Homeಮುಖಪುಟಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ...

ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

- Advertisement -
- Advertisement -

ಕಳೆದ ಭಾನುವಾರ (ಡಿ.8, 2024) ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದು ದೇಶ ಬಂಡುಕೋರರ (ಹೋರಾಟಗಾರರ) ವಶವಾದ ಬಳಿಕ, ಸಿರಿಯಾ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಮಧ್ಯಂತರ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ.

ಕೆಲ ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ಬಳಿಕ ನೋಬೆಲ್ ಪುರಸ್ಕತ ಮುಹಮ್ಮದ್ ಯೂನುಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಅದೇ ರೀತಿಯ ಬೆಳವಣಿಗೆ ಸಿರಿಯಾದಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಸ್ತುತ ಸಿರಿಯಾ ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಗುಂಪಿನ ವಶದಲ್ಲಿದೆ. ಭಯೋತ್ಪಾದಕ ಗುಂಪು ಅಲ್-ಖೈದಾ ಮತ್ತು ಮಿತ್ರ ಬಣಗಳ ಬೆಂಬಲಿತ ಈ ಗುಂಪನ್ನು ‘ಅಲ್-ನುಸ್ರಾ ಫ್ರಂಟ್’ ಎಂದೂ ಕರೆಯಲಾಗುತ್ತದೆ. ಬಂಡುಕೋರರ ಈ ಗುಂಪಿಗೆ ಸಿರಿಯಾದ ಪ್ರತಿಪಕ್ಷಗಳ ಬೆಂಬಲವೂ ಇದೆ ಎನ್ನಲಾಗಿದೆ.

ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಸೋಮವಾರ ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬಂಡುಕೋರರ ನಿಯಂತ್ರಣದಲ್ಲಿದ್ದ ಸಣ್ಣ ಪ್ರದೇಶವೊಂದರ ಆಡಳಿತ ನಡೆಸುತ್ತಿದ್ದ ಮೊಹಮ್ಮದ್ ಅಲ್ ಬಶೀರ್ ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಸಹಜ ಸ್ಥಿತಿಯತ್ತ ಸಿರಿಯಾ :

ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದ ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಹೇಳಿದ್ದಾರೆ.

ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಜಲಾಲಿ ತಿಳಿಸಿದ್ದಾರೆ.

ಸಿರಿಯಾ ಕರೆನ್ಸಿ ಮುಂದುವರಿಕೆ

ಸಿರಿಯಾದ ಬ್ಯಾಂಕ್‌ಗಳು ಮಂಗಳವಾರದಿಂದ ಪುನಃ ಕಾರ್ಯಾರಂಭ ಮಾಡಲಿವೆ. ಕಚೇರಿಗೆ ಹಿಂದಿರುಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಿರಿಯಾ ಕರೆನ್ಸಿ ಮುಂದುವರಿಯಲಿದೆ ಎಂದು ಸಿರಿಯಾ ಸೆಂಟ್ರಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇರಾಕ್ ಪ್ರವೇಶಿಸಿದ 4 ಸಾವಿರ ಸೈನಿಕರು

ಬಂಡುಕೋರರು ಅಥವಾ ಹೋರಾಟಗಾರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡ ಬಳಿಕ ಸಿರಿಯಾದ 4 ಸಾವಿರಕ್ಕೂ ಅಧಿಕ ಸೈನಿಕರು ಗಡಿದಾಟಿ ಇರಾಕ್ ಪ್ರವೇಶಿಸಿದ್ದಾರೆ ಎಂದು ಇರಾಕ್ ಸೇನಾ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಶಸ್ತ್ರ ಸಜ್ಜಿತ ವಾಹನಗಳೊಂದಿಗೆ ಸಿರಿಯಾದ ಸೈನಿಕರು ಇರಾಕ್ ಪ್ರವೇಶಿಸಿದ್ದಾರೆ. ಅವರನ್ನು ಶಿಬಿರಗಳಲ್ಲಿ ಇರಿಸಲಾಗುವುದು ಎಂದು ಇರಾಕ್‌ನ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಮಾಹಿತಿ ನೀಡಿವೆ.

ಮಾಸ್ಕೋದಲ್ಲಿ ಆಶ್ರಯ ಪಡೆದ ಅಸದ್, ಕುಟುಂಬ

ದೇಶ ಬಂಡುಕೋರರ ವಶವಾದ ಬಳಿಕ ಪಲಾಯನ ಮಾಡಿರುವ ಪದಚ್ಯುತ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ (ಪತ್ನಿ, ಮೂವರು ಮಕ್ಕಳು) ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಾನವೀಯ ನೆಲೆಯಲ್ಲಿ ಅಸದ್ ಮತ್ತು ಕುಟುಂಬಕ್ಕೆ ಆಶ್ರಯ ನೀಡಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿ ಶುರು ಮಾಡಿದ ಅಮೆರಿಕ, ಇಸ್ರೇಲ್

ಸಿರಿಯಾ ಅಧ್ಯಕ್ಷ ಸ್ಥಾನದಿಂದ ಬಶರ್ ಅಲ್ ಅಸಾದ್ ಕೆಳಗಿಳಿಯುತ್ತಿದ್ದಂತೆ ಅಮೆರಿಕ ಮತ್ತು ಇಸ್ರೇಲ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಶುರುಮಾಡಿದೆ. ಸಿರಿಯಾದ ಪರಿಸ್ಥಿತಿಯ ಲಾಭ ಪಡೆದುಕೊಂಡು ಮರು ಸಂಘಟನೆಗೊಳ್ಳಲು  ಐಸಿಸ್‌ಗೆ ಅವಕಾಶ ನೀಡುವುದಿಲ್ಲ ಎಂದಿರುವ ಅಮೆರಿಕ ಸೋಮವಾರ (ಡಿ.9) ವೈಮಾನಿಕ ದಾಳಿ ನಡೆಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಬಿ-52, ಎಫ್‌-15 ಹಾಗೂ ಎ-10 ಬಾಂಬರ್ ವಿಮಾನಗಳನ್ನು ಬಳಸಿ ಐಸಿಸ್‌ನ 75 ನೆಲೆಗಳ ಮೇಲೆ ದಾಳಿ ನಡೆಸಿದೆ.

ಮತ್ತೊಂದೆಡೆ ಇಸ್ರೇಲ್ ಕೂಡ ರಾಜಧಾನಿ ಡಮಾಸ್ಕಸ್ ಸೇರಿದಂತೆ ಸಿರಿಯಾದಾದ್ಯಂತ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 100 ಕ್ಷಿಪಣಿಗಳನ್ನು ಇಸ್ರೇಲ್ ಹಾರಿಸಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...