Homeಮುಖಪುಟಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ...

ಸಿರಿಯಾ | ಮಧ್ಯಂತರ ಸರ್ಕಾರ ರಚನೆಗೆ ಕಸರತ್ತು : ಮಾಸ್ಕೋದಲ್ಲಿ ಆಶ್ರಯ ಪಡೆದ ಪದಚ್ಯುತ ಅಧ್ಯಕ್ಷ ಅಸದ್

- Advertisement -
- Advertisement -

ಕಳೆದ ಭಾನುವಾರ (ಡಿ.8, 2024) ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದು ದೇಶ ಬಂಡುಕೋರರ (ಹೋರಾಟಗಾರರ) ವಶವಾದ ಬಳಿಕ, ಸಿರಿಯಾ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಮಧ್ಯಂತರ ಸರ್ಕಾರ ರಚನೆ ಕಸರತ್ತು ಗರಿಗೆದರಿದೆ.

ಕೆಲ ತಿಂಗಳ ಹಿಂದೆ ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಉಂಟಾಗಿ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ಬಳಿಕ ನೋಬೆಲ್ ಪುರಸ್ಕತ ಮುಹಮ್ಮದ್ ಯೂನುಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ. ಅದೇ ರೀತಿಯ ಬೆಳವಣಿಗೆ ಸಿರಿಯಾದಲ್ಲಿ ನಡೆಯುವ ಸಾಧ್ಯತೆ ಇದೆ.

ಪ್ರಸ್ತುತ ಸಿರಿಯಾ ಹಯಾತ್ ತಹ್ರೀರ್ ಅಲ್-ಶಾಮ್ ಎಂಬ ಗುಂಪಿನ ವಶದಲ್ಲಿದೆ. ಭಯೋತ್ಪಾದಕ ಗುಂಪು ಅಲ್-ಖೈದಾ ಮತ್ತು ಮಿತ್ರ ಬಣಗಳ ಬೆಂಬಲಿತ ಈ ಗುಂಪನ್ನು ‘ಅಲ್-ನುಸ್ರಾ ಫ್ರಂಟ್’ ಎಂದೂ ಕರೆಯಲಾಗುತ್ತದೆ. ಬಂಡುಕೋರರ ಈ ಗುಂಪಿಗೆ ಸಿರಿಯಾದ ಪ್ರತಿಪಕ್ಷಗಳ ಬೆಂಬಲವೂ ಇದೆ ಎನ್ನಲಾಗಿದೆ.

ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಸೋಮವಾರ ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಬಂಡುಕೋರರ ನಿಯಂತ್ರಣದಲ್ಲಿದ್ದ ಸಣ್ಣ ಪ್ರದೇಶವೊಂದರ ಆಡಳಿತ ನಡೆಸುತ್ತಿದ್ದ ಮೊಹಮ್ಮದ್ ಅಲ್ ಬಶೀರ್ ಅವರು ಮಧ್ಯಂತರ ಸರ್ಕಾರದ ನೇತೃತ್ವ ವಹಿಸುವ ಸಾಧ್ಯತೆ ಇದೆ.

ಸಹಜ ಸ್ಥಿತಿಯತ್ತ ಸಿರಿಯಾ :

ಅಧ್ಯಕ್ಷ ಬಶರ್ ಅಲ್ ಅಸಾದ್ ಪಲಾಯನಗೈದ ಬಳಿಕ ದೇಶ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಶೀಘ್ರದಲ್ಲೇ ಮಧ್ಯಂತರ ಸರ್ಕಾರ ರಚನೆ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಹೇಳಿದ್ದಾರೆ.

ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಜಲಾಲಿ ತಿಳಿಸಿದ್ದಾರೆ.

ಸಿರಿಯಾ ಕರೆನ್ಸಿ ಮುಂದುವರಿಕೆ

ಸಿರಿಯಾದ ಬ್ಯಾಂಕ್‌ಗಳು ಮಂಗಳವಾರದಿಂದ ಪುನಃ ಕಾರ್ಯಾರಂಭ ಮಾಡಲಿವೆ. ಕಚೇರಿಗೆ ಹಿಂದಿರುಗುವಂತೆ ಸಿಬ್ಬಂದಿಗೆ ಸೂಚಿಸಲಾಗಿದೆ. ಸಿರಿಯಾ ಕರೆನ್ಸಿ ಮುಂದುವರಿಯಲಿದೆ ಎಂದು ಸಿರಿಯಾ ಸೆಂಟ್ರಲ್ ಬ್ಯಾಂಕ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇರಾಕ್ ಪ್ರವೇಶಿಸಿದ 4 ಸಾವಿರ ಸೈನಿಕರು

ಬಂಡುಕೋರರು ಅಥವಾ ಹೋರಾಟಗಾರರು ರಾಜಧಾನಿ ಡಮಾಸ್ಕಸ್ ಅನ್ನು ವಶಪಡಿಸಿಕೊಂಡ ಬಳಿಕ ಸಿರಿಯಾದ 4 ಸಾವಿರಕ್ಕೂ ಅಧಿಕ ಸೈನಿಕರು ಗಡಿದಾಟಿ ಇರಾಕ್ ಪ್ರವೇಶಿಸಿದ್ದಾರೆ ಎಂದು ಇರಾಕ್ ಸೇನಾ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು ಶಸ್ತ್ರ ಸಜ್ಜಿತ ವಾಹನಗಳೊಂದಿಗೆ ಸಿರಿಯಾದ ಸೈನಿಕರು ಇರಾಕ್ ಪ್ರವೇಶಿಸಿದ್ದಾರೆ. ಅವರನ್ನು ಶಿಬಿರಗಳಲ್ಲಿ ಇರಿಸಲಾಗುವುದು ಎಂದು ಇರಾಕ್‌ನ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಮಾಹಿತಿ ನೀಡಿವೆ.

ಮಾಸ್ಕೋದಲ್ಲಿ ಆಶ್ರಯ ಪಡೆದ ಅಸದ್, ಕುಟುಂಬ

ದೇಶ ಬಂಡುಕೋರರ ವಶವಾದ ಬಳಿಕ ಪಲಾಯನ ಮಾಡಿರುವ ಪದಚ್ಯುತ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ (ಪತ್ನಿ, ಮೂವರು ಮಕ್ಕಳು) ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಾನವೀಯ ನೆಲೆಯಲ್ಲಿ ಅಸದ್ ಮತ್ತು ಕುಟುಂಬಕ್ಕೆ ಆಶ್ರಯ ನೀಡಿದ್ದೇವೆ ಎಂದು ರಷ್ಯಾ ಅಧ್ಯಕ್ಷರ ಕಚೇರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ದಾಳಿ ಶುರು ಮಾಡಿದ ಅಮೆರಿಕ, ಇಸ್ರೇಲ್

ಸಿರಿಯಾ ಅಧ್ಯಕ್ಷ ಸ್ಥಾನದಿಂದ ಬಶರ್ ಅಲ್ ಅಸಾದ್ ಕೆಳಗಿಳಿಯುತ್ತಿದ್ದಂತೆ ಅಮೆರಿಕ ಮತ್ತು ಇಸ್ರೇಲ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಶುರುಮಾಡಿದೆ. ಸಿರಿಯಾದ ಪರಿಸ್ಥಿತಿಯ ಲಾಭ ಪಡೆದುಕೊಂಡು ಮರು ಸಂಘಟನೆಗೊಳ್ಳಲು  ಐಸಿಸ್‌ಗೆ ಅವಕಾಶ ನೀಡುವುದಿಲ್ಲ ಎಂದಿರುವ ಅಮೆರಿಕ ಸೋಮವಾರ (ಡಿ.9) ವೈಮಾನಿಕ ದಾಳಿ ನಡೆಸಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ ಪಡೆಗಳು ಬಿ-52, ಎಫ್‌-15 ಹಾಗೂ ಎ-10 ಬಾಂಬರ್ ವಿಮಾನಗಳನ್ನು ಬಳಸಿ ಐಸಿಸ್‌ನ 75 ನೆಲೆಗಳ ಮೇಲೆ ದಾಳಿ ನಡೆಸಿದೆ.

ಮತ್ತೊಂದೆಡೆ ಇಸ್ರೇಲ್ ಕೂಡ ರಾಜಧಾನಿ ಡಮಾಸ್ಕಸ್ ಸೇರಿದಂತೆ ಸಿರಿಯಾದಾದ್ಯಂತ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಸುಮಾರು 100 ಕ್ಷಿಪಣಿಗಳನ್ನು ಇಸ್ರೇಲ್ ಹಾರಿಸಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ : ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...