Homeಮುಖಪುಟಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ...

ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

- Advertisement -
- Advertisement -

ಕಳೆದ ಭಾನುವಾರ (ಡಿ.8, 2024) ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದು ದೇಶ ಬಂಡುಕೋರರ (ಹೋರಾಟಗಾರರ) ವಶವಾದ ಬಳಿಕ, ಸಿರಿಯಾ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಮಧ್ಯಂತರ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ.

ಕೆಲ ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ಬಳಿಕ ನೋಬೆಲ್ ಪುರಸ್ಕತ ಮುಹಮ್ಮದ್ ಯೂನುಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಅದೇ ರೀತಿಯ ಬೆಳವಣಿಗೆ ಸಿರಿಯಾದಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಸ್ತುತ ಸಿರಿಯಾ ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಗುಂಪಿನ ವಶದಲ್ಲಿದೆ. ಭಯೋತ್ಪಾದಕ ಗುಂಪು ಅಲ್-ಖೈದಾ ಮತ್ತು ಮಿತ್ರ ಬಣಗಳ ಬೆಂಬಲಿತ ಈ ಗುಂಪನ್ನು ‘ಅಲ್-ನುಸ್ರಾ ಫ್ರಂಟ್’ ಎಂದೂ ಕರೆಯಲಾಗುತ್ತದೆ. ಬಂಡುಕೋರರ ಈ ಗುಂಪಿಗೆ ಸಿರಿಯಾದ ಪ್ರತಿಪಕ್ಷಗಳ ಬೆಂಬಲವೂ ಇದೆ ಎನ್ನಲಾಗಿದೆ.

ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಸೋಮವಾರ ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬಂಡುಕೋರರ ನಿಯಂತ್ರಣದಲ್ಲಿದ್ದ ಸಣ್ಣ ಪ್ರದೇಶವೊಂದರ ಆಡಳಿತ ನಡೆಸುತ್ತಿದ್ದ ಮೊಹಮ್ಮದ್ ಅಲ್ ಬಶೀರ್ ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಸಹಜ ಸ್ಥಿತಿಯತ್ತ ಸಿರಿಯಾ :

ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದ ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಹೇಳಿದ್ದಾರೆ.

ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಜಲಾಲಿ ತಿಳಿಸಿದ್ದಾರೆ.

ಸಿರಿಯಾ ಕರೆನ್ಸಿ ಮುಂದುವರಿಕೆ

ಸಿರಿಯಾದ ಬ್ಯಾಂಕ್‌ಗಳು ಮಂಗಳವಾರದಿಂದ ಪುನಃ ಕಾರ್ಯಾರಂಭ ಮಾಡಲಿವೆ. ಕಚೇರಿಗೆ ಹಿಂದಿರುಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಿರಿಯಾ ಕರೆನ್ಸಿ ಮುಂದುವರಿಯಲಿದೆ ಎಂದು ಸಿರಿಯಾ ಸೆಂಟ್ರಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇರಾಕ್ ಪ್ರವೇಶಿಸಿದ 4 ಸಾವಿರ ಸೈನಿಕರು

ಬಂಡುಕೋರರು ಅಥವಾ ಹೋರಾಟಗಾರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡ ಬಳಿಕ ಸಿರಿಯಾದ 4 ಸಾವಿರಕ್ಕೂ ಅಧಿಕ ಸೈನಿಕರು ಗಡಿದಾಟಿ ಇರಾಕ್ ಪ್ರವೇಶಿಸಿದ್ದಾರೆ ಎಂದು ಇರಾಕ್ ಸೇನಾ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಶಸ್ತ್ರ ಸಜ್ಜಿತ ವಾಹನಗಳೊಂದಿಗೆ ಸಿರಿಯಾದ ಸೈನಿಕರು ಇರಾಕ್ ಪ್ರವೇಶಿಸಿದ್ದಾರೆ. ಅವರನ್ನು ಶಿಬಿರಗಳಲ್ಲಿ ಇರಿಸಲಾಗುವುದು ಎಂದು ಇರಾಕ್‌ನ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಮಾಹಿತಿ ನೀಡಿವೆ.

ಮಾಸ್ಕೋದಲ್ಲಿ ಆಶ್ರಯ ಪಡೆದ ಅಸದ್, ಕುಟುಂಬ

ದೇಶ ಬಂಡುಕೋರರ ವಶವಾದ ಬಳಿಕ ಪಲಾಯನ ಮಾಡಿರುವ ಪದಚ್ಯುತ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ (ಪತ್ನಿ, ಮೂವರು ಮಕ್ಕಳು) ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಾನವೀಯ ನೆಲೆಯಲ್ಲಿ ಅಸದ್ ಮತ್ತು ಕುಟುಂಬಕ್ಕೆ ಆಶ್ರಯ ನೀಡಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿ ಶುರು ಮಾಡಿದ ಅಮೆರಿಕ, ಇಸ್ರೇಲ್

ಸಿರಿಯಾ ಅಧ್ಯಕ್ಷ ಸ್ಥಾನದಿಂದ ಬಶರ್ ಅಲ್ ಅಸಾದ್ ಕೆಳಗಿಳಿಯುತ್ತಿದ್ದಂತೆ ಅಮೆರಿಕ ಮತ್ತು ಇಸ್ರೇಲ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಶುರುಮಾಡಿದೆ. ಸಿರಿಯಾದ ಪರಿಸ್ಥಿತಿಯ ಲಾಭ ಪಡೆದುಕೊಂಡು ಮರು ಸಂಘಟನೆಗೊಳ್ಳಲು  ಐಸಿಸ್‌ಗೆ ಅವಕಾಶ ನೀಡುವುದಿಲ್ಲ ಎಂದಿರುವ ಅಮೆರಿಕ ಸೋಮವಾರ (ಡಿ.9) ವೈಮಾನಿಕ ದಾಳಿ ನಡೆಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಬಿ-52, ಎಫ್‌-15 ಹಾಗೂ ಎ-10 ಬಾಂಬರ್ ವಿಮಾನಗಳನ್ನು ಬಳಸಿ ಐಸಿಸ್‌ನ 75 ನೆಲೆಗಳ ಮೇಲೆ ದಾಳಿ ನಡೆಸಿದೆ.

ಮತ್ತೊಂದೆಡೆ ಇಸ್ರೇಲ್ ಕೂಡ ರಾಜಧಾನಿ ಡಮಾಸ್ಕಸ್ ಸೇರಿದಂತೆ ಸಿರಿಯಾದಾದ್ಯಂತ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 100 ಕ್ಷಿಪಣಿಗಳನ್ನು ಇಸ್ರೇಲ್ ಹಾರಿಸಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...