೆದ ವರ್ಷ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಿಡ್ಡಿಂಗ್‌ನಲ್ಲಿ ಆಯ್ಕೆ ಮಾಡಿತ್ತು. ಆದರೆ, ಕೇವಲ ಒಂದು ಪಂದ್ಯದಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು. ದುರಾದೃಷ್ಟವಶಾತ್ ಜಗದೀಶ್ ಆ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಶೂನ್ಯಕ್ಕೆ ಔಟ್ ಆಗಿದ್ದರು. ಹೀಗಾಗಿ ಅವರಿಗೆ ನಂತರ ಪಂದ್ಯಗಳಲ್ಲಿ ಅವಕಾಶ ನೀಡಲಾಗಿರಲಿಲ್ಲ. ಆದರೆ, ಈ ಋತುವಿನ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ತನ್ನ ಬ್ಯಾಟಿಂಗ್ ಸಾಮರ್ಥ್ಯ ಏನು ಎಂಬುದನ್ನು ಅವರು ತಮ್ಮ ಫ್ರಾಂಚೈಸಿಗೆ ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಮುಂದಿನ ಐಪಿಎಲ್ ಟೂರ್ನಿಯಲ್ಲಿ ಇವರ ಬ್ಯಾಟಿಂಗ್‌ನಿಂದ ಎಷ್ಟು ರನ್ ಹರಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದವರ ಪಟ್ಟಿಯಲ್ಲಿ ಬರೋಡಾದ ಕೆ.ಹೆಚ್. ದೇವದರ್ (349 ರನ್), ಪಂಜಾಬ್ ರಾಜ್ಯದ ಪ್ರಬ್ ಸಿಮ್ರಾನ್ ಸಿಂಗ್ (341 ರನ್) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.
ಇನ್ನು ಬೌಲಿಂಗ್‌ನಲ್ಲಿ ಕೈಚಳಕ ತೋರಿಸಿದ ಬಿಹಾರದ ಅಶುತೋಷ್ ಆಮನ್ 6 ಪಂದ್ಯಗಳಲ್ಲಿ 16 ವಿಕೆಟ್ ಗಳಿಸುವ ಮೂಲಕ ಅತ್ಯಧಿಕ ವಿಕೆಟ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಬರೋಡಾದ ಮೇರೀವಾಲಾ (15 ವಿಕೆಟ್) ಮತ್ತು ಮಧ್ಯಪ್ರದೇಶದ ಅವೀಶ್ ಖಾನ್ (14 ವಿಕೆಟ್) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಸೈಯದ್ ಮುಷ್ತಾಕ್ ಅಲಿ ಟೂರ್ನಿ

ಭಾರತೀಯ ದೇಶಿ ಕ್ರಿಕೆಟ್‌ನಲ್ಲಿ ಸೈಯದ್ ಮುಷ್ತಾಕ್ ಅಲಿ ಕ್ರಿಕೆಟ್ ಟ್ರೋಫಿಗೆ ಎಲ್ಲಿಲ್ಲದ ಮಹತ್ವವಿದೆ. ಅಸಲಿಗೆ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತುಂಗದಲ್ಲಿರುವ ಪಾಂಡ್ಯ ಸಹೋದರರಾದ ಹಾರ್ದಿಕ್ ಪಾಂಡ್ಯ, ಕುನ್ರಾಲ್ ಪಾಂಡ್ಯ ಹಾಗೂ ಯೂಸುಫ್ ಪಠಾಣ್ ಸೇರಿದಂತೆ ಅನೇಕ ಸ್ಫೋಟಕ ಆಟ ಆಡುವ ಆಟಗಾರರನ್ನು ಐಪಿಎಲ್ ಮತ್ತು ರಾಷ್ಟ್ರೀಯ ತಂಡಕ್ಕೆ ಪರಿಚಯಿಸಿದ್ದೇ ಈ ಸೈಯದ್ ಮುಷ್ತಾಕ್ ಅಲಿ ಟೂರ್ನಿ.

ಈ ಟೂರ್ನಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕಾರಣಕ್ಕೆ ಈ ಎಲ್ಲಾ ಆಟಗಾರರನ್ನು ಐಪಿಎಲ್ ಫ್ರಾಂಚೈಸಿಗಳು ಆಯ್ಕೆ ಮಾಡಿದ್ದವು. ಆನಂತರವೇ ಇವರೆಲ್ಲರೂ ಅಂತಾರಾಷ್ಟ್ರೀಯ ತಂಡದದಲ್ಲಿ ಸ್ಥಾನ ಪಡೆದು ಮಿಂಚು ಹರಿಸಿದ್ದರು ಎಂಬುದು ಉಲ್ಲೇಖಾರ್ಹ.


ಇದನ್ನೂ ಓದಿ: 2020: ಕ್ರೀಡಾ ಕ್ಷೇತ್ರಕ್ಕೆ ಅತಿ ಹೆಚ್ಚು ಮುಳ್ಳಾದ ಕೊರೊನಾ, ಇನ್ನೂ ಸರಿಯದ ಕರಿಛಾಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...