Homeಮುಖಪುಟಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ...

ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

- Advertisement -
- Advertisement -

ಕಳೆದ ಭಾನುವಾರ (ಡಿ.8, 2024) ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದು ದೇಶ ಬಂಡುಕೋರರ (ಹೋರಾಟಗಾರರ) ವಶವಾದ ಬಳಿಕ, ಸಿರಿಯಾ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಮಧ್ಯಂತರ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ.

ಕೆಲ ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ಬಳಿಕ ನೋಬೆಲ್ ಪುರಸ್ಕತ ಮುಹಮ್ಮದ್ ಯೂನುಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಅದೇ ರೀತಿಯ ಬೆಳವಣಿಗೆ ಸಿರಿಯಾದಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಸ್ತುತ ಸಿರಿಯಾ ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಗುಂಪಿನ ವಶದಲ್ಲಿದೆ. ಭಯೋತ್ಪಾದಕ ಗುಂಪು ಅಲ್-ಖೈದಾ ಮತ್ತು ಮಿತ್ರ ಬಣಗಳ ಬೆಂಬಲಿತ ಈ ಗುಂಪನ್ನು ‘ಅಲ್-ನುಸ್ರಾ ಫ್ರಂಟ್’ ಎಂದೂ ಕರೆಯಲಾಗುತ್ತದೆ. ಬಂಡುಕೋರರ ಈ ಗುಂಪಿಗೆ ಸಿರಿಯಾದ ಪ್ರತಿಪಕ್ಷಗಳ ಬೆಂಬಲವೂ ಇದೆ ಎನ್ನಲಾಗಿದೆ.

ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಸೋಮವಾರ ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬಂಡುಕೋರರ ನಿಯಂತ್ರಣದಲ್ಲಿದ್ದ ಸಣ್ಣ ಪ್ರದೇಶವೊಂದರ ಆಡಳಿತ ನಡೆಸುತ್ತಿದ್ದ ಮೊಹಮ್ಮದ್ ಅಲ್ ಬಶೀರ್ ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಸಹಜ ಸ್ಥಿತಿಯತ್ತ ಸಿರಿಯಾ :

ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದ ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಹೇಳಿದ್ದಾರೆ.

ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಜಲಾಲಿ ತಿಳಿಸಿದ್ದಾರೆ.

ಸಿರಿಯಾ ಕರೆನ್ಸಿ ಮುಂದುವರಿಕೆ

ಸಿರಿಯಾದ ಬ್ಯಾಂಕ್‌ಗಳು ಮಂಗಳವಾರದಿಂದ ಪುನಃ ಕಾರ್ಯಾರಂಭ ಮಾಡಲಿವೆ. ಕಚೇರಿಗೆ ಹಿಂದಿರುಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಿರಿಯಾ ಕರೆನ್ಸಿ ಮುಂದುವರಿಯಲಿದೆ ಎಂದು ಸಿರಿಯಾ ಸೆಂಟ್ರಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇರಾಕ್ ಪ್ರವೇಶಿಸಿದ 4 ಸಾವಿರ ಸೈನಿಕರು

ಬಂಡುಕೋರರು ಅಥವಾ ಹೋರಾಟಗಾರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡ ಬಳಿಕ ಸಿರಿಯಾದ 4 ಸಾವಿರಕ್ಕೂ ಅಧಿಕ ಸೈನಿಕರು ಗಡಿದಾಟಿ ಇರಾಕ್ ಪ್ರವೇಶಿಸಿದ್ದಾರೆ ಎಂದು ಇರಾಕ್ ಸೇನಾ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಶಸ್ತ್ರ ಸಜ್ಜಿತ ವಾಹನಗಳೊಂದಿಗೆ ಸಿರಿಯಾದ ಸೈನಿಕರು ಇರಾಕ್ ಪ್ರವೇಶಿಸಿದ್ದಾರೆ. ಅವರನ್ನು ಶಿಬಿರಗಳಲ್ಲಿ ಇರಿಸಲಾಗುವುದು ಎಂದು ಇರಾಕ್‌ನ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಮಾಹಿತಿ ನೀಡಿವೆ.

ಮಾಸ್ಕೋದಲ್ಲಿ ಆಶ್ರಯ ಪಡೆದ ಅಸದ್, ಕುಟುಂಬ

ದೇಶ ಬಂಡುಕೋರರ ವಶವಾದ ಬಳಿಕ ಪಲಾಯನ ಮಾಡಿರುವ ಪದಚ್ಯುತ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ (ಪತ್ನಿ, ಮೂವರು ಮಕ್ಕಳು) ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಾನವೀಯ ನೆಲೆಯಲ್ಲಿ ಅಸದ್ ಮತ್ತು ಕುಟುಂಬಕ್ಕೆ ಆಶ್ರಯ ನೀಡಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿ ಶುರು ಮಾಡಿದ ಅಮೆರಿಕ, ಇಸ್ರೇಲ್

ಸಿರಿಯಾ ಅಧ್ಯಕ್ಷ ಸ್ಥಾನದಿಂದ ಬಶರ್ ಅಲ್ ಅಸಾದ್ ಕೆಳಗಿಳಿಯುತ್ತಿದ್ದಂತೆ ಅಮೆರಿಕ ಮತ್ತು ಇಸ್ರೇಲ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಶುರುಮಾಡಿದೆ. ಸಿರಿಯಾದ ಪರಿಸ್ಥಿತಿಯ ಲಾಭ ಪಡೆದುಕೊಂಡು ಮರು ಸಂಘಟನೆಗೊಳ್ಳಲು  ಐಸಿಸ್‌ಗೆ ಅವಕಾಶ ನೀಡುವುದಿಲ್ಲ ಎಂದಿರುವ ಅಮೆರಿಕ ಸೋಮವಾರ (ಡಿ.9) ವೈಮಾನಿಕ ದಾಳಿ ನಡೆಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಬಿ-52, ಎಫ್‌-15 ಹಾಗೂ ಎ-10 ಬಾಂಬರ್ ವಿಮಾನಗಳನ್ನು ಬಳಸಿ ಐಸಿಸ್‌ನ 75 ನೆಲೆಗಳ ಮೇಲೆ ದಾಳಿ ನಡೆಸಿದೆ.

ಮತ್ತೊಂದೆಡೆ ಇಸ್ರೇಲ್ ಕೂಡ ರಾಜಧಾನಿ ಡಮಾಸ್ಕಸ್ ಸೇರಿದಂತೆ ಸಿರಿಯಾದಾದ್ಯಂತ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 100 ಕ್ಷಿಪಣಿಗಳನ್ನು ಇಸ್ರೇಲ್ ಹಾರಿಸಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...